ಲೋಕಸಭಾ ಚುನಾವಣೆ ಹಿನ್ನೆಲೆ:ರೌಡಿಗಳಿಗೆ ಖಡಕ್ ಎಚ್ಚರಿಕೆ ನೀಡಿದ ಪೊಲೀಸರು
ಮೈಸೂರು, ಮಾರ್ಚ್ 14: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಗರದ ರೌಡಿ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ವ್ಯಕ್ತಿಗಳನ್ನು ಕರೆದು ತೀವ್ರ ವಿಚಾರಣೆ ನಡೆಸಿ ಪೊಲೀಸರು ಖಡಕ್ಕಾಗಿ ಎಚ್ಚರಿಕೆ ನೀಡಿದರು.
ನಗರದ ವಿವಿಧ ಠಾಣೆಗಳಲ್ಲಿ ರೌಡಿ ಶೀಟರ್ ಗಳ ಹೆಸರಿರುವ ರೌಡಿಗಳನ್ನು ಕರೆದು, ಸಿಸಿಬಿ ಘಟಕದಲ್ಲಿ ತೀವ್ರ ವಿಚಾರಣೆಗೊಳಪಡಿಸಿ, ಅವರ ಮೇಲೆ ನಿಯಂತ್ರಣ ಸಾಧಿಸುವ ಉದ್ದೇಶದಿಂದ ಅವರ ವಿಳಾಸದ ಸರಹದ್ದಿನ ಪೊಲೀಸ್ ಠಾಣೆಗಳಿಗೆ ಕಳುಹಿಸಿ ಭದ್ರತಾ ಪ್ರಕರಣಗಳನ್ನು ದಾಖಲಿಸಲಾಗಿದೆ.
ವಿವಿಧ ಪೊಲೀಸ್ ಠಾಣೆಗಳಲ್ಲಿ ರೌಡಿ ಶೀಟರ್ ಎಂದು ಹೆಸರು ಮಾಡಿರುವ ಮತ್ತು ತೀವ್ರ ನಿಗಾ ಇಡಬೇಕಾದ ಚಟುವಟಿಕೆಯಲ್ಲಿರುವ ಸುಮಾರು 31 ರೌಡಿಗಳನ್ನು ವಶಕ್ಕೆ ಪಡೆದು ಸಿಸಿಬಿ ಘಟಕದಲ್ಲಿ ತೀವ್ರ ವಿಚಾರಣೆಗೊಳಪಡಿಸಲಾಯಿತು.

ಯಾವುದೇ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ ಎಚ್ಚರಿಕೆ ನೀಡಿ, ಇವರ ವಿರುದ್ಧ ಭದ್ರತಾ ಪ್ರಕರಣಗಳನ್ನು ದಾಖಲಿಸಲಾಯಿತು. ಪದೇಪದೇ ಎಚ್ಚರಿಕೆ ನೀಡಿದ್ದರೂ ಅಪರಾಧ ಕೃತ್ಯಗಳಿಂದ ದೂರವಿರದ ವಿವಿಧ ಠಾಣಾ ವ್ಯಾಪ್ತಿಯ 14 ಮಂದಿ ರೌಡಿ ಶೀಟರ್ ಗಳನ್ನು 110 ಕಲಂ ಅಡಿಯಲ್ಲಿ ಬಂಧನಕ್ಕೂ ಆದೇಶಿಸಲಾಗಿದೆ ಎಂದು ತಿಳಿಸಿದರು.
ಚುನಾವಣಾ ಸಂದರ್ಭದಲ್ಲಿ ಮತದಾರರಿಗೆ ಬೆದರಿಕೆ ಒಡ್ಡುವುದು, ಪಕ್ಷಗಳ ಪರವಾಗಿ ಮತ ಕೇಳುವುದು ಸೇರಿದಂತೆ ಯಾವುದೇ ಅಪರಾಧ ಕೃತ್ಯದಲ್ಲಿ ತೊಡಗಿಸಿಕೊಳ್ಳದಂತೆ ಎಚ್ಚರಿಕೆ ನೀಡಿ, ರೌಡಿಗಳ ವಿಳಾಸ ಪಡೆದು ವಾಪಸ್ ಕಳುಹಿಸಿಕೊಡಲಾಗಿದೆ ಎಂದು ತಿಳಿಸಿದರು.












Click it and Unblock the Notifications