ಅದೃಷ್ಟ ಎಂದು ಅಪರೂಪದ ಕಂದು ಮೀನು ಗೂಬೆ ಮಾರಾಟ; ಮೂವರ ಬಂಧನ
ಮೈಸೂರು, ನವೆಂಬರ್ 21: ಬಹಳ ಅಪರೂಪದ ಪಕ್ಷಿಯಾಗಿರುವ ಕಂದು ಮೀನು ಗೂಬೆ (ಬ್ರೌನ್ ಫಿಶ್ ಔಲ್) ಅನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸಿದ ಮೂವರು ವ್ಯಕ್ತಿಗಳನ್ನು ದ್ವಿಚಕ್ರ ವಾಹನ ಸಮೇತ ಅರಣ್ಯ ಸಂಚಾರ ದಳದ ಸಿಬ್ಬಂದಿ ಬಂಧಿಸಿದ್ದಾರೆ.
ಶ್ರೀರಂಗಪಟ್ಟಣದ ಸಮೀಪ ಮೈಸೂರು-ಬೆಂಗಳೂರು ಹೆದ್ದಾರಿ ಬಳಿ ಶುಕ್ರವಾರ ಸಂಜೆ ಕಂದು ಮೀನು ಗೂಬೆಯನ್ನು ಮಾರಾಟ ಮಾಡಲು ಯತ್ನಿಸುತ್ತಿರುವುದು ಅರಣ್ಯ ಸಂಚಾರಿ ಸಿಬ್ಬಂದಿಗೆ ಕಂಡು ಬಂದಿದೆ. ಕೂಡಲೇ ಮಂಡ್ಯ ನಿವಾಸಿಗಳಾದ ಕುಮಾರ್, ಮಹಮ್ಮದ್ ರಫಿ, ಮದ್ದೂರಿನ ನಿವಾಸಿ ರಾಜೇಶ್ ಎಂಬುವರನ್ನು ಬಂಧಿಸಿದ್ದು, ಬಂಧಿತರಿಂದ ಒಂದು ಸ್ಕೂಟರ್ ವಶಪಡಿಸಿಕೊಂಡಿದ್ದಾರೆ.

ವನ್ಯ ಜೀವಿ ಸಂರಕ್ಷಣಾ ಕಾಯ್ದೆಯನ್ವಯ ವನ್ಯ ಜೀವಿಗಳ ಸಾಕುವಿಕೆ, ಮಾರಾಟ ಮಾಡುವುದು ದಂಡಾರ್ಹ ಅಪರಾಧ. ಆದರೆ ಈ ಮೂವರು ಆಸಕ್ತರ ಬಳಿ ಹೆಚ್ಚಿನ ಹಣಕ್ಕಾಗಿ ಗೂಬೆಯನ್ನು ಮಾರುತ್ತಿದ್ದರು ಎಂಬುದು ಪ್ರಾಥಮಿಕ ವಿಚಾರಣೆ ವೇಳೆ ತಿಳಿದು ಬಂದಿದೆ. ಗೂಬೆಯನ್ನು ಮನೆಯಲ್ಲಿಟ್ಟು ಸಾಕಿದರೆ ಅದೃಷ್ಟ ಖುಲಾಯಿಸುತ್ತದೆ ಎಂದು ಆರೋಪಿಗಳು ಖರೀದಿ ಮಾಡುವವರ ಮನವೊಲಿಸಲು ಯತ್ನಿಸುತ್ತಿದ್ದರು ಎಂದು ತಿಳಿದುಬಂದಿದೆ. ಮೊಕದ್ದಮೆ ದಾಖಲಿಸಿಕೊಂಡಿರುವ ಅರಣ್ಯ ಇಲಾಖೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
-
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ












Click it and Unblock the Notifications