622 ಅಂಕ ಪಡೆದು ಮೈಸೂರು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಡಿ.ರೋಹನ್
ಮೈಸೂರು, ಏಪ್ರಿಲ್ 30:ಈ ಬಾರಿ ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಮೈಸೂರು ರಾಜ್ಯ 17ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದು, ಶೇ 70.23ರಷ್ಟು ಫಲಿತಾಂಶ ಪಡೆದಿದೆ. ಕಳೆದ ವರ್ಷ ಶೇ 82.90ರಷ್ಟು ಫಲಿತಾಂಶ ಪಡೆದು 11ನೇ ಸ್ಥಾನದಲ್ಲಿತ್ತು. ಅಂದರೆ ಈ ವರ್ಷ ಶೇ 12ರಷ್ಟು ಕುಸಿತ ಕಂಡಿದೆ.
ಇಲ್ಲಿ ಯಾವ ವಿಷಯದಲ್ಲಿ, ವಿದ್ಯಾರ್ಥಿಗಳು ಎಷ್ಟು ಅಂಕಗಳು ಪಡೆದಿದ್ದಾರೆ ಸೇರಿದಂತೆ ವಿದ್ಯಾರ್ಥಿಗಳ ಅನಿಸಿಕೆ, ಡಿಡಿಪಿಐ ಹೇಳಿಕೆಯನ್ನು ಸಂಗ್ರಹಿಸಿ ಕೊಡಲಾಗಿದೆ.
ಮೈಸೂರಿನ ರೋಹನ್ ಡಿ. ಗಂಗ್ಡಕಾರ್ 622 ಅಂಕ ಪಡೆದು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾನೆ. ಮೈಸೂರಿನ ಜೆಎಲ್ ಬಿ ರಸ್ತೆಯಲ್ಲಿನ ರೋಟರಿ ಜಾವಾ ಶಾಲೆ ವಿದ್ಯಾರ್ಥಿ ರೋಹನ್ ದಿನಕ್ಕೆ 3 ಗಂಟೆ ಓದುತ್ತಿದ್ದು, ಪರೀಕ್ಷೆಯ ವೇಳೆ 5 ಗಂಟೆ ಓದಿದರೆ ಹೆಚ್ಚು ಅಂಕ ಪಡೆಯಲು ಸಾಧ್ಯ ಎಂದು ತನ್ನ ಗೆಲುವಿನ ಗುಟ್ಟನ್ನು ಬಿಟ್ಟುಕೊಟ್ಟಿದ್ದಾನೆ. ಹಾಗೆಯೇ ವಿಜಯ ವಿಟ್ಠಲ ಶಾಲೆಯ ತೇಜಸ್, ನಿರಂತರ್ ದಿನೇಶ್ 620 ಅಂಕ ಪಡೆದಿದ್ದಾರೆ.

ಫಲಿತಾಂಶ ಕುರಿತು ಪ್ರತಿಕ್ರಿಯಿಸಿರುವ ರೋಹನ್ ಪೋಷಕರು ಹೆಚ್ಚು ಓದುವಂತೆ ಯಾವುದೇ ರೀತಿಯ ಒತ್ತಡವನ್ನು ಹಾಕಿರಲಿಲ್ಲ. ಬದಲಿಗೆ ಓದಿಗೆ ಉಪಯೋಗವಾಗುವಂತೆ ಎಲ್ಲಾ ರೀತಿಯ ಸಹಕಾರ ನೀಡಿದರು. ನನ್ನ ಈ ಸಾಧನೆಯಲ್ಲಿ ಶಿಕ್ಷಕರು ಬಹಳ ಮುಖ್ಯ ಪಾತ್ರವಹಿಸಿದ್ದು, ವಿದ್ಯಾರ್ಥಿಗಳಿಗೆ ವಿಶೇಷ ತರಗತಿಗಳನ್ನು ತೆಗೆದುಕೊಳ್ಳುವ ಮೂಲಕ ಉತ್ತಮ ಬೋಧನೆ ಮಾಡಿದ್ದಾರೆ. ಉತ್ತಮ ಅಂಕಗಳಿಸಿರುವುದಕ್ಕೆ ಸಂತೋಷವಾಗುತ್ತಿದೆ ಎಂದಿದ್ದಾರೆ.
ಡಿಡಿಪಿಐ ಡಾ.ಪಾಂಡುರಂಗ ಮೈಸೂರು 17ನೇ ಸ್ಥಾನದಲ್ಲಿ ಗುರುತಿಸಿಕೊಂಡಿರುವುದಕ್ಕೆ ಪ್ರತಿಕ್ರಿಯಿಸಿ, ಪರೀಕ್ಷೆಯಲ್ಲಿ ಅನುತ್ತೀರ್ಣರಾದವರು ಧೃತಿಗೆಡದೆ ಮರು ಪರೀಕ್ಷೆಯತ್ತ ಗಮನಹರಿಸಿ ಓದಬೇಕು. ಮುಂದಿನ ದಿನಗಳಲ್ಲಿ ಮೈಸೂರಿಗೆ ಉತ್ತಮ ಫಲಿತಾಂಶ ಬರುವ ನಿಟ್ಟಿನಲ್ಲಿ ವ್ಯಾಸಂಗದಲ್ಲಿ ಹಿಂದಿರುವ ವಿದ್ಯಾರ್ಥಿಗಳನ್ನು ಗುರುತಿಸಿ ಶಿಕ್ಷಕರು, ಸಂಪನ್ಮೂಲ ಶಿಕ್ಷಕರ ಮೂಲಕ ಮಾರ್ಗದರ್ಶನ ನೀಡುತ್ತೇವೆ. ವೈಯಕ್ತಿಕವಾಗಿಯೂ ವಿವಿಧ ವಿಷಯಗಳಲ್ಲಿ ಹಿಂದುಳಿದಿರುವ ವಿದ್ಯಾರ್ಥಿಗಳ ಬಗ್ಗೆ ಗಮನಹರಿಸಿ ಉತ್ತಮ ಫಲಿತಾಂಶ ಬರುವಂತೆ ಕೆಲಸ ಮಾಡುತ್ತೇವೆ ಎಂದು ಹೇಳಿದರು.
ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಭಾಗದ ಶೇ 87.06ರಷ್ಟು ವಿದ್ಯಾರ್ಥಿ ಗಳು ಉತ್ತೀರ್ಣರಾಗಿದ್ದಾರೆ. ಮೈಸೂರಿನಲ್ಲಿ ಒಟ್ಟು 17,714 ಮಂದಿ ಬಾಲಕರು ಪರೀಕ್ಷೆ ಬರೆದಿದ್ದು 13,613 ಉತ್ತೀರ್ಣರಾಗಿದ್ದಾರೆ. ಇನ್ನು 17,771 ವಿದ್ಯಾರ್ಥಿನಿಯರ ಪೈಕಿ 15,007 ಉತ್ತೀರ್ಣರಾಗಿದ್ದಾರೆ. ಜಿಲ್ಲೆಗೆ ಪಿರಿಯಾಪಟ್ಟಣ ತಾಲ್ಲೂಕು ಶೇ 90.59ರಷ್ಟು ಫಲಿತಾಂಶ ಪಡೆಯುವ ಮೂಲಕ ಮೊದಲ ಸ್ಥಾನದಲ್ಲಿದೆ. ಮೈಸೂರು ಗ್ರಾಮೀಣ, ನಂಜನಗೂಡು, ಹುಣಸೂರು, ಕೆ ಆರ್ ನಗರ ಮುಂದುವರೆದ ಸ್ಥಾನವನ್ನು ಪಡೆದುಕೊಂಡಿದೆ ಎಂದು ಡಿಡಿಪಿಐ ಮಾಹಿತಿ ನೀಡಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ












Click it and Unblock the Notifications