ಸಿಎಂ ವಿರುದ್ಧ ಸಿಡಿದೆದ್ದ ರೇವಣ ಸಿದ್ದಯ್ಯ ಕಾಂಗ್ರೆಸಿಗೆ ಗುಡ್ ಬೈ
ಮೈಸೂರು, ಏಪ್ರಿಲ್ 22: ರಾಜ್ಯ ವಿಧಾನಸಭಾ ಸಮೀಪಿಸುತ್ತಿರುವ ಹೊಸ್ತಿಲಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ವರುಣಾ ಕ್ಷೇತ್ರದ ಪ್ರಭಾವಿ ಮುಖಂಡರು ಆಘಾತ ನೀಡಿದ್ದಾರೆ. ಕ್ಷೇತ್ರದ ಪ್ರಭಾವಿ ಮುಖಂಡ ಹಾಗೂ ನಿವೃತ್ತ ಹಿರಿಯ ಪೊಲೀಸ್ ಅಧಿಕಾರಿ ರೇವಣ ಸಿದ್ದಯ್ಯ ಕಾಂಗ್ರೆಸಿಗೆ ಗುಡ್ ಬೈ ಹೇಳಿದ್ದಾರೆ.
ಇ-ಮೇಲ್ ಮೂಲಕ ರೇವಣ್ಣ ಸಿದ್ದಯ್ಯ ಅವರು ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಮೈಸೂರಿನ ಖಾಸಗಿ ಹೊಟೆಲ್ ನಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರೇವಣ ಸಿದ್ದಯ್ಯ, ಚಾಮುಂಡೇಶ್ವರಿಯಲ್ಲಿ ಜಿ.ಟಿ. ದೇವೇಗೌಡರನ್ನು ಬೆಂಬಲಿಸುವುದಾಗಿ ತಿಳಿಸಿದ್ದಾರೆ.
"ಮುಖ್ಯಮಂತ್ರಿ ಸಿದ್ದರಾಮಯ್ಯ ವಚನ ಭ್ರಷ್ಟರು. ನನಗೆ ಟಿಕೆಟ್ ಕೊಡ್ತೀನಿ ಅಂತಾ ಹೇಳಿ ಮಾತು ತಪ್ಪಿದ್ದಾರೆ. ವರುಣಾ ಕ್ಷೇತ್ರ ನಿಮಗೆ ಅನುವಂಶೀಯವಾಗಿ ಬಂದಿದೆಯೇ?" ಎಂದು ಪ್ರಶ್ನಿಸಿದ್ದಾರೆ. "ನಾನು ನನ್ನ ರಾಜೀನಾಮೆ ಪತ್ರವನ್ನು ಶನಿವಾರ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಅವರಿಗೆ ಕಳುಹಿಸಿದ್ದೇನೆ," ಎಂದು ಅವರು ತಿಳಿಸಿದರು.

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಜಿ.ಟಿ.ದೇವೇಗೌಡ ಅವರನ್ನು ಬೆಂಬಲಿಸುತ್ತೇನೆ. ವರುಣಾದಲ್ಲಿ ಯಾರನ್ನು ಬೆಂಬಲಿಸಬೇಕು ಎಂಬುದನ್ನು ಶೀಘ್ರದಲ್ಲಿ ನಿರ್ಧರಿಸುವುದಾಗಿ ಅವರು ಮಾಹಿತಿ ನೀಡಿದರು.
ಸಿದ್ದರಾಮಯ್ಯ ನನ್ನನ್ನು ಸಾಕು ಪ್ರಾಣಿ ರೀತಿ ನಡೆಸಿಕೊಂಡರು. ಚುನಾವಣೆ ಹೊಸ್ತಿಲಲ್ಲಿ ಸಿದ್ದರಾಮಯ್ಯ ನಮ್ಮ ಮನೆಗೆ ಬಂದಿದ್ದರು. ನಮ್ಮ ಮನೆಯ ಸಾಕು ಪ್ರಾಣಿಗಳನ್ನು ನಾವು ಏನಾದರೂ ಕೊಟ್ಟು ಸಮಾಧಾನ ಮಾಡುತ್ತೇವೆ. ಅದೇ ರೀತಿ ನನ್ನ ಬಳಿಯೂ ನಡೆದುಕೊಂಡರು ಎಂಬುದಾಗಿ ಅವರು ಹೇಳಿದ್ದಾರೆ.
"ಕಾಂಗ್ರೆಸ್ ನಲ್ಲಿ ವ್ಯಕ್ತಿ ಸಾಮರ್ಥ್ಯ ಅಧಿಕವಾಗಿರುವುದನ್ನು ಖಂಡಿಸಿ ಹೊರ ಬಂದಿದ್ದೇನೆ. ಸಿದ್ದರಾಮಯ್ಯ ವೀರಶೈವ ಲಿಂಗಾಯತ ಸಮುದಾಯವನ್ನ ಒಡೆದು ನಿರ್ನಾಮ ಮಾಡಲು ಹೊರಟಿದ್ದಾರೆ. ಆದರೆ ಜಗತ್ತಿನಲ್ಲಿ ಯಾರು ಲಿಂಗಾಯತ, ಯಾರು ವೀರಶೈವ ಎಂದು ಹೇಳಲಾಗದಷ್ಟು ಹೊಂದಾಣಿಕೆ ಇದೆ. ನಮ್ಮ ಕುಟುಂದಲ್ಲೂ ಇದೇ ಪರಿಸ್ಥಿತಿ ಇದೆ. ಲಿಂಗಾಯತ ಸಮುದಾಯ ಒಡೆದು ಅಧಿಕಾರ ಏರುತ್ತೇನೆ ಎಂಬಂತೆ ನಾಳೆ ಇತರ ಸಮುದಾಯವನ್ನು ಒಡೆಯಲು ಮುಂದಾಗುತ್ತಾರೆ. ಇದನ್ನ ನಾವು ಖಂಡಿಸಬೇಕು. ಮನೆ ಮನೆಗೆ ಹೋಗಿ ತಿಳಿಸಬೇಕು," ಎಂದು ತಿಳಿಸಿದರು.
"ವರುಣ ನಿಮ್ಮ ಆಸ್ತಿಯಾ? ಚಾಮುಂಡೇಶ್ವರಿ ಕ್ಷೇತ್ರ ಏನು ಮಾಡಿತ್ತು? ತಮ್ಮ ಮಗನಿಗಾಗಿ ವರುಣ ಕ್ಷೇತ್ರಕ್ಕೆ ಅಷ್ಟು ಹಣ ಸುರಿದ್ರಾ? ವರುಣಾದಲ್ಲೂ ನಾನು ಪ್ರಚಾರ ಮಾಡುತ್ತೇನೆ" ಎಂದು ಅವರು ಆಕ್ರೋಶಿತರಾಗಿ ನುಡಿದರು.
"ಲಿಂಗಾಯತ ಸಮುದಾಯ ಒಡೆಯಲು ಯತ್ನಿಸಿದ್ದು ನನಗೆ ಬಹಳ ಬೇಸರ ತಂದಿದೆ. ಇದು ಕುಟುಂಬಗಳಲ್ಲೇ ಭಿನ್ನಾಭಿಪ್ರಾಯ ಮೂಡಿಸಿದೆ. ಸಮುದಾಯವನ್ನು ವಿಂಗಡಿಸಿ ನೋಡುವುದು ಒಳ್ಳೆಯ ಬೆಳವಣಿಗೆಯಲ್ಲ. ಈಗಾಗಲೇ ಸಿದ್ದಗಂಗಾ ಶ್ರೀಗಳು ಬಿಡಿಸಿ ಹೇಳಿ ಸಂದೇಶ ನೀಡಿದ್ದಾರೆ. ಶ್ರೀಗಳ ಸಂದೇಶ ಮೀರಿ ತರಾತುರಿಯಲ್ಲಿ ಸಮಿತಿ ವರದಿ ಪಡೆದು ಸಮುದಾಯ ಒಡೆವ ಯತ್ನ ಮಾಡಿದ್ದಾರೆ. ಸದಾಶಿವ ಆಯೋಗದ ವರದಿ ಬಳಸಿ ಇನ್ನೊಂದು ಸಮುದಾಯಕ್ಕೂ ಹೊಡೆತ ಬೀಳುವ ಸಾಧ್ಯತೆ ಇದೆ," ಎಂದವರು ಆತಂಕ ವ್ಯಕ್ತಪಡಿಸಿದರು.
-
Cabinet Reshuffle: ಶಾಸಕರ ದೆಹಲಿಗೆ ಭೇಟಿ ತಪ್ಪಿಲ್ಲ, ಸಂಪುಟ ಪುನರ್ರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಿದ್ದರಾಮಯ್ಯ -
ಮೂರು ವರ್ಷ ಮುಗಿದಿದೆ, ಸಚಿವ ಸಂಪುಟ ಬದಲಿಸಿ: ಹೈಕಮಾಂಡ್ಗೆ ಮನವಿ ಸಲ್ಲಿಸಲು ಟಿ.ಬಿ.ಜಯಚಂದ್ರ ಸಜ್ಜು -
ದಾವಣಗೆರೆ ಬೈಎಲೆಕ್ಷನ್ ಬೆನ್ನಲ್ಲೇ ಭಿನ್ನಮತ ಸ್ಫೋಟ: KPCC ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ












Click it and Unblock the Notifications