ಚಾಮುಂಡಿಗೆ ಆಷಾಢ ಮಾಸದಲ್ಲಿ ದಾಖಲೆಯ ಆದಾಯ
ಮೈಸೂರು, ಜುಲೈ 28 : ವಿಶ್ವವಿಖ್ಯಾತ ಚಾಮುಂಡೇಶ್ವರಿ ದೇಗುಲ ಮುಂದಿನ ದಿನಗಳಲ್ಲಿ ಕರ್ನಾಟಕದ ಅತೀ ಶ್ರೀಮಂತ ದೇವಸ್ಥಾನಗಳ ಪಟ್ಟಿಯಲ್ಲಿ ಸ್ಥಾನ ಪಡೆದುಕೊಡುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿವೆ.
ಕೇವಲ ಆಷಾಢ ಮಾಸದ 4 ಶುಕ್ರವಾರಗಳು ಸೇರಿ ಏಪ್ರಿಲ್ನಿಂದ ಜುಲೈ 26ರವರೆಗೆ ದೇವಸ್ಥಾನದ ಪ್ರವೇಶ ಶುಲ್ಕ, ಹುಂಡಿ ಗಳಿಕೆ ಹಾಗೂ ಇತರೆ ಸೇವಾ ಕಾಣಿಕೆಗಳಿಂದ 11.08 ಕೋಟಿ ರೂ.ಗಳ ದಾಖಲೆ ಆದಾಯ ಬಂದಿದೆ.

ಕಳೆದ ಮೂರು ವರ್ಷಗಳಿಂದ ದೇವಾಲಯದ ಆದಾಯ ಗಣನೀಯವಾಗಿ ಏರಿಕೆಯಾಗಿದ್ದು, ಇದೇ ಮೊದಲ ಬಾರಿಗೆ ಪ್ರವೇಶ ಶುಲ್ಕದ ಮೂಲಕವೇ 1 ಕೋಟಿ ರೂ.ಗಳಿಗೂ ಹೆಚ್ಚು ಸಂಗ್ರಹವಾಗಿ ದಾಖಲೆ ನಿರ್ಮಿಸಿದೆ. ಇದು ಸಾರ್ವಕಾಲಿಕ ದಾಖಲೆಯಾಗಿದೆ.
2015ರಲ್ಲಿ ಇದೇ ಅವಧಿಯಲ್ಲಿ ಹುಂಡಿಯಲ್ಲಿ 1,62,92,707 ರೂ. ಸಂಗ್ರಹವಾಗಿದ್ದರೆ, 2016ರಲ್ಲಿ 3,51,39,248 ರೂ. ಶೇಖರಣೆಯಾಗಿತ್ತು. ಈ ವರ್ಷ ಇದನ್ನು ಮೀರಿ 3,86,30,365 ರೂ. ಸಂಗ್ರಹವಾಗಿದೆ. ಇದೇ ರೀತಿ ಕ್ರಮವಾಗಿ ಸೇವಾ ಕಾಣಿಕೆ ಮತ್ತು ಇತರೆ ಮೂಲಗಳಿಂದ 4,35,29,205 ರೂ., 4,35,08,507 ರೂ. ಹಾಗೂ 7,22,07, 104 ರೂ. ಆದಾಯ ಬಂದಿದ್ದು, ಒಟ್ಟಾರೆ 2017ರಲ್ಲಿ 11,08,37, 469 ರೂ. ಆದಾಯ ಬಂದಿದೆ.
ನಾಲ್ಕು ಆಷಾಢ ಶುಕ್ರವಾರ ಹಾಗೂ ಚಾಮುಂಡೇಶ್ವರಿ ವರ್ಧಂತಿ ಅವಧಿಯಲ್ಲಿ ಹುಂಡಿಯಲ್ಲಿ 1,74,32,412 ರೂ. ಸಂಗ್ರಹವಾಗಿದ್ದು, ಇದೂ ದಾಖಲೆಯಾಗಿದೆ. ನೆರೆ ರಾಜ್ಯಗಳ ಹಾಗೂ ರಾಜ್ಯಾದ್ಯಂತ ಸಾವಿರಾರು ಮಂದಿ ಹರಿದು ಬಂದಿದ್ದು, 50 ರೂ ಹಾಗೂ 300 ರೂ. ಟಿಕೆಟ್ ಮೂಲಕ ವಿಶೇಷ ದರ್ಶನ ಪಡೆದಿದ್ದಾರೆ.
ಮೊದಲ ಶುಕ್ರವಾರ 18,21,370ನ ರೂ. ಎರಡನೇ ಶುಕ್ರವಾರ 22,70,410 ರೂ., ಮೂರನೇ ಶುಕ್ರವಾರ 23,78,250 ರೂ., ಚಾಮುಂಡೇಶ್ವರಿ ವರ್ಧಂತಿಯಂದು 15,36,340 ರೂ. ಹಾಗೂ ನಾಲ್ಕನೇ ಶುಕ್ರವಾರ 23,76,660 ರೂ. ಪ್ರವೇಶದ ಮೂಲಕ ಹಣ ಸಂಗ್ರಹವಾಗಿ ದಾಖಲೆ ನಿರ್ಮಾಣವಾಗಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications