ಲಾಕ್ಡೌನ್ ಎಫೆಕ್ಟ್: ನಂಜುಂಡೇಶ್ವರನ ಆದಾಯದಲ್ಲಿ ಶೇ.50 ರಷ್ಟು ಇಳಿಕೆ
ಮೈಸೂರು, ಜುಲೈ 17: ಮಹಾಮಾರಿ ಕೊರೊನಾ ಸೋಂಕು ಕಾರಣದಿಂದಾಗಿ ರಾಜ್ಯಾದ್ಯಂತ ಲಾಕ್ಡೌನ್ ಜಾರಿ ಮಾಡಲಾಗಿತ್ತು. ಇದೇ ವೇಳೆ ಯಾವುದೇ ದೇವಸ್ಥಾನಗಳಿಗೂ ಭಕ್ತರು ತೆರಳದಂತೆ ನಿರ್ಬಂಧ ವಿಧಿಸಲಾಗಿತ್ತು.
ಲಾಕ್ಡೌನ್ ಎಫೆಕ್ಟ್ನಿಂದಾಗಿ ನಂಜನಗೂಡು ನಂಜುಂಡೇಶ್ವರನ ಆದಾಯಕ್ಕೂ ಕತ್ತರಿ ಬಿದ್ದಿದೆ. ಕಳೆದ ಒಂದು ವಾರದಿಂದ ಕೊರೊನಾ ಅನ್ಲಾಕ್ ಆಗಿದ್ದು, ಈ ನಡುವೆ ನಂಜನಗೂಡು ದೇವಸ್ಥಾನದ ಹುಂಡಿ ಹಣ ಸಂಗ್ರಹದಲ್ಲಿ ಭಾರೀ ಇಳಿಕೆ ಕಂಡಿದೆ.
ಮೈಸೂರು ಭಾಗದ ಪ್ರಮುಖ ಧಾರ್ಮಿಕ ಕೇಂದ್ರವಾಗಿರುವ ನಂಜನಗೂಡು ಯಾವಾಗಲೂ ಭಕ್ತರಿಂದ ಭರ್ತಿಯಾಗಿರುತ್ತದೆ. ಆದರೆ ಕೊರೊನಾ ಹೊಡೆತದ ಕಾರಣ ದೇವಸ್ಥಾನಕ್ಕೆ ಬರುವ ಭಕ್ತರ ಸಂಖ್ಯೆಯಲ್ಲಿ ಇಳಿಕೆ ಕಂಡಿರುವ ಪರಿಣಾಮ ನಂಜುಂಡನ ಹುಂಡಿ ಸಂಗ್ರಹದ ಮೇಲೂ ಪರಿಣಾಮ ಬೀರಿದೆ. ಹೀಗಾಗಿ ಹುಂಡಿ ಸಂಗ್ರಹದಲ್ಲಿ ಶೇ.50 ರಷ್ಟು ಇಳಿಕೆ ಕಂಡಿದೆ.

ಕೊರೊನಾ ಹಿನ್ನೆಲೆಯಲ್ಲಿ ನಂಜನಗೂಡು ನಂಜುಂಡೇಶ್ವರ ದೇವಾಲಯ ಎರಡು ತಿಂಗಳಿಗೂ ಅಧಿಕ ಕಾಲ ಬಂದ್ ಆಗಿತ್ತು. ಎರಡು ತಿಂಗಳ ಅವಧಿಯಲ್ಲಿ ಕೇವಲ 56 ಲಕ್ಷ 11 ಸಾವಿರದ 966 ರೂ. ಮಾತ್ರ ಸಂಗ್ರಹವಾಗಿದೆ. ಕಾಣಿಕೆ ಹುಂಡಿಯಲ್ಲಿ ಕಡಿಮೆ ಮೊತ್ತ ಸಂಗ್ರಹವಾಗಿದ್ದು, ಭಕ್ತರ ಪ್ರವೇಶಕ್ಕೆ ಸರ್ಕಾರ ಬ್ರೇಕ್ ಹಾಕಿದ್ದರಿಂದ ಹುಂಡಿ ಹಣ ಸಂಗ್ರಹದ ಮೇಲೆ ಪರಿಣಾಮ ಬೀರಿದೆ ಎನ್ನಲಾಗಿದೆ.

ಇನ್ನು ಹುಂಡಿಯಲ್ಲಿ ಸಂಗ್ರಹವಾಗಿರುವ ಹಣದಲ್ಲಿ ನಿಷೇಧಿತ ನೋಟುಗಳು ಸಹ ಕಂಡುಬಂದಿವೆ. ಈ ಬಾರಿ 11,500 ರೂ. ಮೌಲ್ಯದ ನಿಷೇಧಿತ ನೋಟುಗಳು ಹುಂಡಿಯಲ್ಲಿ ಪತ್ತೆಯಾಗಿದೆ. 51 ಗ್ರಾಂ ಚಿನ್ನ ಹಾಗೂ 1.5 ಕೆ.ಜಿ ಬೆಳ್ಳಿ ಸಂಗ್ರಹವಾಗಿದ್ದು, ಈ ಮಧ್ಯೆ 2 ವಿದೇಶಿ ಕರೆನ್ಸಿಗಳೂ ಸಹ ಸಂಗ್ರಹವಾಗಿದೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications