ಮಗುವಿಗೆ ಗ್ಯಾಸ್ಟ್ರೋಎಂಟಾರಾಲಜಿ ಶಸ್ತ್ರಚಿಕಿತ್ಸೆ ಯಶಸ್ವಿ: ಜಾಗತಿಕ ದಾಖಲೆ
ಮೈಸೂರು, ಡಿಸೆಂಬರ್ 28 : ಮಕ್ಕಳಲ್ಲಿ ಅಪರೂಪವೆನ್ನಿಸುವ ಮೇದೋಜೀರಕಾಂಗದ ನಾಳಕ್ಕೆ ಕೃತಕ ನಾಳ ಅಳವಡಿಸುವ ಗ್ಯಾಸ್ಟ್ರೋಎಂಟಾರಾಲಜಿ ಶಸ್ತ್ರಚಿಕಿತ್ಸೆಯನ್ನು ಜೆಎಸ್ ಎಸ್ ಆಸ್ಪತ್ರೆಯ ತಜ್ಞ ವೈದ್ಯರ ತಂಡವು ಯಶಸ್ವಿಯಾಗಿ ನಡೆಸಿ ಜಾಗತಿಕ ದಾಖಲೆ ಬರೆದಿದ್ದಾರೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಎಂ.ಗುರುಸ್ವಾಮಿ ತಿಳಿಸಿದರು.
ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಗುಂಡ್ಲುಪೇಟೆಯ ರಂಗನಾಥಪುರದ ರಮೇಶ್ ಎಂಬುವವರ ಪುತ್ರ ಅಭಿಷೇಕ್ (5) ನಿಶಕ್ತಿ ಹಾಗೂ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ. ಆತನ ಪರೀಕ್ಷೆ ನಡೆಸಿದ ವೈದ್ಯರು ರೋಗಿಗೆ ಮೇದೋಜೀರಕಾಂಗದ ನಾಳದಿಂದ ದ್ರವ ಸೋರಿಕೆಯಾಗಿ ಬಲಭಾಗದ ಎದೆಗೂಡಿನ ಪೊರೆಯಲ್ಲಿ ಸಂಗ್ರಹವಾಗಿರುವುದು ದೃಢಪಟ್ಟಿದ್ದು, ಇದು ಮಕ್ಕಳಲ್ಲಿ ತೀರ ಅಪರೂಪವಾಗಿ ಕಂಡು ಬರುವ ಕಾಯಿಲೆ ಎಂದು ತಿಳಿಸಿದರು.[ಬೆಂಗಳೂರಿನ ಆಸ್ಪತ್ರೆಯಲ್ಲಿ ಪಾಕ್ ಪುಟಾಣಿಗೆ ಮರುಜನ್ಮ]

ಇಂತಹ ಕ್ಲಿಷ್ಟಕರ ಶಸ್ತ್ರ ಚಿಕಿತ್ಸೆಯನ್ನು ಡಿ.21ರಂದು ಜೆಎಸ್ಎಸ್ ಆಸ್ಪತ್ರೆಯ ಗ್ಯಾಸ್ಟ್ರೋಎಂಟಾರಾಲಜಿ ಮತ್ತು ಲಿವರ್ ಚಿಕಿತ್ಸಾ ತಜ್ಞ ವೈದ್ಯ ಡಾ.ಹೆಚ್.ಪಿ.ನಂದೀಶ್ ಮತ್ತು ತಂಡವೂ ಅತ್ಯಂತ ಯಶಸ್ವಿಯಾಗಿ ನಿಭಾಯಿಸಿದ್ದು ರೋಗಿಗೆ ಎಂಡೋಸ್ಕೋಪಿಕ್ ಮೂಲಕ ಮೇದೋಜೀರಕಾಂಗದ ನಾಳಕ್ಕೆ ಕೃತಕ ನಾಳವನ್ನು ಅಳವಡಿಸಿ ದ್ರವ ಸೋರಿಕೆಯನ್ನು ತಡೆಗಟ್ಟಲಾಗಿದೆ. ಈಗ ರೋಗಿಯೂ ಸಂಪೂರ್ಣ ಆರೋಗ್ಯವಾಗಿದ್ದಾನೆ ಎಂದು ತಿಳಿಸಿದರು.[ಪೊಲೀಸಪ್ಪನ ಹೊಟ್ಟೆಯಿಂದ 40 ಚಾಕು ಹೊರತೆಗೆದ ವೈದ್ಯರು!]
ಮದ್ಯಪಾನ ವ್ಯಸನಿಗಳಲ್ಲಿ ಹಾಗೂ ವಯಸ್ಕರಲ್ಲಿ ಈ ಕಾಯಿಲೆಯೂ ಸಾಮಾನ್ಯವಾಗಿದ್ದರೂ ಚಿಕ್ಕ ಮಕ್ಕಳಲ್ಲಿ ಅತಿ ವಿರಳ. ಇಂತಹ ವಿರಳ ಹಾಗೂ ಅಪರೂಪದ ಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿ ಜೆಎನ್ ಯೂ ಆಸ್ಪತ್ರೆ ನಿರ್ವಹಿಸಿದ್ದು, ಇದೊಂದು ಅಪರೂಪದ ಜಾಗತಿಕ ದಾಖಲೆಯ ಶಸ್ತ್ರ ಚಿಕಿತ್ಸೆಯಾಗಿದೆ ಎಂದು ಶಸ್ತ್ರಚಿಕಿತ್ಸಕ ಡಾ.ಹೆಚ್.ಪಿ.ನಂದೀಶ್ ತಿಳಿಸಿದರು.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications