'ಜುಲೈನಿಂದ ಜಗನ್ಮೋಹನ ಪ್ಯಾಲೇಸ್ ಸಾರ್ವಜನಿಕರ ವೀಕ್ಷಣೆಗೆ'
ಮೈಸೂರು, ಮೇ 29: ಜಗನ್ಮೋಹನ ಅರಮನೆಯ ನವೀಕರಣ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು, ಜುಲೈ ತಿಂಗಳಲ್ಲಿ ಸಾರ್ವಜನಿಕರ ವೀಕ್ಷಣೆಗೆ ಮುಕ್ತವಾಗಲಿದೆ ಎಂದು ರಾಜಮಾತೆ ಪ್ರಮೋದಾದೇವಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರಮನೆಯ ಮೂಲ ಸ್ವರೂಪಕ್ಕೆ ಚ್ಯುತಿ ಬಾರದಂತೆ ನವೀಕರಣ ನಡೆದಿದೆ. ಜಿ.ಎನ್. ಹೆರಿಟೇಜ್ ಫೌಂಡೇಷನ್ ಸಹಕಾರದೊಂದಿಗೆ ಈ ಕಾರ್ಯ ಪೂರ್ಣಗೊಂಡಿದೆ. ಸುಮಾರು 8 ತಿಂಗಳ ಹಿಂದೆ ಪ್ರಾರಂಭವಾದ ಕಾಮಗಾರಿ ಒಂದು ಹಂತ ತಲುಪಲು ಕೆಲಸಗಾರರ ತಂಡ ಹಗಲಿರುಳು ಕಾರ್ಯ ನಿರ್ವಹಿಸಿದೆ. ಹಳೆಯ ಶೈಲಿಗೆ ಯಾವುದೇ ಧಕ್ಕೆ ಬಾರದಂತೆ ಅದರ ಪರಂಪರೆಯನ್ನು ಹಾಗೆಯೇ ಉಳಿಸಿ ನವೀಕರಿಸಲಾಗಿದೆ ಎಂದರು.
ಪುರಾತನ ಗೋಡೆಗಳಿಗೆ ಮತ್ತು ಕಂಬಗಳಿಗೆ 6 ರಿಂದ 7 ಪದರಗಳು ಬಣ್ಣ ಬಳಿದಿದ್ದರು. ಅದನ್ನು ತೆಗೆದು ಹೊಸ ಎನಾಮಲ್ ಬಣ್ಣ ಹಚ್ಚಲಾಗಿದೆ. ಅಲ್ಲದೇ 2000ಕ್ಕೂ ಹೆಚ್ಚು ವಸ್ತುಗಳು ಮತ್ತು ಚಿತ್ರ ಪಟಗಳು ಸಂಗ್ರಹಾಲಯದಲ್ಲಿ ಇವೆ. ಅದಕ್ಕೆ ಜಾಗದ ಅವಶ್ಯಕತೆ ಇದೆ. ಮುಂದೆ ಎಲ್ಲವನ್ನೂ ಪ್ರದರ್ಶನಕ್ಕೆ ಇಡಲಾಗುವುದು. ಪ್ರವಾಸಿಗರು ಇಲ್ಲಿಗೆ ಭೇಟಿ ನೀಡುವ ಸಂದರ್ಭದಲ್ಲಿ ಮೈಸೂರಿನ ಬಗ್ಗೆ, ಅರಮನೆಯ ಇತಿಹಾಸವನ್ನು ತಿಳಿಯಬಹುದಾಗಿದೆ ಎಂದರು.

ಈ ಗ್ಯಾಲರಿ 1861ರಲ್ಲಿ ಇದ್ದ ಹಾಗೆಯೇ ಈಗಲೂ ಕಾಣಬಹುದು. ಮುಂದೆ ಪ್ರವೇಶ ದರ 120ರೂ ಆಗಬಹುದು. ಹಳೆಯ ವಸ್ತುಗಳನ್ನು ರಿಪೇರಿ ಮಾಡಲು ಒಂದು ಸ್ಥಳದಲ್ಲಿ ಲ್ಯಾಬ್ ನಿರ್ಮಾಣದ ಚಿಂತನೆ ಇದೆ ಎಂದರು.
ಪಾರಂಪರಿಕ ಕಟ್ಟಡಗಳ ಸಂರಕ್ಷಣೆ ಕುರಿತು ಸರ್ಕಾರ ಈವರೆಗೆ ಸಲಹೆಗಳನ್ನು ಅಪೇಕ್ಷಿಸಿರಲಿಲ್ಲ. ಅಪೇಕ್ಷಿಸಿದರೆ ಸಲಹೆ ಕೊಡಲು ನಾವು ಸಿದ್ದರಿದ್ದೇವೆ. ಲ್ಯಾನ್ಸ್ ಡೌನ್ ಬಿಲ್ಡಿಂಗ್ ವಿಚಾರವಾಗಿ ನಮ್ಮ ಸಲಹೆ ಕೇಳಿಲ್ಲ. ಪಾರಂಪರಿಕ ಕಟ್ಟಡಗಳ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ. ಯಾವ ಕಾರಣಕ್ಕೆ ಅದನ್ನ ಕೆಡವಲು ಮುಂದಾಗಿದ್ದಾರೆ ಗೊತ್ತಿಲ್ಲ. ಈಗಿನ ತಂತ್ರಜ್ಞಾನದಲ್ಲಿ ಏನನ್ನು ಬೇಕಾದರೂ ಮಾಡಬಹುದು. ಪಾರಂಪರಿಕ ಸಲಹಾ ಸಮಿತಿಗೆ ಮಾರ್ಗದರ್ಶನ ನೀಡಲು ಸಿದ್ದವಿರುವೆ, ಸರ್ಕಾರ ಬಯಸಿದರೆ ಸಹಕಾರ ಕೊಡುತ್ತೇನೆ ಎಂದು ತಿಳಿಸಿದರು.
ಅರಮನೆ ಮುಖ್ಯ ಭಾಗ ಸೋರುತ್ತಿರುವ ಬಗ್ಗೆ ಮಾತನಾಡಿ, ಇದು ನ್ಯಾಯಾಲಯದಲ್ಲಿ ಇರುವುದರಿಂದ ಕೆಲಸವನ್ನು ಸರ್ಕಾರ ಮಾಡುವುದೋ ಅಥವಾ ನಾವು ಮಾಡುವುದೋ ನಿರ್ಧಾರ ಆಗಬೇಕಾಗಿದೆ ಎಂದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications