ಮೈಸೂರಿನಲ್ಲಿ ಕಾಣಿಸಿಕೊಂಡ ವಿಶೇಷ ಅತಿಥಿ
ಆಕ್ರಮಣ ಕಾರಿ ಸ್ವಭಾವದ, ಉತ್ತರ ಭಾರತದಲ್ಲಿ ಕಾಣಸಿಗುವ ರ್ಹಿಸೆಸ್ ಮಂಕಿ ಮೈಸೂರಿನಲ್ಲಿ ಕಾಣಿಸಿಕೊಂಡು ಕಾಣಿಸಿಕೊಂಡು ಅಚ್ಚರಿ ಮೂಡಿಸಿದೆ.
ನಗರದ ಜೆಎಲ್ಬಿ ರಸ್ತೆಯಲ್ಲಿರುವ ಮಹಾರಾಜ ಪದವಿ ಪೂರ್ವ ಕಾಲೇಜಿನ ಕಾಂಪೌಂಡ್ ಮೇಲೆ ನಿರ್ಭೀತಿಯಿಂದ ರಿಸೆಸ್ ಮಂಗ ಸಂಚರಿಸುವುದನ್ನು ಸಾರ್ವಜನಿಕರು ಗುರುತಿಸಿದರು.

ನಂತರ ಅಲ್ಲಿಂದ ಮಂಗ ಮಹಾರಾಜ ಪ್ರೌಢಶಾಲೆಯ ಕಟ್ಟಡದ ಬಳಿ, ಹಳೆ ಜಿಲ್ಲಾಧಿಕಾರಿ ಕಚೇರಿ ಪಕ್ಕದ ಮೈದಾನದಲ್ಲಿರುವ ಮರವೇರಿ ಕುಳಿತು ವಿಶ್ರಾಂತಿ ಪಡೆಯಿತು. ಹೊಸ ಪರಿಸರದ ಹಿನ್ನೆಲೆಯಲ್ಲಿ ಪಾದಚಾರಿ ಮಾರ್ಗದಲ್ಲಿ ಓಡಾಡುತ್ತಿದ್ದವರ ಮೇಲೆ ದಾಳಿ ಮಾಡುವಂತೆ ಇದು ಹೆದರಿಸುತ್ತಿತ್ತು.
ರ್ಹಿಸೆಸ್ ಮಂಗದ ಹಿಂಭಾಗ ಕೆಂಪು ಬಣ್ಣದಿಂದ ಕೂಡಿರುತ್ತದೆ. ಮೈ ಮೇಲೆ ಕೂದಲು ಹೆಚ್ಚಾಗಿರುತ್ತದೆ. ತಲೆ ಮೇಲಿನ ಕೂದಲು ಟೊಪ್ಪಿಗೆಯಂತೆ ಕಾಣುತ್ತದೆ. ಬಾಲವೂ ಸ್ವಲ್ಪ ಚಿಕ್ಕದಾಗಿರುತ್ತದೆ. ಸಾಮಾನ್ಯ ಕೋತಿಗಳ ಸಂತತಿಯನ್ನು ತಗ್ಗಿಸಿ ತಮ್ಮ ಆವಾಸ ಸ್ಥಾನ ಭದ್ರಪಡಿಸಿಕೊಳ್ಳುವಲ್ಲಿ ರಿಸೆಸ್ ಮಂಗ ಹೋರಾಟಕ್ಕಿಳಿದಿವೆ. ಅದರ ಸೂಚಕವಾಗಿಯೇ ಈ ಮಾದರಿ ಕೋತಿಗಳು ದಕ್ಷಿಣದಲ್ಲಿ ಕಾಣಿಸಿಕೊಂಡಿವೆ ಎಂದು ವನ್ಯಜೀವಿ ತಜ್ಞರು ಅಂದಾಜಿಸಿದ್ದಾರೆ.
"ಉತ್ತರ ಭಾರತವಲ್ಲದೆ ನೇಪಾಳ, ದಕ್ಷಿಣ ಚೀನಾ, ಆಗ್ನೇಯ ಏಷ್ಯಾದಲ್ಲಿ ರಿಸೆಸ್ ಮಂಗ ಸಂತತಿ ಹೆಚ್ಚಾಗಿ ಕಂಡು ಬರುತ್ತದೆ. ಉತ್ತರ ಭಾರತದಲ್ಲಿ ಇದರ ಸಂತತಿ ಹೆಚ್ಚಾಗುತ್ತಿದ್ದು, ಕ್ರಮೇಣ ದಕ್ಷಿಣ ಭಾರತದತ್ತ ವಲಸೆ ಬಂದು ನೆಲೆ ಕಂಡುಕೊಳ್ಳುವ ಪ್ರಯತ್ನದಲ್ಲಿವೆ. ಈಗಾಗಲೇ ಆಂಧ್ರಪ್ರದೇಶ ಹಾಗೂ ತೆಲಂಗಾಣದಲ್ಲೂ ಗುಂಪಾಗಿ ಕಾಣಿಸಿಕೊಳ್ಳುತ್ತಿವೆ" ಎಂದು ವನ್ಯಜೀವಿ ಸಂರಕ್ಷಕ ಪ್ರದೀಪ್ ಹೇಳಿದ್ದಾರೆ.
ರ್ಹೀಸಸ್ ಮಂಗವು ಪ್ರೈಮೇಟ್ ಗಣ, ಸರ್ಕೊಪಿತಿಸಿಡೀ ಕುಟುಂಬ, ಸರ್ಕೊಪಿತಿಸಿನೀ ಉಪಕುಟುಂಬ, ಮಕಾಕ ಜಾತಿಯ ನಾಲ್ಕು ಪ್ರಭೇದಗಳ ಪೈಕಿ ಒಂದು ಮಂಗವಾಗಿದೆ. ಹಳದಿ ಮಿಶ್ರಿತ ಅಥವಾ ಮರಳಿನ ಬಣ್ಣವನ್ನು ಹೊಂದಿದ್ದು, 47-64 ಸೆಮೀ ಉದ್ದದ ಬಲಿಷ್ಠ ದೇಹವನ್ನು ಹೊಂದಿರುತ್ತದೆ. ಈ ಮಂಗಗಳ ತೂಕ 4.5-11ಕೆಜಿವರೆಗೂ ಇರುತ್ತದೆ. ಚಿಕ್ಕಪುಟ್ಟ ಕೀಟಗಳು, ಹಣ್ಣುಗಳು ಮತ್ತು ಬೇರುಗಳನ್ನು ತಿಂದು ಬದುಕುತ್ತವೆ.
-
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್












Click it and Unblock the Notifications