ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಜೆಪಿ ಅಧ್ಯಕ್ಷರ ಬದಲಾವಣೆ ವಿಷಯದಲ್ಲಿ ಆರ್‌ಎಸ್‌ಎಸ್‌ ಹಸ್ತಕ್ಷೇಪವಿಲ್ಲ: ಕಲ್ಲಡ್ಕ ಪ್ರಭಾಕರ್ ಭಟ್

|
Google Oneindia Kannada News

ಮೈಸೂರು, ಮೇ 15: ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ವಿಷಯದಲ್ಲಿ ಆರ್‌ಎಸ್‌ಎಸ್‌ ಮೂಗು ತೂರಿಸುವುದಿಲ್ಲ ಎಂದು ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರು ತಿಳಿಸಿದ್ದಾರೆ.

ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧ್ಯಕ್ಷರ ಬದಲಾವಣೆ ವಿಷಯವನ್ನು ಬಿಜೆಪಿ ಪಕ್ಷ ಮತ್ತು ಅದರ ಹೈಕಮಾಂಡ್ ನೋಡಿಕೊಳ್ಳುತ್ತದೆ ಎಂದು ಅವರು ಹೇಳಿದ್ದಾರೆ.

ಇಡೀ ದೇಶ ಸ್ವಾತಂತ್ರ್ಯಕ್ಕೆ ಹೋರಾಡುತಿತ್ತು, RSS ಬ್ರಿಟಿಷರ ಚಂಚಾಗಿರಿ ಮಾಡುತ್ತಿತ್ತುಇಡೀ ದೇಶ ಸ್ವಾತಂತ್ರ್ಯಕ್ಕೆ ಹೋರಾಡುತಿತ್ತು, RSS ಬ್ರಿಟಿಷರ ಚಂಚಾಗಿರಿ ಮಾಡುತ್ತಿತ್ತು

ಪಕ್ಷದ ಆಂತರಿಕ ವಿಷಯಕ್ಕೂ ಸಂಘ ಪರಿವಾರಕ್ಕೂ ಯಾವುದೇ ಸಂಬಂಧ ಇಲ್ಲ, ಸಂಘದ ಯಾರೊಬ್ಬರೂ ಬಿಜೆಪಿ ರಾಜ್ಯಾಧ್ಯಕ್ಷರ ಸ್ಥಾನಕ್ಕೆ ಆಕಾಂಕ್ಷಿಗಳು ಸಹ ಅಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

RSS do not interfear in Karnataka BJP president change process: Kalladka Prabhakar Bhat

ರಾಜ್ಯ ರಾಜಕಾರಣದ ಬಗ್ಗೆ ಮಾತನಾಡಿರುವ ಅವರು, ಎಪ್ಪತ್ತು ವರ್ಷದಲ್ಲಿ ಮೊದಲ ಬಾರಿಗೆ ಕರ್ನಾಟಕದಲ್ಲಿ ಸರ್ಕಾರವೇ ಇಲ್ಲ ಎಂಬಂತೆ ಭಾಸವಾಗುತ್ತಿದೆ, 38 ಸೀಟು ಪಡೆದ ವ್ಯಕ್ತಿ ಮುಖ್ಯಮಂತ್ರಿ ಆಗುವುದು ಪ್ರಜಾಪ್ರಭುತ್ವದ ವಿಡಂಬನೆ ಎಂದು ಪ್ರಭಾಕರ್ ಭಟ್ ಅವರು ಬೇಸರ ವ್ಯಕ್ತಪಡಿಸಿದರು.

ಪ. ಬಂಗಾಳ ಹಿಂಸಾಚಾರ: ಬಿಜೆಪಿ-ಟಿಎಂಸಿಯಲ್ಲಿ ಹೊಣೆಗಾರರು ಯಾರು? ಪ. ಬಂಗಾಳ ಹಿಂಸಾಚಾರ: ಬಿಜೆಪಿ-ಟಿಎಂಸಿಯಲ್ಲಿ ಹೊಣೆಗಾರರು ಯಾರು?

ಪ್ರಸ್ತುತ ಮೈತ್ರಿ ಪಕ್ಷಗಳ ನಡುವೆ ನಡೆಯುತ್ತಿರುವ ರಾಜಕೀಯ ಕಿತ್ತಾಟಗಳನ್ನು ನೋಡಿದರೆ ಸರ್ಕಾರ ಯಾವಾಗ ಬೇಕಾದರೂ ಉರುಳುಬಹುದು, ಮೇ 23 ರ ಫಲಿತಾಂಶದ ನಂತರ ಸರ್ಕಾರ ಅಲ್ಲಾಡಬಹುದು ಎಂದು ಅವರು ನಿರೀಕ್ಷೆ ವ್ಯಕ್ತಪಡಿಸಿದರು.

ಸ್ವಾತಂತ್ರ್ಯ ಭಾರತದ ಮೊದಲ ಉಗ್ರ ನಾಥೂರಾಮ್ ಗೂಡ್ಸೆ ಎಂದ ಕಮಲ್ ಹಾಸನ್ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಯಾರ್ಯಾರೋ ಏನೇನೋ ಹೇಳುತ್ತಿರುತ್ತಾರೆ ಅದಕ್ಕೆಲ್ಲಾ ಪ್ರತಿಕ್ರಿಯಿಸುತ್ತಾ ಇರಲು ಸಾಧ್ಯವಿಲ್ಲ ಎಂದರು.

ಪಶ್ಚಿಮ ಬಂಗಾಳದಲ್ಲಿ ನಿನ್ನೆ ಚುನಾವಣಾ ಪ್ರಚಾರ ಭಾಷಣದ ವೇಳೆ ನಡೆ ಗಲಭೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಅಮಿತ್ ಷಾ ಅವರಿಗೆ ಬಂಗಾಳದಲ್ಲಿ ಮಾತನಾಡಲು ಅವಕಾಶ ನೀಡುತ್ತಿಲ್ಲ. ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಮಾತನಾಡುವ ಅವಕಾಶವಿದೆ ಎಂದರು. ಸರ್ಕಾರ ಏನೂ ಕೆಲಸ ಮಾಡಿಲ್ಲ. ಅದನ್ನು ಮುಚ್ಚಿಕೊಳ್ಳಲು ಇತರರಿಗೂ ಮಾತನಾಡಲು ಅವಕಾಶ ನೀಡುತ್ತಿಲ್ಲ ಎಂದು ಹೇಳಿದರು.

English summary
RSS leader Kalladka Prabhakar Bhat said, RSS did not interfear in Karnataka BJP president change process. He also said Karnataka government may fall after the May 23 result.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X