ಮೈಸೂರಿನಲ್ಲಿ ಈ ಶನಿವಾರ 'ರಬ್ಡಿ' ನಾಟಕ ಪ್ರದರ್ಶನ
ಮೈಸೂರು, ಜೂನ್ 13: ರಂಗವರ್ತುಲ ರಂಗ ತಂಡ ಪ್ರಸ್ತುತಪಡಿಸುವ ರಾಷ್ಟ್ರ ಪ್ರಶಸ್ತಿ ವಿಜೇತ 'ರಬ್ಡಿ' ಕನ್ನಡ ಹಾಸ್ಯ ನಾಟಕವು ಇದೇ ಜೂನ್ 15, ಶನಿವಾರದಂದು ಮೈಸೂರಿನಲ್ಲಿ ಪ್ರದರ್ಶನಗೊಳ್ಳಲಿದೆ.
ಹಲವಾರು ಯಶಸ್ವೀ ಪ್ರಯೋಗಗಳ ಬೆನ್ನಲ್ಲೇ ರಂಗ ವರ್ತುಲ ರಂಗತಂಡ, 'ರಬ್ಡಿ' ನಾಟಕದ 53ನೇ ಪ್ರಯೋಗವನ್ನು ಇದೇ ಮೊದಲ ಬಾರಿಗೆ ಮೈಸೂರಿನ ರಂಗಾಸಕ್ತರಿಗೆ ಹೊತ್ತುತಂದಿದೆ.
ಮಣ್ಣು ಜಲ್ಲಿ ಹೊತ್ತು ಜೀವನ ಸಾಗಿಸುವ ಸಾವಂತ್ರಿ ಮತ್ತವಳ ಬುದ್ಧಿಮಾಂದ್ಯ ಅಂಗವಿಕಲ ಮಗಳು ಪುಟ್ಟಕ್ಕನ ಸುತ್ತ ರಬ್ಡಿ ಬೆಳೆಯುತ್ತಾ ಸಾಗುತ್ತದೆ. ಪುಟ್ಟಕ್ಕನ ಭವಿಷ್ಯದಲ್ಲಿ ತಾನು ಕಾಣುವ ಕನಸುಗಳು ನನಸಾಗಲು ಸಾಧ್ಯವಿಲ್ಲವೆಂಬ ಅರಿವಿದ್ದರೂ, ಛಲಬಿಡದೆ ಆ ಕನಸುಗಳ ಬೆನ್ನೇರಿ ಮುನ್ನುಗ್ಗುವ ಸಾವಂತ್ರಿಯ ಬದುಕ ಪ್ರೀತಿಸುವ ಬಗೆ ಮಾದರಿಯಾಗಿ ನಿಲ್ಲುತ್ತದೆ.

ಪುಟ್ಟಕ್ಕನನ್ನು ವಿಶೇಷ ಶಾಲೆಗೆ ಸೇರಿಸುವ ಸಲುವಾಗಿ, ಅದಕ್ಕೆ ತಗುಲುವ ವೆಚ್ಚ ಭರಿಸಲು ಓರ್ವ ಐಟಿ ಉದ್ಯೋಗಿ ದಂಪತಿಗಳಿಗೆ ಬಾಡಿಗೆ ತಾಯಿಯಾಗಲು ಸಾವಂತ್ರಿ ಮುಂದಾಗುತ್ತಾಳೆ. ನೈಸರ್ಗಿಕ ಹಾಗು ಪ್ರಾಕೃತಿಕ ಕ್ರಿಯೆಗಳ ವಿರುದ್ಧದ ಮನುಷ್ಯನ ಸೆಣೆಸಾಟ, ತಾಯಿ-ಮಗು ನಡುವಣ ಅವಿನಾಭಾವ ಸಂಬಂಧ ಹಾಗು ತಾಯ್ತನದ ಸೂಕ್ಷ್ಮ ಸಂವೇದನೆಗಳ ಸುತ್ತಾ ರಬ್ಡಿ ತನ್ನನ್ನ ತಾನು ವಿಸ್ತರಿಸಿಕೊಳ್ಳುತ್ತಾ ಸಾಗುತ್ತದೆ. ಬಾಡಿಗೆ ತಾಯಿಯ ಮೂಲಕ ಮಗುವನ್ನು ಪಡೆಯುವ ಆ ಐಟಿ ಉದ್ಯೋಗಿ ದಂಪತಿಗಳ ಪ್ರಯತ್ನ ಸಫಲವಾಗುವುದೆ? ಸಾವಂತ್ರಿಯು ಆ ದಂಪತಿಗಳಿಗೆ ಮಗು ಹೆತ್ತು ಕೊಡುವಳೇ ? ಸಾವಂತ್ರಿಯ ಕನಸುಗಳು ನನಸಾಗುವುದೆ ? ಇವೆಲ್ಲವೂ ನಾಟಕದಲ್ಲಿ ಸೂಕ್ಷ್ಮವಾಗಿ ಮಿಳಿತಗೊಂಡ ಅಂಶಗಳು.
ನಾಟಕದ ಹೆಸರು: ರಬ್ಡಿ
ರಚನೆ - ನೌಶೀಲ್ ಮೆಹ್ತಾ, ನಿತೀಶ್ ಶ್ರೀಧರ್ ಹಾಗು ಹೇಮಲತಾ ಲೋಕೇಶ್
ನಿರ್ದೇಶನ : ನಿತೀಶ್ ಶ್ರೀಧರ್
ಅಭಿನಯಿಸುವ ತಂಡ : ರಂಗ ವರ್ತುಲ
ಸಂಗೀತ: ರಘುನಂದನ್ ರಾಮಕೃಷ್ಣ
ದಿನಾಂಕ ಮತ್ತು ಸಮಯ : ಜೂನ್ 15, 2019, ಶನಿವಾರ ಸಂಜೆ 7:00
ಸ್ಥಳ : ಕಿರು ರಂಗಮಂದಿರ, ಕಲಾಮಂದಿರ, ಮೈಸೂರು
ಟಿಕೆಟ್ ಮುಂಗಡ ಕಾಯ್ದಿರಿಸುವಿಕೆಗೆ : 7349574448
-
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ












Click it and Unblock the Notifications