ಬಿಜೆಪಿ ಅಧ್ಯಕ್ಷರ ಬದಲಾವಣೆ ವಿಷಯದಲ್ಲಿ ಆರ್ಎಸ್ಎಸ್ ಹಸ್ತಕ್ಷೇಪವಿಲ್ಲ: ಕಲ್ಲಡ್ಕ ಪ್ರಭಾಕರ್ ಭಟ್
ಮೈಸೂರು, ಮೇ 15: ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ವಿಷಯದಲ್ಲಿ ಆರ್ಎಸ್ಎಸ್ ಮೂಗು ತೂರಿಸುವುದಿಲ್ಲ ಎಂದು ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರು ತಿಳಿಸಿದ್ದಾರೆ.
ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧ್ಯಕ್ಷರ ಬದಲಾವಣೆ ವಿಷಯವನ್ನು ಬಿಜೆಪಿ ಪಕ್ಷ ಮತ್ತು ಅದರ ಹೈಕಮಾಂಡ್ ನೋಡಿಕೊಳ್ಳುತ್ತದೆ ಎಂದು ಅವರು ಹೇಳಿದ್ದಾರೆ.
ಪಕ್ಷದ ಆಂತರಿಕ ವಿಷಯಕ್ಕೂ ಸಂಘ ಪರಿವಾರಕ್ಕೂ ಯಾವುದೇ ಸಂಬಂಧ ಇಲ್ಲ, ಸಂಘದ ಯಾರೊಬ್ಬರೂ ಬಿಜೆಪಿ ರಾಜ್ಯಾಧ್ಯಕ್ಷರ ಸ್ಥಾನಕ್ಕೆ ಆಕಾಂಕ್ಷಿಗಳು ಸಹ ಅಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ರಾಜ್ಯ ರಾಜಕಾರಣದ ಬಗ್ಗೆ ಮಾತನಾಡಿರುವ ಅವರು, ಎಪ್ಪತ್ತು ವರ್ಷದಲ್ಲಿ ಮೊದಲ ಬಾರಿಗೆ ಕರ್ನಾಟಕದಲ್ಲಿ ಸರ್ಕಾರವೇ ಇಲ್ಲ ಎಂಬಂತೆ ಭಾಸವಾಗುತ್ತಿದೆ, 38 ಸೀಟು ಪಡೆದ ವ್ಯಕ್ತಿ ಮುಖ್ಯಮಂತ್ರಿ ಆಗುವುದು ಪ್ರಜಾಪ್ರಭುತ್ವದ ವಿಡಂಬನೆ ಎಂದು ಪ್ರಭಾಕರ್ ಭಟ್ ಅವರು ಬೇಸರ ವ್ಯಕ್ತಪಡಿಸಿದರು.
ಪ್ರಸ್ತುತ ಮೈತ್ರಿ ಪಕ್ಷಗಳ ನಡುವೆ ನಡೆಯುತ್ತಿರುವ ರಾಜಕೀಯ ಕಿತ್ತಾಟಗಳನ್ನು ನೋಡಿದರೆ ಸರ್ಕಾರ ಯಾವಾಗ ಬೇಕಾದರೂ ಉರುಳುಬಹುದು, ಮೇ 23 ರ ಫಲಿತಾಂಶದ ನಂತರ ಸರ್ಕಾರ ಅಲ್ಲಾಡಬಹುದು ಎಂದು ಅವರು ನಿರೀಕ್ಷೆ ವ್ಯಕ್ತಪಡಿಸಿದರು.
ಸ್ವಾತಂತ್ರ್ಯ ಭಾರತದ ಮೊದಲ ಉಗ್ರ ನಾಥೂರಾಮ್ ಗೂಡ್ಸೆ ಎಂದ ಕಮಲ್ ಹಾಸನ್ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಯಾರ್ಯಾರೋ ಏನೇನೋ ಹೇಳುತ್ತಿರುತ್ತಾರೆ ಅದಕ್ಕೆಲ್ಲಾ ಪ್ರತಿಕ್ರಿಯಿಸುತ್ತಾ ಇರಲು ಸಾಧ್ಯವಿಲ್ಲ ಎಂದರು.
ಪಶ್ಚಿಮ ಬಂಗಾಳದಲ್ಲಿ ನಿನ್ನೆ ಚುನಾವಣಾ ಪ್ರಚಾರ ಭಾಷಣದ ವೇಳೆ ನಡೆ ಗಲಭೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಅಮಿತ್ ಷಾ ಅವರಿಗೆ ಬಂಗಾಳದಲ್ಲಿ ಮಾತನಾಡಲು ಅವಕಾಶ ನೀಡುತ್ತಿಲ್ಲ. ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಮಾತನಾಡುವ ಅವಕಾಶವಿದೆ ಎಂದರು. ಸರ್ಕಾರ ಏನೂ ಕೆಲಸ ಮಾಡಿಲ್ಲ. ಅದನ್ನು ಮುಚ್ಚಿಕೊಳ್ಳಲು ಇತರರಿಗೂ ಮಾತನಾಡಲು ಅವಕಾಶ ನೀಡುತ್ತಿಲ್ಲ ಎಂದು ಹೇಳಿದರು.
-
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ












Click it and Unblock the Notifications