ಮೈಸೂರಿನ ಭೀಕರ ಅಪಘಾತದಲ್ಲಿ 6 ಮಂದಿ ಸಾವು, ಮೂವರಿಗೆ ಗಾಯ
ಮೈಸೂರು, ಏಪ್ರಿಲ್ 20; ಮೈಸೂರಿನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ 6 ಜನರು ಸಾವನ್ನಪ್ಪಿದ್ದಾರೆ. ಮದುವೆ ಮುಗಿಸಿ ವಾಪಸ್ ಆಗುತ್ತಿದ್ದಾಗ ವಾಹನ ಚಾಲಕನ ನಿಯಂತ್ರಣ ಕಳೆದುಕೊಂಡು ಮರಕ್ಕೆ ಡಿಕ್ಕಿ ಹೊಡೆದಿದೆ.
ಹುಣಸೂರು-ವಿರಾಜಪೇಟೆ ರಸ್ತೆಯ ಅರಸು ಕಲ್ಲಹಳ್ಳಿ ಬಳಿ ಬುಧವಾರ ಸಂಜೆ ಬೊಲೆರೋ ವಾಹನ ಮರಕ್ಕೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ 6 ಜನರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಮೂವರು ತೀವ್ರವಾಗಿ ಗಾಯಗೊಂಡಿದ್ದಾರೆ. ಅಪಘಾತದ ತೀವ್ರತೆಗೆ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ.
ಕೊಡಗಿನ ಪಾಲಿಬೆಟ್ಟದ ನಿವಾಸಿಗಳಾದ ಸಂತೋಷ್(47), ಎಂ.ಆರ್.ಅನಿಲ್(44), ದಯಾನಂದ್ (42), ಬಾಬು(47), ರಾಜೇಶ್(42), ಟ್ಯಾಕ್ಸಿ ಮಾಲೀಕ ವಿನೀತ (33) ಮೃತರು ಎಂದು ಗುರುತಿಸಲಾಗಿದೆ. ಜಾರ್ಜ್ ಪುತ್ರಿ ಕೀರ್ತನ (22), ಎಂಜಲಿ (14) ಹಾಗೂ ಫಿಲೀಪ್ (65) ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತದ ವಿಷಯ ತಿಳಿದು ಪಾಲಿಬೆಟ್ಟದಿಂದ ಆಗಮಿಸಿದ ಸಂಬಂಧಿಕರು ಹಾಗೂ ಸ್ನೇಹಿತರು ಶವಗಾರದ ಬಳಿ ಜಮಾಯಿಸಿದ್ದರು.

ಏನಿದು ಅಪಘಾತ:
ಹುಣಸೂರು ನಗರದ ಅದುಲ್ಲಾಮ್ ಪಾರ್ಟಿ ಹಾಲ್ನಲ್ಲಿ ನಡೆದ ಮದುವೆಯಲ್ಲಿ ಪಾಲಿಬೆಟ್ಟದ ಅನೇಕರು ಭಾಗವಹಿಸಿದ್ದರು. ಈ ಮದುವೆ ಮುಗಿಸಿಕೊಂಡು ಸಂಜೆ 3.45ರ ವೇಳೆ ಪಾಲಿಬೆಟ್ಟಕ್ಕೆ ತೆರಳುತ್ತಿದ್ದರು. ಈ ವೇಳೆ ಚಾಲಕ ಸಂತೋಷ್ನ ನಿಯಂತ್ರಣ ತಪ್ಪಿ ಅರಸು ಕಲ್ಲಹಳ್ಳಿ ಬಳಿ ರಸ್ತೆ ಬದಿಯ ದೊಡ್ಡ ಆಲದ ಮರಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಮರದ ರೆಂಬೆಯು ವಾಹನ ಟಾಪ್ಗೆ ಬಡೆದಿದೆ. ಈ ವೇಳೆ ಹಿಂದೆ ಕುಳಿತಿದ್ದ ಇಬ್ಬರು ಯುವತಿಯರು, ವೃದ್ದರಿಗೂ ತೀವ್ರ ಪೆಟ್ಟು ಬಿದ್ದಿದೆ. ವಾಹನ ಹಿಂಬಾಲಿಸಿ ಬರುತ್ತಿದ್ದ ಮತ್ತೊಂದು ವಾಹನದಲ್ಲಿದ್ದವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ದಾವಿಸಿದ ಪೊಲೀಸರು ವಾಹನದಲ್ಲಿ ಸಿಲುಕಿದ್ದ ಗಾಯಾಳುಗಳನ್ನು ಹೊರತೆಗೆದು ಅಂಬುಲೆನ್ಸ್ ಮೂಲಕ ಹುಣಸೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಮೈಸೂರಿಗೆ ರವಾನಿಸಿದ್ದಾರೆ.
ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವು:
''ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಜೀಪಿನಲ್ಲಿದ್ದ ಆರು ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಗಾಯಗೊಂಡಿದ್ದ ಮೂವರನ್ನು ಮೈಸೂರಿನ ಕೆ.ಆರ್. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಚಾಲಕನ ನಿಯಂತ್ರಣ ಕಳೆದುಕೊಂಡು ಡಿಕ್ಕಿ ಹೊಡೆದಿದೆ,'' ಎಂದು ಎಸ್ಪಿ ಚೇತನ್ ತಿಳಿಸಿದ್ದಾರೆ.
ಸ್ಥಳಕ್ಕೆ ತಕ್ಷಣವೇ ಧಾವಿಸಿದ ಡಿವೈಎಸ್ಪಿ ರವಿಪ್ರಕಾಶ್, ಇನ್ಸ್ಪೆಕ್ಟರ್ ಚಿಕ್ಕಸ್ವಾಮಿ, ರವಿ, ಸಬ್ ಇನ್ಸ್ಪೆಕ್ಟರ್ ಜಮೀರ್ ಅಹಮ್ಮದ್, ರಾಧ ಸೇರಿದಂತೆ ಪೊಲೀಸ್ ಪಡೆಯು ಜನರನ್ನು ನಿಯಂತ್ರಿಸಿದರು. ನಂತರ ಮರದೊಳಗೆ ಸಿಲುಕಿಕೊಂಡಿದ್ದ ವಾಹನವನ್ನು ಹೊರಗೆಳೆದು ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು. ತದನಂತರ ಅಂಬುಲೆನ್ಸ್ಗಳಲ್ಲಿ ಶವಗಳನ್ನು ಹುಣಸೂರಿನ ಶವಗಾರಕ್ಕೆ ಸಾಗಿಸಲಾಯಿತು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications