Get Updates
Get notified of breaking news, exclusive insights, and must-see stories!

ಸಿಎಂ ವಿರುದ್ಧ ಸಿಡಿದೆದ್ದ ರೇವಣ ಸಿದ್ದಯ್ಯ ಕಾಂಗ್ರೆಸಿಗೆ ಗುಡ್ ಬೈ

ಮೈಸೂರು, ಏಪ್ರಿಲ್ 22: ರಾಜ್ಯ ವಿಧಾನಸಭಾ ಸಮೀಪಿಸುತ್ತಿರುವ ಹೊಸ್ತಿಲಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ವರುಣಾ ಕ್ಷೇತ್ರದ ಪ್ರಭಾವಿ ಮುಖಂಡರು ಆಘಾತ ನೀಡಿದ್ದಾರೆ. ಕ್ಷೇತ್ರದ ಪ್ರಭಾವಿ ಮುಖಂಡ ಹಾಗೂ ನಿವೃತ್ತ ಹಿರಿಯ ಪೊಲೀಸ್ ಅಧಿಕಾರಿ ರೇವಣ ಸಿದ್ದಯ್ಯ ಕಾಂಗ್ರೆಸಿಗೆ ಗುಡ್ ಬೈ ಹೇಳಿದ್ದಾರೆ.

ಇ-ಮೇಲ್ ಮೂಲಕ ರೇವಣ್ಣ ಸಿದ್ದಯ್ಯ ಅವರು ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಮೈಸೂರಿನ ಖಾಸಗಿ ಹೊಟೆಲ್ ನಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರೇವಣ ಸಿದ್ದಯ್ಯ, ಚಾಮುಂಡೇಶ್ವರಿಯಲ್ಲಿ ಜಿ.ಟಿ. ದೇವೇಗೌಡರನ್ನು ಬೆಂಬಲಿಸುವುದಾಗಿ ತಿಳಿಸಿದ್ದಾರೆ.

"ಮುಖ್ಯಮಂತ್ರಿ ಸಿದ್ದರಾಮಯ್ಯ ವಚನ ಭ್ರಷ್ಟರು. ನನಗೆ ಟಿಕೆಟ್‌ ಕೊಡ್ತೀನಿ ಅಂತಾ ಹೇಳಿ ಮಾತು ತಪ್ಪಿದ್ದಾರೆ. ವರುಣಾ ಕ್ಷೇತ್ರ ನಿಮಗೆ ಅನುವಂಶೀಯವಾಗಿ ಬಂದಿದೆಯೇ?" ಎಂದು ಪ್ರಶ್ನಿಸಿದ್ದಾರೆ. "ನಾನು ನನ್ನ ರಾಜೀನಾಮೆ ಪತ್ರವನ್ನು ಶನಿವಾರ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಅವರಿಗೆ ಕಳುಹಿಸಿದ್ದೇನೆ," ಎಂದು ಅವರು ತಿಳಿಸಿದರು.

Revana siddaiah quits congress and slams Siddaramaiah

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಜಿ.ಟಿ.ದೇವೇಗೌಡ ಅವರನ್ನು ಬೆಂಬಲಿಸುತ್ತೇನೆ. ವರುಣಾದಲ್ಲಿ ಯಾರನ್ನು ಬೆಂಬಲಿಸಬೇಕು ಎಂಬುದನ್ನು ಶೀಘ್ರದಲ್ಲಿ ನಿರ್ಧರಿಸುವುದಾಗಿ ಅವರು ಮಾಹಿತಿ ನೀಡಿದರು.

ಸಿದ್ದರಾಮಯ್ಯ ನನ್ನನ್ನು ಸಾಕು ಪ್ರಾಣಿ ರೀತಿ ನಡೆಸಿಕೊಂಡರು. ಚುನಾವಣೆ ಹೊಸ್ತಿಲಲ್ಲಿ ಸಿದ್ದರಾಮಯ್ಯ ನಮ್ಮ ಮನೆಗೆ‌ ಬಂದಿದ್ದರು. ನಮ್ಮ ಮನೆಯ ಸಾಕು ಪ್ರಾಣಿಗಳನ್ನು ನಾವು ಏನಾದರೂ ಕೊಟ್ಟು ಸಮಾಧಾನ ಮಾಡುತ್ತೇವೆ. ಅದೇ ರೀತಿ ನನ್ನ ಬಳಿಯೂ ನಡೆದುಕೊಂಡರು ಎಂಬುದಾಗಿ ಅವರು ಹೇಳಿದ್ದಾರೆ.

"ಕಾಂಗ್ರೆಸ್ ನಲ್ಲಿ ವ್ಯಕ್ತಿ ಸಾಮರ್ಥ್ಯ ಅಧಿಕವಾಗಿರುವುದನ್ನು ಖಂಡಿಸಿ ಹೊರ ಬಂದಿದ್ದೇನೆ. ಸಿದ್ದರಾಮಯ್ಯ ವೀರಶೈವ ಲಿಂಗಾಯತ ಸಮುದಾಯವನ್ನ ಒಡೆದು ನಿರ್ನಾಮ ಮಾಡಲು ಹೊರಟಿದ್ದಾರೆ. ಆದರೆ ಜಗತ್ತಿನಲ್ಲಿ ಯಾರು ಲಿಂಗಾಯತ, ಯಾರು ವೀರಶೈವ ಎಂದು ಹೇಳಲಾಗದಷ್ಟು ಹೊಂದಾಣಿಕೆ ಇದೆ. ನಮ್ಮ ಕುಟುಂದಲ್ಲೂ ಇದೇ ಪರಿಸ್ಥಿತಿ ಇದೆ. ಲಿಂಗಾಯತ ಸಮುದಾಯ ಒಡೆದು ಅಧಿಕಾರ ಏರುತ್ತೇನೆ ಎಂಬಂತೆ ನಾಳೆ ಇತರ ಸಮುದಾಯವನ್ನು ಒಡೆಯಲು ಮುಂದಾಗುತ್ತಾರೆ. ಇದನ್ನ ನಾವು ಖಂಡಿಸಬೇಕು. ಮನೆ ಮನೆಗೆ ಹೋಗಿ ತಿಳಿಸಬೇಕು," ಎಂದು ತಿಳಿಸಿದರು.

"ವರುಣ ನಿಮ್ಮ ಆಸ್ತಿಯಾ? ಚಾಮುಂಡೇಶ್ವರಿ ಕ್ಷೇತ್ರ ಏನು ಮಾಡಿತ್ತು? ತಮ್ಮ ಮಗನಿಗಾಗಿ ವರುಣ ಕ್ಷೇತ್ರಕ್ಕೆ ಅಷ್ಟು ಹಣ ಸುರಿದ್ರಾ? ವರುಣಾದಲ್ಲೂ ನಾನು ಪ್ರಚಾರ ಮಾಡುತ್ತೇನೆ" ಎಂದು ಅವರು ಆಕ್ರೋಶಿತರಾಗಿ ನುಡಿದರು.

"ಲಿಂಗಾಯತ ಸಮುದಾಯ ಒಡೆಯಲು ಯತ್ನಿಸಿದ್ದು ನನಗೆ ಬಹಳ ಬೇಸರ ತಂದಿದೆ. ಇದು ಕುಟುಂಬಗಳಲ್ಲೇ ಭಿನ್ನಾಭಿಪ್ರಾಯ ಮೂಡಿಸಿದೆ. ಸಮುದಾಯವನ್ನು ವಿಂಗಡಿಸಿ ನೋಡುವುದು ಒಳ್ಳೆಯ ಬೆಳವಣಿಗೆಯಲ್ಲ. ಈಗಾಗಲೇ ಸಿದ್ದಗಂಗಾ ಶ್ರೀಗಳು ಬಿಡಿಸಿ ಹೇಳಿ ಸಂದೇಶ ನೀಡಿದ್ದಾರೆ. ಶ್ರೀಗಳ ಸಂದೇಶ ಮೀರಿ ತರಾತುರಿಯಲ್ಲಿ ಸಮಿತಿ ವರದಿ ಪಡೆದು ಸಮುದಾಯ ಒಡೆವ ಯತ್ನ ಮಾಡಿದ್ದಾರೆ. ಸದಾಶಿವ ಆಯೋಗದ ವರದಿ ಬಳಸಿ ಇನ್ನೊಂದು ಸಮುದಾಯಕ್ಕೂ ಹೊಡೆತ ಬೀಳುವ ಸಾಧ್ಯತೆ ಇದೆ," ಎಂದವರು ಆತಂಕ ವ್ಯಕ್ತಪಡಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+