ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಎಚ್.ಡಿ.ಕೋಟೆ ಗಿರಿಜನರಿಗಾಗಿ ಅಂಬ್ಯುಲೆನ್ಸ್ ನೀಡಿದ ಆರ್‌ಬಿಐ

|
Google Oneindia Kannada News

ಮೈಸೂರು, ಅಕ್ಟೋಬರ್ 28 : ಭಾರತೀಯ ರಿಸರ್ವ್ ಬ್ಯಾಂಕ್ ಎಚ್. ಡಿ. ಕೋಟೆ ತಾಲೂಕಿನ ಹಾಡಿ ಪ್ರದೇಶದ ವಾಪ್ತಿಯಲ್ಲಿ ವಾಸಿಸುವ ಜನರಿಗೆ ಅನುಕೂಲವಾಗಲೆಂದು 2 ಅಂಬ್ಯುಲೆನ್ಸ್‌ಗಳನ್ನು ಕೊಡುಗೆಯಾಗಿ ನೀಡಿದೆ.

ಬುಧವಾರ ಮೈಸೂರಿನ ಭಾರತೀಯ ರಿಸರ್ವ್ ಬ್ಯಾಂಕ್ ನೋಟು ಮುದ್ರಣ ಸಂಸ್ಥೆ ಮೈಸೂರು ಜಿಲ್ಲಾಡಳಿತಕ್ಕೆ ಅಂಬ್ಯುಲೆನ್ಸ್ ಹಸ್ತಾಂತರ ಮಾಡಿತು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಪಾಲ್ಗೊಂಡಿದ್ದರು.

ಬೆಂಗಳೂರಲ್ಲಿ ಅಂಬ್ಯುಲೆನ್ಸ್ ಹತ್ತಿದ ಯುವತಿ ದೆಹಲಿಯಲ್ಲಿ ಪತ್ತೆ! ಬೆಂಗಳೂರಲ್ಲಿ ಅಂಬ್ಯುಲೆನ್ಸ್ ಹತ್ತಿದ ಯುವತಿ ದೆಹಲಿಯಲ್ಲಿ ಪತ್ತೆ!

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಟಿ. ಅಮರ್ನಾಥ್ ಮಾತನಾಡಿ, "ಎಚ್. ಡಿ. ಕೋಟೆಯ ಬುಡಕಟ್ಟು ಜನಾಂಗದವರಿಗೆ ತುರ್ತು ಸಮಯದಲ್ಲಿ ಅನುಕೂಲವಾಗಲಿ ಎಂದು ಕೊಡುಗೆ ನೀಡಿದ್ದು, ವಾಹನಗಳನ್ನು ಹಾಡಿಯಲ್ಲಿ ವಾಸಿಸುವ ಜನರಿಗಾಗಿ ಬಳಕೆ ಮಾಡಿಕೊಳ್ಳಲಾಗುತ್ತದೆ" ಎಂದರು.

ಚೆನ್ನೈ ಅಂಬ್ಯುಲೆನ್ಸ್ ಚಾಲಕರಿಗೆ ಸೆಲ್ಯೂಟ್ ಎಂದ ಮಿಜೋರಾಂ ಸರ್ಕಾರ! ಚೆನ್ನೈ ಅಂಬ್ಯುಲೆನ್ಸ್ ಚಾಲಕರಿಗೆ ಸೆಲ್ಯೂಟ್ ಎಂದ ಮಿಜೋರಾಂ ಸರ್ಕಾರ!

Reserve Bank Note Mudran Unit Donated Two Ambulances

ನೋಟು ಮುದ್ರಣ ಸಂಸ್ಥೆಯ ವ್ಯವಸ್ಥಾಪಕ ಎನ್. ಜಿ. ಮುರುಳಿ ಮಾತನಾಡಿ, "ಸಾಮಾನ್ಯ ಜನರಿಗೆ ಅನುಕೂಲವಾಗಲೆಂದು ಅನೇಕ ಕ್ಷೇತ್ರಗಳಲ್ಲಿ ಕೊಡುಗೆಗಳನ್ನು ನೀಡುತ್ತಾ ಬರಲಾಗಿದೆ. 29.2 ಲಕ್ಷ ರೂ. ಮೌಲ್ಯದ ಎರಡು ಅಂಬ್ಯುಲೆನ್ಸ್ ವಾಹನಗಳನ್ನು ಜಿಲ್ಲಾಡಳಿತಕ್ಕೆ ನೀಡಲಾಗಿದೆ" ಎಂದು ಹೇಳಿದರು.

7 ಸಾವಿರ ಪಡೆದು ಜನರನ್ನು ಸಾಗಿಸುತ್ತಿದ್ದ ಅಂಬ್ಯುಲೆನ್ಸ್ ವಶಕ್ಕೆ 7 ಸಾವಿರ ಪಡೆದು ಜನರನ್ನು ಸಾಗಿಸುತ್ತಿದ್ದ ಅಂಬ್ಯುಲೆನ್ಸ್ ವಶಕ್ಕೆ

ಮೈಸೂರಿನ ಆರ್. ಬಿ. ಐ ನೋಟು ಮುದ್ರಣ ಸಂಸ್ಥೆಯ ಪ್ರಧಾನ ವ್ಯವಸ್ಥಾಪಕ ರಮೇಶ್ ಕುಮಾರ್ ಲಭ, ಸಹಾಯಕ ಪ್ರಧಾನ ವ್ಯವಸ್ಥಾಪಕ ಅಜಿತ್ ಕುಮಾರ್ ಕರಣ್ ಇತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

English summary
Bharatiya Reserve Bank Note Mudran Private Limited (BRBNMPL) Mysuru unit hand over the two ambulance for district administration.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X