ರಂಗಾಯಣ ಕಲಾವಿದ ಮಂಜುನಾಥ್ ಬೆಳೆಕೆರೆ ಇನ್ನಿಲ್ಲ

ಮೈಸೂರು, ಡಿಸೆಂಬರ್. 19 : ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ರಂಗಾಯಣ ಕಲಾವಿದ ಮಂಜುನಾಥ್ ಬೆಳೆಕೆರೆ (52) ಸೋಮವಾರ ಬೆಳಗ್ಗೆ ಮೈಸೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಕೊನೆಯುಸಿರೆಳೆದಿದ್ದಾರೆ.

ಹರಿಹರದ ಮೂಲದವರಾದ ಮಂಜುನಾಥ್ ಅವರು, 1989ರಿಂದಲೂ ರಂಗಾಯಣದಲ್ಲಿ ಸಕ್ರಿಯ ಕಲಾವಿದರಾಗಿದ್ದರು. ನಾಟಕ ರಚನೆ, ನಿರ್ದೇಶನ ಮತ್ತು ಅಭಿನಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಬಿ.ವಿ.ಕಾರಂತ ಸೇರಿದಂತೆ ಕಲಾವಿದರ ಜೊತೆ ಒಡನಾಟವನ್ನಿಟ್ಟುಕೊಂಡಿದ್ದರು.

Rangayana actor Manjunath Belakere passes away in Mysuru hospital

ಬಂದೂಕು ಕಳ್ಳನ ಸೆರೆ: ಬಂದೂಕು ಕಳವು ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ರಾಮಾಪುರ ಠಾಣಾ ಪೊಲೀಸರು ಮಾಲು ಸಮೇತ ಬಂಧಿಸಿದ್ದಾರೆ.

ಕರೆದೊಡ್ಡಿ ನಿವಾಸಿಯಾಗಿರುವ ಮಾದೇಶ್ ಅಲಿಯಾಸ್ ಮೂಸ(37) ಇತ್ತೀಚಿಗೆ ಮಹದೇಶ್ವರ ವನ್ಯಜೀವಿ ಧಾಮದಲ್ಲಿ ನಡೆದ ಕಳ್ಳಬೇಟೆ ತಡೆ ಶಿಬಿರದಿಂದ ಬಂದೂಕನ್ನು ಕದ್ದು ಪರಾರಿಯಾಗಿದ್ದ.

ಈತನೊಂದಿಗೆ ಶಾಮೀಲಾಗಿದ್ದ ಇನ್ನೊಬ್ಬ ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+