ಮೈಸೂರು: ಪರಿಸರ ಸ್ನೇಹಿ ದೀಪಾವಳಿ ಆಚರಣೆಗಾಗಿ ರಥಯಾತ್ರೆ
ಮೈಸೂರು, ಅಕ್ಟೋಬರ್ 12 : ಬೆಳಕಿನ ಹಬ್ಬ ದೀಪಾವಳಿ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಪಟಾಕಿಯಿಂದಾಗುವ ಅನಾಹುತ ಮತ್ತು ಪರಿಸರ ಮಾಲಿನ್ಯದ ಬಗ್ಗೆ ಅರಿವು ಮೂಡಿಸುವ ಸಲುವಾಗಿಯೇ 'ಪರಿಸರದ ಪಥದೆಡೆಗೆ ದೀಪಾವಳಿ' ರಥಕ್ಕೆ ಚಾಲನೆ ನೀಡಿದ್ದು, ಈ ರಥ ಅ.16ರವರೆಗೆ ವಿವಿಧೆಡೆ ಸಂಚರಿಸಲಿದೆ.
ದೀಪಾವಳಿ ಹಬ್ಬ ಬರುತ್ತಿರುವ ಹಿನ್ನಲೆಯಲ್ಲಿ ಮೈಸೂರು ಸೈನ್ಸ್ ಫೌಂಡೇಷನ್ ಹಾಗೂ ಬನ್ನೂರು ರೋಟರಿ ಸಂಸ್ಥೆಯ ವತಿಯಿಂದ ಈ ರಥಯಾತ್ರೆ ನಡೆಯುತ್ತಿದ್ದು, ಇಂದು ಬನ್ನೂರಿನ ರೋಟರಿ ಶಾಲೆಯಲ್ಲಿ ಪುರಸಭೆಯ ಕಾರ್ಯನಿರ್ವಹಣಾಧಿಕಾರಿ ಗಂಗಾಧರ್ ಅವರು ರಥಕ್ಕೆ ಚಾಲನೆ ನೀಡಿದರು.

ಬಳಿಕ ಮಾತನಾಡಿ ಅವರು, "ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅನೇಕ ಪರಿಸರ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿವೆ. ಆದರೆ, ಅವು ಯಶಸ್ವಿಗೊಳ್ಳ ಬೇಕಾದರೆ ಮೊದಲಿಗೆ ಮಕ್ಕಳನ್ನು ತಲುಪಬೇಕು. ಆ ನಿಟ್ಟಿನಲ್ಲಿ ಈ ರಥವು ಅತ್ಯಂತ ಪರಿಣಾಮಕಾರಿಯಾಗಲಿದೆ" ಎಂದರು..
ರೋಟರಿ ಸಂಸ್ಥೆಯ ಅಧ್ಯಕ್ಷರಾದ ಬಿ.ಎಸ್.ಯೋಗೇಂದ್ರ ಮಾತನಾಡಿ, ಜಾಗೃತಿ ಕಾರ್ಯಕ್ರಮ ಮಕ್ಕಳಲ್ಲಿ ಹೆಚ್ಚಿನ ಪರಿಣಾಮ ಬೀರುತ್ತವೆ. ಸುಪ್ರೀಂಕೋರ್ಟ್ ದೆಹಲಿಯಲ್ಲಿ ಪಟಾಕಿಯನ್ನು ನಿಷೇಧಿಸಿದೆ. ಅದರಂತೆ ಎಲ್ಲಾ ಸರ್ಕಾರಗಳು ಪಟಾಕಿ ನಿಷೇಧಿಸಬೇಕು ಎಂದು ಮನವಿ ಮಾಡಿದರು.
ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳು ಪಟಾಕಿ ಹೊಡೆಯುವುದಿಲ್ಲವೆಂದು ಪ್ರತಿಜ್ಞೆ ಸ್ವೀಕರಿಸಿದರು. ಮೈಸೂರ್ ಸೈನ್ಸ್ ಫೌಂಡೇಷನ್ ಕಾರ್ಯದರ್ಶಿ ಜಿ.ಬಿ.ಸಂತೋಷ್ಕುಮಾರ್ ಅವರು ಮಕ್ಕಳಿಗೆ ಪ್ರತಿಜ್ಞಾವಿಧಿಯನ್ನು ಬೋಧಿಸಿದರು.

ಪರಿಸರದ ಪಥದೆಡೆಗೆ ದೀಪಾವಳಿ ರಥವು ಬನ್ನೂರು ಮತ್ತು ತಿ.ನರಸಿಪುರದ ಸುತ್ತಮುತ್ತಲಿನ ಎಲ್ಲ ಶಾಲೆಗಳಿಗೆ ತೆರಳಿ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಕೆಲಸ ಮಾಡಲಿದೆ.
ಅಲ್ಲದೆ, ಇದೇ ವೇಳೆ ಪಟಾಕಿ ಸಿಡಿಸುವುದರಿಂದ ಆಗುವ ಅನಾಹುತಗಳ ಕುರಿತು ಮಾಹಿತಿ ಹಾಗೂ ದೀಪಾವಳಿಯನ್ನು ಹೇಗೆ ಪರಿಸರ ಸ್ನೇಹಿಯಾಗಿ ಆಚರಿಸಬೇಕೆಂಬುದರ ಬಗ್ಗೆ ಕರಪತ್ರವನ್ನು ಹಂಚಲಾಗುತ್ತದೆ.
ಈ ರಥದಲ್ಲಿ ಧ್ವನಿವರ್ಧಕ ಅಳವಡಿಸಿದ್ದು ಅದರಲ್ಲಿ ದೀಪಾವಳಿಯ ಹಿನ್ನಲೆ ಮತ್ತು ಆಚರಣೆ ಕುರಿತು ಮುದ್ರಿಸಿದ ಧ್ವನಿಯನ್ನು ಬಿತ್ತರಿಸಲಾಗುತ್ತದೆ. ಅಲ್ಲದೆ ವಿವಿಧ ಶಾಲೆ ಕಾಲೇಜುಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಸಂಚರಿಸಿ ಜಾಗೃತಿ ಮೂಡಿಸಲಿದೆ.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು












Click it and Unblock the Notifications