Get Updates
Get notified of breaking news, exclusive insights, and must-see stories!

ಕೆಆರ್ ‌ಎಸ್ ನಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಸ್ಥಾಪನೆಗೆ ಮನವಿ

ಮೈಸೂರು, ಜುಲೈ 31: ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಏಕ ಪ್ರತಿಮೆ ಸ್ಥಾಪನೆಗಾಗಿ ಮೈಸೂರು ಮತ್ತು ಮಂಡ್ಯ ಹೋರಾಟ ಸಮಿತಿ ವತಿಯಿಂದ ಇಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಮನವಿ ಮಾಡಲಾಯಿತು.

ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ಇತಿಹಾಸ ತಜ್ಞ ಪ್ರೊ.ಪಿ.ವಿ ನಂಜರಾಜ ಅರಸು ಅವರು ಭೇಟಿ ಮಾಡಿ ಕೃಷ್ಣರಾಜ ಸಾಗರ (ಕೆಆರ್ಎಸ್) ದಲ್ಲಿ ನಾಲ್ವಡಿ ಅವರ ಏಕಪ್ರತಿಮೆ ಸ್ಥಾಪಿಸಲು ಸಿಎಂ ಅವರಿಗೆ ಮನವಿ ಮಾಡಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಸಕಾರಾತ್ಮಕವಾಗಿ ಸ್ಪಂದಿಸಿ ಪರಿಶೀಲಿಸುವುದಾಗಿ ಭರವಸೆ ನೀಡಿದರು.

Request For Installation Of Nalwadi Krishnaraja Wadiyar Statue In KRS

ಸಿಎಂ ಭೇಟಿ ನಿಯೋಗದಲ್ಲಿ ಕೊಳ್ಳೇಗಾಲ ಕ್ಷೇತ್ರದ ಶಾಸಕರಾದ ಎನ್.ಮಹೇಶ್, ಕರ್ನಾಟಕ ಸಂಘದ ಅಧ್ಯಕ್ಷರಾದ ಜಯಪ್ರಕಾಶ್ ಗೌಡ (ಮಂಡ್ಯ) , ಮಾಜಿ ಮೇಯರ್ ಪುರುಷೋತ್ತಮ್, ಏಕಪ್ರತಿಮೆ ಹೋರಾಟದ ಸಂಚಾಲಕರಾದ ಅರವಿಂದ್ ಶರ್ಮ, ಕನ್ನಡ ಹೋರಾಟಗಾರರಾದ ಧನಪಾಲ್ ಕುರುಬರಹಳ್ಳಿ, ಬೋವಿ ನಿಗಮ ಮಂಡಳಿ ಮಾಜಿ ಅಧ್ಯಕ್ಷರಾದ ಜಿ.ವಿ ಸೀತಾರಾಮ್, ಕರ್ನಾಟಕ ರಾಜ್ಯ ರೈತ ಸಂಘ (ಹಸಿರು ಸೇನೆ) ಮೈಸೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಹೊಸಕೋಟೆ ಬಸವರಾಜು, ವಿಜಯ ದೇವರಾಜೇ ಅರಸ್ ಬಿವಿಎಸ್ ನ ಸಿದ್ದರಾಜು ಸೋಸಲೆ, ಎಂ.ಬಿ ಶ್ರೀನಿವಾಸ್ ಮಂಡ್ಯ ಇತರರು ಉಪಸ್ಥಿತರಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+