ಮೈಸೂರು: ಆರ್ ಟಿಇ ಕಾಯ್ದೆ ಉಲ್ಲಂಘಿಸಿದ ಶಾಲೆಗೆ ಬಿತ್ತು 1. 60 ಕೋಟಿ ದಂಡ
ಮೈಸೂರು, ಮೇ 22 : ಆರ್ ಟಿಇ ಕಾಯ್ದೆ ಉಲ್ಲಂಘನೆ ಆರೋಪದಲ್ಲಿ ಮೈಸೂರಿನ ಪ್ರತಿಷ್ಠಿತ ಖಾಸಗಿ ಶಾಲೆಯೊಂದಕ್ಕೆ ಸಾರ್ವಜನಿಕ ಶಿಕ್ಷಣ ಇಲಾಖೆ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಹಿಂದೆಂದೂ ಕಂಡರಿಯದ ಭಾರಿ ದಂಡ ವಿಧಿಸಿದೆ.
ಮೈಸೂರಿನ ಬನ್ನೂರು ರಸ್ತೆಯ ಬುಗತಗಳ್ಳಿ ಬಳಿ ಇರುವ ಕೈಗಾರಿಕೋದ್ಯಮಿ ಸುಧಾಕರ ಶೆಟ್ಟಿ ಅವರ ಮಾಲೀಕತ್ವದ ಜ್ಞಾನ ಸರೋವರ ಇಂಟರ್ ನ್ಯಾಷನಲ್ ವಸತಿ ಶಾಲೆಗೆ ಬರೋಬ್ಬರಿ 1.ಕೋಟಿ 60 ಲಕ್ಷ ದಂಡ ವಿಧಿಸಲಾಗಿದೆ.

ಪ್ರತಿ ಮಗೂ ಕೂಡ ಶಿಕ್ಷಣದಿಂದ ವಂಚಿತವಾಗಬಾರದು ಎಂಬ ಕಾರಣಕ್ಕೆ ಕಡ್ಡಾಯ ಶಿಕ್ಷಣ ಜಾರಿಗಾಗಿ ಸರ್ಕಾರ ಆರ್ ಟಿ ಇ ಜಾರಿಗೆ ತಂದಿದೆ. ಆದರೆ, ಖಾಸಗಿ ವಿದ್ಯಾ ಸಂಸ್ಥೆಗಳು ಆದೇಶವನ್ನು ದಿಕ್ಕರಿಸಿ ಅರ್ಹರಿಗೆ ವಂಚಿಸುತ್ತಾ ಬಂದಿವೆ.
ಅದರಲ್ಲಿ ಮೈಸೂರಿನ ಪ್ರತಿಷ್ಠಿತ ಶಾಲೆಗಳಲ್ಲಿ ಈ ಶಾಲೆ ಕೂಡ ಒಂದು. 2012ರಿಂದ ಮಕ್ಕಳ ಪ್ರವೇಶ ನೀಡುವಲ್ಲಿ ಆರ್ ಟಿಇ ಸೀಟು ನೀಡದೆ ವಂಚಿಸುತ್ತಿದ್ದ ಈ ಶಾಲೆಯ ಆಟಾಟೋಪ ಕಂಡ ಆರ್ ಟಿಇ ಕಾರ್ಯಕರ್ತರು ದೂರು ದಾಖಲಿಸಿದ್ದರು.
ಇಷ್ಟಾದರೂ ಎಚ್ಚೆತ್ತುಕೊಳ್ಳದ ಶಾಲಾ ಆಡಳಿತ ಮಂಡಳಿ ಎಂದಿನಂತೆ ಅರ್ಹ ಮಕ್ಕಳಿಗೆ ಆರ್ ಟಿಇ ಸೀಟು ನೀಡದೆ ವಂಚಿಸುತ್ತಿತ್ತು. ಹೀಗಾಗಿ ಇದನ್ನ ಗಂಭೀರವಾಗಿ ಪರಿಗಣಿಸಿದ ಸಾರ್ವಜನಿಕರ ಶಿಕ್ಷಣ ಇಲಾಖೆ ಸುಧೀರ್ಘ ವಿಚಾರಣೆ ನಡೆಸಿ, ಆರ್ ಟಿಇ ಸೀಟು ವಂಚಿಸುತ್ತಿದ್ದವರಿಗೆ ಚಾಟಿ ಬೀಸಿ ಆದೇಶ ಹೊರಡಿಸಿದೆ.

ಈ ಕುರಿತು ಪ್ರತಿಕ್ರಿಯಿಸಿದ ಆರ್ಟಿಐ ಕಾರ್ಯಕರ್ತ ಜವರಪ್ಪ, ಆರ್ಟಿಇ 18(1) ಉಲ್ಲಂಘನೆ ಮಾಡಿರುವ ಕಾರಣ 18(5) ರನ್ವಯ ಜ್ನಾನ ಸರೋವರ ಶಾಲೆಗೆ ದಂಡ ವಿಧಿಸಿದ್ದಾರೆ. ಇದು ಸತ್ಯಕ್ಕೆ ಸಿಕ್ಕ ಜಯ ಎಂದು ಸಂತಸ ವ್ಯಕ್ತಪಡಿಸಿದರು.
-
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಸರ್ಕಾರಿ PU ಕಾಲೇಜುಗಳ ಮೂಲಸೌಕರ್ಯ ಅಭಿವೃದ್ಧಿಗೆ ಬರೋಬ್ಬರಿ 9,383 ರೂ. ಲಕ್ಷ ಅನುದಾನ ಮಂಜೂರು -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
UPSC ಪೂರ್ವಭಾವಿ ಪರೀಕ್ಷೆ ಮುಗಿದ ತಕ್ಷಣವೇ ಕೀ ಉತ್ತರಗಳ ಬಿಡುಗಡೆಗೆ ಕೇಂದ್ರ ಸರ್ಕಾರದ ನಿರ್ಧಾರ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
CBSE ಶಾಲೆಗಳಲ್ಲಿ ಋತುಚಕ್ರ ನೈರ್ಮಲ್ಯ ಕಡ್ಡಾಯ: ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ಹೊಸ ನಿಯಮ ಜಾರಿ -
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications