ಕ್ವಾರಂಟೈನ್ನಲ್ಲಿ ಮಾಜಿ ಸಚಿವ ಸಾರಾ ಮಹೇಶ್
ಮೈಸೂರು, ಜುಲೈ 6: ಮಾಜಿ ಸಚಿವ ಸಾರಾ ಮಹೇಶ್ರನ್ನು ಕ್ವಾರಂಟೈನ್ನಲ್ಲಿ ಇಡಲಾಗಿದೆ. ಕೆ.ಆರ್ ನಗರ ತಾಲೂಕಿನ ಮಹಿಳಾ ತಹಶೀಲ್ದಾರ್ ಗೆ ಕೊರೊನಾ ಪಾಸಿಟಿವ್ ಇರುವುದು ದೃಢವಾಗಿದೆ. ಅವರ ಸಂಪರ್ಕ ಹೊಂದಿದ್ದ ಕಾರಣ ಸಾರಾ ಮಹೇಶ್ರನ್ನು ಕ್ವಾರಂಟೈನ್ ಮಾಡಲಾಗಿದೆ.
Recommended Video
ಮೈಸೂರಿನಲ್ಲಿ ದಿನೇ ದಿನೇ ಕೊರೊನಾ ಸೋಂಕು ಹಬ್ಬುತ್ತಿದೆ. ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಕೆ.ಆರ್ ನಗರ ತಾಲೂಕಿನ ಮಹಿಳಾ ತಹಶೀಲ್ದಾರ್ ಗೆ ಸಹ ಸೋಂಕು ತಗುಲಿದ್ದು, ಇದರಿಂದ ಸಾರಾ ಮಹೇಶ್ ಕ್ವಾರಂಟೈನ್ನಲ್ಲಿ ಇರುವಂತಾಗಿದೆ.
ಎರಡು ದಿನಗಳ ಹಿಂದೆ ತಹಶೀಲ್ದಾರ್ ಜೊತೆ ಸಾ.ರಾ ಮಹೇಶ್ ಕೆ.ಆರ್.ನಗರ ತಾಲೂಕಿನ ಸಾಲಿಗ್ರಾಮದ ಸೀಲ್ಡೌನ್ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿಯ ಬಗ್ಗೆ ಪರಿಶೀಲನೆ ನಡೆಸಿದ್ದರು. ಹೀಗಾಗಿ, ತಹಶೀಲ್ದಾರ್ ಜೊತೆಗೆ ಸಂಪರ್ಕದಲ್ಲಿ ಇದ್ದ ಕಾರಣ ಕ್ವಾರಂಟೈನ್ ಮಾಡಲಾಗಿದೆ.

ಸಾರಾ ಮಹೇಶ್ ತಹಶೀಲ್ದಾರ್ ಜೊತೆಗೆ ಕೆ.ಆರ್.ನಗರದ ಬ್ರಾಹ್ಮಣರ ಬೀದಿ ಹಾಗೂ ಕೋಟೆ ಬೀದಿಗಳಲ್ಲಿನ 150ಕ್ಕೂ ಹೆಚ್ಚು ಕುಟುಂಬದವರಿಗೆ ಅಗತ್ಯ ವಸ್ತುಗಳು ಹಾಗೂ ಪಡಿತರ ದಿನಸಿ ಪದಾರ್ಥ ಔಷಧಿಗಳನ್ನು ವಿತರಿಸಿದ್ದರು.
ಕರ್ನಾಟಕದಲ್ಲಿ ಕೊರೊನಾ ಕಾಟ ಹೆಚ್ಚಾಗಿದೆ. ನಿನ್ನೆ ಬರೋಬ್ಬರಿ 1925 ಮಂದಿಗೆ ಸೋಂಕು ಹರಡಿದೆ. ಮೈಸೂರಿನ 25 ಮಂದಿಗೆ ನಿನ್ನೆ ಕೊರೊನಾ ಸೋಂಕು ಅಂಟಿದೆ.












Click it and Unblock the Notifications