ಮೈಸೂರು:ರೋಹಿಣಿ ಸಿಂಧೂರಿ ವಿರುದ್ಧ 1ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಸಾ. ರಾ. ಮಹೇಶ್
ಮೈಸೂರು, ಸೆಪ್ಟಂಬರ್ 11: ಶಾಸಕರ ವಿರುದ್ಧ ಸುಳ್ಳು ಆರೋಪ ಮಾಡಿದ ಹಿನ್ನೆಲೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಒಂದು ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿದೆ ಎಂದು ಸಾ. ರಾ. ಮಹೇಶ್ ಹೇಳಿದ್ದಾರೆ.
ಈ ಸಂಬಂಧ ಶಾಸಕ ಸಾ. ರಾ. ಮಹೇಶ್ ಮತ್ತು ಅವರ ಪರ ವಕೀಲರಾದ ಅರುಣ್ ಕುಮಾರ್ ಮೈಸೂರಲ್ಲಿ ಭಾನುವಾರ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ರೋಹಿಣಿ ಸಿಂಧೂರಿ ಅವರು ಮೈಸೂರಿನ ಜಿಲ್ಲಾಧಿಕಾರಿ ಆಗಿದ್ದಾಗ ನಾನು ಹಲವು ಅಕ್ರಮಗಳನ್ನು ಬಯಲು ಮಾಡಿದ್ದೆ, ಈ ಸಂಬಂಧ ರೋಹಿಣಿ ಅವರು ನನ್ನ ವಿರುದ್ಧ ಭೂ ಹಗರಣದಂತಹ ಸುಳ್ಳು ಆರೋಪ ಮಾಡಿದ್ದರು ಎಂದ ಶಾಸಕ ಸಾ. ರಾ. ಮಹೇಶ್ ಹೇಳಿದ್ದಾರೆ.
ಹೀಗೆ ಸುಳ್ಳು ಆರೋಪ ಮಾಡಿದ್ದರಿಂದಾಗಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಒಂದು ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲಿಸಿರುವುದಾಗಿ ಅವರು ತಿಳಿಸಿದರು. ಮೈಸೂರಲ್ಲಿ ಈ ಹಿಂದೆ ಜಿಲ್ಲಾಧಿಕಾರಿ ಆಗಿದ್ದವರು ಐಷಾರಾಮಿ ಜೀವನ ನಡೆಸಿದ್ದಾರೆ. ಸರ್ಕಾರದ ಹಣ ದುರುಪಯೋಗ ಮಾಡಿಕೊಂಡಿದ್ದಲ್ಲದೇ, ಕೋವಿಡ್ ಸಮಯದಲ್ಲಿ ಬೇಜವಾಬ್ದಾರಿಯಿಂದ ವರ್ತಿಸಿದ್ದಾರೆ. ಇದನ್ನು ಮುಚ್ಚಿ ಹಾಕುವ ಸಲುವಾಗಿ ರೋಹಿಣಿ ಸಿಂಧೂರಿ ಅವರು ಕೊರೊನಾ ತಪಾಸಣೆ ಮತ್ತು ಕೋವಿಡ್ ಸಾವಿನ ಸಂಖ್ಯೆಯನ್ನು ಮುಚ್ಚಿ ಹಾಕಿದ್ದರು. ಈ ಬಗ್ಗೆ ಸರ್ಕಾರದ ಮಟ್ಟದ ವರದಿ ಆಧರಿಸಿ ವರ್ಗಾವಣೆ ಮಾಡಲಾಗಿತ್ತು. ಆದರೆ ನಾನು ವರ್ಗಾವಣೆ ಬೇಡ ಅಮಾನತು ಮಾಡಿ ಎಂದು ಕೋರಿದ್ದೆ ಎಂದರು.

ಇದಾದ ಮೇಲೆ ವರ್ಗಾವಣೆಗೊಂಡ ಅವರು ಭೂ ಅಕ್ರಮದಿಂದ ನನ್ನ ವರ್ಗಾವಣೆ ಆಗಿದೆ ಎಂದು ಬಿಂಬಿಸಲು ಅವರು ಹೊರಟಿದ್ದರು. ಈ ವೇಳೆಯೆ ನಾನು ಮಾನನಷ್ಟ ಮೊಕದ್ದಮೆ ಹಾಕುವುದಾಗಿ ಹೇಳಿದ್ದೆ ಅದರಂತೆ ಇದೀಗ ಪ್ರಕರಣ ದಾಖಲಿಸಿದ್ದೇವೆ ಎಂದು ಸಾ. ರಾ. ಮಹೇಶ್ ಹೇಳಿದರು.
ಅಧಿಕಾರಿಯ ಮುಖವಾಡ ಕಳಚುತ್ತೇನೆ; ಜನರು ಇಂಥ ಅಧಿಕಾರಿಗಳ ಮಾತು ಬೇಗ ನಂಬುತ್ತಾರೆ. ಆದರೆ ರಾಜಕಾರಣಿಗಳ ಮಾತನ್ನು ಅನುಮಾನಿಸುತ್ತಾರೆ. ನಾನು ರಾಜಕೀಯ ಬೇಕಾದರೂ ಬಿಡುತ್ತೇನೆ. ಆದರೆ ಈ ಅಧಿಕಾರಿ (ರೋಹಿಣಿ ಸಿಂಧೂರಿ) ಮುಖವಾಡ ಕಳಚದೇ ಬಿಡುವುದಿಲ್ಲ ಎಂದು ಸಾ.ರಾ.ಮಹೇಶ್ ಗುಡುಗಿದರು.
ಈ ವೇಳೆ ಮಾತನಾಡಿದ ವಕೀಲ ಅರುಣ್ ಕುಮಾರ್, ಸಾ. ರಾ. ಮಹೇಶ್ ಅವರು ಭೂ ಕಬಳಿಕೆ ಮಾಡಿದ್ದಾರೆ ಎಂದು ರೋಹಿಣಿ ಸಿಂಧರಿ ಹೇಳಿಕೆಯ ಆಡಿಯೋ ವೈರಲ್ ಆಗಿತ್ತು. ಅದು ತಮ್ಮದೇ ಧ್ವನಿ ಎಂದು ಅವರು ಒಪ್ಪಿಕೊಂಡಿದ್ದಾರೆ. ಇದು ಖಾಸಗಿ ಸಂಭಾಷಣೆ ಎಂದಿದ್ದಾರೆ. ಸಾ. ರಾ. ಮಹೇಶ್ ಭೂ ಕಬಳಿಕೆ ಮಾಡಿದ್ದಾರೆ ಎಂದು ಬಿಂಬಿಸಿದ್ದರು. ಈ ಸಂಬಂಧ ರೋಹಿಣಿ ಅವರ ವಿರುದ್ಧ ಒಂದು ಕೋಟಿ ರೂ.ನ ಮಾನನಷ್ಟ ಮೊಕದ್ದಮೆ ಹೂಡಿದ್ದೇವೆ ಎಂದು ಅವರು ತಿಳಿಸಿದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications