ಚಾಮುಂಡಿ ಬೆಟ್ಟದಲ್ಲಿ ಹರಿದ್ವಾರ ರೀತಿ ರೋಪ್ ವೇ: ಸೋಮಣ್ಣ
ಮೈಸೂರು, ಡಿಸೆಂಬರ್ 24: ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಹರಿದ್ವಾರ ಮಾದರಿಯಲ್ಲಿ ರೋಪ್ ವೇ ನಿರ್ಮಾಣ ಮಾಡಲು ಸರಕಾರ ನಿರ್ಧರಿಸಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.
ಚಾಮುಂಡೇಶ್ವರಿ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಾಗುತ್ತಿದ್ದು, ಬೆಟ್ಟದಲ್ಲಿ ಸಂಚಾರ ಒತ್ತಡವನ್ನು ನಿಯಂತ್ರಣ ಮಾಡಲು ಕೇಂದ್ರ ಸರಕಾರದ ನೆರವಿನೊಂದಿಗೆ ರೋಪ್ ವೇ ನಿರ್ಮಿಸಲು ಅಂದಾಜು 20 ಕೋಟಿ ರೂ, ವೆಚ್ಚ ಮಾಡಲು ನಿರ್ಧರಿಸಲಾಗಿದೆ.
ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ನಿರ್ಮಾಣ ಮಾಡುವ ರೋಪ್ ವೇ ಪಳನಿ ಮತ್ತು ಹರಿದ್ವಾರಕ್ಕಿಂತಲೂ ಅತ್ಯಾಧುನಿಕವಾಗಿರಲಿದೆ, ಅಲ್ಲಿನ ಪರಿಸರಕ್ಕೆ ಯಾವುದೇ ಹಾನಿಯಾಗದಂತೆ ಯೋಜನೆ ರೂಪಿಸಲಾಗುವುದು ಎಂದು ಸಚಿವ ಸೋಮಣ್ಣ ತಿಳಿಸಿದರು.

ಈ ರೋಪ್ ವೇ ಯೋಜನೆಯಿಂದ ಭಕ್ತರಿಗೆ ಅನುಕೂಲವಾಗುವ ಜತೆಗೆ ಮಳೆಗಾಲದಲ್ಲಿ ರಸ್ತೆ ಕುಸಿತದಿಂದ ಸಮಸ್ಯೆ ಎದುರಾಗುವುದು ನಿವಾರಣೆಯಾಗಲಿದೆ ಎಂದು ಹೇಳಿದರು.
ಚಾಮುಂಡಿ ಬೆಟ್ಟದಲ್ಲಿ ಸಮರ್ಪಕವಾದ ಕುಡಿಯುವ ನೀರಿನ ವ್ಯವಸ್ಥೆ ಕಾಮಗಾರಿ ಮುಂದುವರೆದಿದೆ, ಬೆಟ್ಟದ ಮೇಲೆ ಸ್ವಚ್ಛತೆ ಕಾಪಾಡಲು ಅಂಗಡಿ, ಮುಂಗಟ್ಟುಗಳನ್ನು ಸಂಪೂರ್ಣವಾಗಿ ತೆರವುಗೊಳಿಸಲಾಗುವುದು ಎಂದರು.
ಕಾರು ನಿಲ್ದಾಣದ ಸಮೀಪದಲ್ಲಿ 180 ಮಳಿಗೆಗಳನ್ನು ನಿರ್ಮಿಸಿ ಹಂಚಲು ಮುಂದಾಗಿದ್ದೇವೆ, ಇದಕ್ಕಾಗಿ 5 ರಿಂದ 6 ಕೋಟಿ ರೂ, ವೆಚ್ಚವನ್ನು ಅಂದಾಜು ಮಾಡಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.
ಇದೇ ಸಂದರ್ಭದಲ್ಲಿ ರೇಷ್ಮೇ ಇಲಾಖೆಗೂ ಉತ್ತೇಜನ ನೀಡಲು ನಿರ್ಧರಿಸಲಾಗಿದ್ದು, ಸಂಸ್ಥೆಯ ಇತರೆ ನಿಗಮಗಳನ್ನು ವಿಲೀನ ಮಾಡಲಾಗುವುದು, ಇಲಾಖೆಯ ನೇರ ಆಡಳಿತಕ್ಕೆ ತರುವ ಪ್ರಸ್ತಾವನೆ ಸಿದ್ದವಾಗುತ್ತಿದೆ ಎಂದು ಸಚಿವ ಸೋಮಣ್ಣ ತಿಳಿಸಿದರು.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications