ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಹಾಲಯ ಅಮಾವಾಸ್ಯೆಯಂದು ಚಾಮುಂಡಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಸೆಪ್ಟೆಂಬರ್ 15: ಮಹಾಲಯ ಅಮಾವಾಸ್ಯೆಯಂದು (ಸೆಪ್ಟೆಂಬರ್ 17) ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತಾದಿಗಳ ಪ್ರವೇಶಕ್ಕೆ ಜಿಲ್ಲಾಡಳಿತ ನಿರ್ಬಂಧ ಹೇರಿದೆ.

ಕೊರೊನಾ ಹಿನ್ನೆಲೆಯಲ್ಲಿ ಹಾಗೂ ಮಹಾಲಯ ಅಮಾವಾಸ್ಯೆ ಪ್ರಯುಕ್ತ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಸಾಧ್ಯತೆ ಇರುವುದರಿಂದ ಭಕ್ತರಿಗೆ ಚಾಮುಂಡಿ ಬೆಟ್ಟಕ್ಕೆ ಪ್ರವೇಶವನ್ನು ಅಂದು ನಿರ್ಬಂಧಿಸಿ ಆದೇಶಿಸಲಾಗಿದೆ. ಬೆಟ್ಟಕ್ಕೆ ಸಂಪರ್ಕಿಸುವ ರಸ್ತೆಗಳನ್ನು ಕೂಡ ಬಂದ್ ಮಾಡಲು ನಿರ್ಧರಿಸಲಾಗಿದೆ.

Mysuru: Restriction On Entry To Chamundi Hills On Mahalaya Amavasya

 ಇಂದಿನಿಂದ ಚಾಮುಂಡೇಶ್ವರಿ, ನಂಜನಗೂಡು ದೇಗುಲ ಜನರಿಗೆ ಮುಕ್ತ ಇಂದಿನಿಂದ ಚಾಮುಂಡೇಶ್ವರಿ, ನಂಜನಗೂಡು ದೇಗುಲ ಜನರಿಗೆ ಮುಕ್ತ

ಈ ಹಿಂದೆ ಕೊರೊನಾ ಸೋಂಕಿನ ಹಾವಳಿಯಿಂದ ಆಷಾಢ ಶುಕ್ರವಾರ ಹಾಗೂ ಪ್ರತಿ ಶನಿವಾರ ಪ್ರವೇಶವನ್ನು ನಿರ್ಬಂಧಿಸಲಾಗಿತ್ತು. ‌ನಂತರದ ದಿನಗಳಲ್ಲಿ ನಿರ್ಬಂಧವನ್ನು ಸಡಿಲಿಕೆ ಮಾಡಲಾಗಿತ್ತು. ಆದರೆ ಜಿಲ್ಲೆಯಲ್ಲಿಕೊರೊನಾ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಹಾಗೂ ಮಹಾಲಯ ಅಮವಾಸ್ಯೆಯೆಂದು ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬರುವುದರಿಂದ ಮುಂಜಾಗ್ರತಾ ಕ್ರಮವಾಗಿ ಬೆಟ್ಟದ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.

English summary
Mysuru district administration has restricted the entry of devotees to the Chamundi Hills on mahalaya amavasya september 17
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X