ರಥಸಪ್ತಮಿಗೆ ಮದುವಣಗಿತ್ತಿಯಂತೆ ಸಿಂಗಾರಗೊಂಡ ಅರಮನೆ.!
ಮೈಸೂರು, ಫೆಬ್ರವರಿ 3 : ಮೈಸೂರು ಅರಮನೆ ಆವರಣದಲ್ಲಿ ರಥ ಸಪ್ತಮಿ ಪ್ರಯುಕ್ತ ಇಂದು(ಫೆ.3) ವಿವಿಧ ದೇವಾಲಯಗಳ ಉತ್ಸವ ಮೂರ್ತಿಗಳನ್ನು ಸಾರ್ವಜನಿಕರ ದರ್ಶನಕ್ಕೆ ಇರಿಸಲಾಗಿತ್ತು. ವಿಶೇಷ ಪೂಜಾಕೈಂಕರ್ಯಗಳು ಜರುಗಿದವು.
ಇಂದು ಬೆಳಗಿನ ಜಾವ 6 ಗಂಟೆಯಿಂದಲೇ ಅರಮನೆ ಆವರಣದಲ್ಲಿ ಶ್ರೀ ಭುವನೇಶ್ವರಿ, ಶ್ರೀ ತ್ರಿನೇಶ್ವರ ಸ್ವಾಮಿ ಶ್ರೀ ಲಕ್ಷ್ಮಿರಮಣ ಸ್ವಾಮಿ, ಶ್ರೀ ಮಹಾಲಕ್ಷ್ಮಿ ದೇವಿ, ಶ್ರೀ ಪ್ರಸನ್ನ ಕೃಷ್ಣ, ಶ್ರೀ ವೇದವರಹಸ್ವಾಮಿ, ಶ್ರೀ ಖಿಲ್ಲೆ ವೆಂಕಟರಮಣಸ್ವಾಮಿ, ಹಾಗೂ ಶ್ರೀ ಗಾಯಿತ್ರಿ ಅಮ್ಮನವರ ಉತ್ಸವ ಮೂರ್ತಿಗಳನ್ನು ಸಾರ್ವಜನಿಕರ ದರ್ಶನಕ್ಕೆ ಕರೆತರಲಾಗಿತ್ತು. ಸೂರ್ಯ ಜನ್ಮದಿನ ಹಾಗೂ ಸೂರ್ಯ ಸಪ್ತಾಶ್ವದ ರಥ ಏರುವ ದಿನವಾದ ಇಂದು ಎಲ್ಲ ದೇವರಿಗೂ ವಿಶೇಷ ಪೂಜೆಗಳು ನಡೆದವು.[ರಥಸಪ್ತಮಿ : ಸಪ್ತಕುದುರೆಗಳ ರಥವೇರುವ ಸೂರ್ಯನಿಗೆ ನಮಸ್ಕಾರ]

ಸಪ್ತಮಿ ತಿಥಿಯ ಅಧಿದೇವತೆ ಸೂರ್ಯ, ಈ ದಿನ ಸಪ್ತಾಶ್ವದ ರಥವೇರಿ ಉತ್ತರ ದಿಕ್ಕಿಗೆ ಚಲಿಸುತ್ತಾನೆ. ಉತ್ತರಾಯಣದಲ್ಲಿ ಸೂರ್ಯ ತನ್ನ ಪಥ ಬದಲಾಯಿಸುವುದರಿಂದ ಬಿಸಿಲಿನ ಪ್ರಕರತೆ ಹೆಚ್ಚಾಗುತ್ತದೆ. ರೋಗಾಣುಗಳನ್ನು ನಾಶ ಪಡಿಸುವ ಶಕ್ತಿ ಸೂರ್ಯನ ಕಿರಣಗಳಲ್ಲಿದೆ. ರೋಗ ನಿವಾರಣ, ದೇಹದಾಢ್ಯ ಹಾಗೂ ಆರೋಗ್ಯ ಬಯಸುವವರು ಸೂರ್ಯ ಆರಾಧನೆಯನ್ನು ಮಾಡಿದರೆ ಗುಣಮುಕ್ತರಾಗುತ್ತಾರೆ ಎಂದು ಅರಮನೆ ಪುರೋಹಿತ ರಾಘವನ್ ತಿಳಿಸಿದರು.

ರಾಜ ಮಹಾರಾಜರುಗಳು ಈ ರಥಸಪ್ತಮಿ ಶುಭದಿನದಂದು ಅರಮನೆ ಆವರಣದಲ್ಲಿರುವ 8 ದೇವಾಲಯಗಳ ಉತ್ಸವ ಮೂರ್ತಿಗಳನ್ನು ಅರಮನೆ ಆವರಣದಲ್ಲಿ ಇರಿಸಿ ವಿಶೇಷ ಪೂಜೆ ನಂತರ ಸಾರ್ವಜನಿಕರ ದರ್ಶನಕ್ಕೆ ಅವಕಾಶ ನೀಡುತ್ತಿದ್ದರು. ಆ ಸಂಪ್ರದಾಯ ಇಂದಿಗೂ ಸಹ ಮುಂದುವರಿದಿದೆ ಎಂದು ವ್ಯವಸ್ಥಾಪಕ ಗೋವಿಂದರಾಜು ತಿಳಿಸಿದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications