ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

"ನೀವು ಬ್ಲೂಬಾಯ್, ಯಾವ ಹೀರೋಯಿನ್ ಜೊತೆ ಮಾತಾಡಿದ್ದೀರಿ ಅನ್ನೋ ದಾಖಲೆ ಇದೆ"; ಸಾರಾ ಮಹೇಶ್

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಸೆಪ್ಟೆಂಬರ್ 23: "ನೀವು ಯಾವ ಹೀರೋಯಿನ್ ಜೊತೆ ಯಾವ ರೀತಿ ಮಾತನಾಡಿದ್ದೀರಿ ಅನ್ನೋ ದಾಖಲೆ ಇದೆ. ನಿಮ್ಮಂಥ ಜೀವನ ನಾನು ಮಾಡಿದರೆ ಇಷ್ಟೊತ್ತಿಗೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೆ" ಎಂದು ಮಾಜಿ ಸಚಿವ ಸಾರಾ ಮಹೇಶ್ ಅವರು ಅನರ್ಹ ಶಾಸಕ ಎಚ್ ವಿಶ್ವನಾಥ್ ವಿರುದ್ಧ ಹೊಸ ಬಾಂಬ್ ಸಿಡಿಸಿದ್ದಾರೆ.

"ಅತೃಪ್ತ ಪ್ರೇತ ತೃಪ್ತಿಪಡಿಸಲು ಯಡಿಯೂರಪ್ಪ ಯತ್ನ"; ಸಾರಾ ಮಹೇಶ್ ವ್ಯಂಗ್ಯ

ಇಂದು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, "ವಿಶ್ವನಾಥ್ ಅತೃಪ್ತ ಪ್ರೇತಾತ್ಮ. ತಾನು ಮಾಡಿದ ತಪ್ಪನ್ನು ಬೇರೆಯವರ ಮೇಲೆ ಹಾಕುವ ಪ್ರಯತ್ನ ಮಾಡುತ್ತಿದ್ದಾರೆ. ವೈಯಕ್ತಿಕವಾಗಿ ನನ್ನ ತೇಜೋವಧೆ ಮಾಡುತ್ತಿದ್ದಾರೆ" ಎಂದು ಹೇಳಿದರು.

 ನೀವು ಬ್ಲೂಬಾಯ್ ಎಂದ ಮಹೇಶ್

ನೀವು ಬ್ಲೂಬಾಯ್ ಎಂದ ಮಹೇಶ್

"ನೀವು ಸೆಕ್ಸ್ ಫಿಲಂ ಹೀರೋ. ಬ್ಲೂ ಬಾಯ್. ಯಾವ ಪುಣ್ಯಾತ್ಮ ನಿಮಗೆ ಹಳ್ಳಿ ಹಕ್ಕಿ ಎಂದು ಹೆಸರಿಟ್ಟನೋ. ಚಳಿಗಾಲದಲ್ಲಿ ಒಂದು ಗೂಡು, ಮಳೆಗಾಲದಲ್ಲಿ ಒಂದು ಗೂಡು, ಬೇಸಿಗೆ ಕಾಲದಲ್ಲಿ ಒಂದು ಗೂಡು ಹುಡುಕಿ ಕೊಳ್ಳುತ್ತೀರಾ" ಎಂದು ಗುಡುಗಿದರು.

 ಜನ ನೀವು ಹೋದಾಗ ಬಾಗಿಲು ಹಾಕಿಕೊಂಡಿದ್ಯಾಕೆ ಎಂಬ ಪ್ರಶ್ನೆ

ಜನ ನೀವು ಹೋದಾಗ ಬಾಗಿಲು ಹಾಕಿಕೊಂಡಿದ್ಯಾಕೆ ಎಂಬ ಪ್ರಶ್ನೆ

"25 ಲಕ್ಷ ದುಡ್ಡು ಪಡೆದಿದ್ದೇನೆ ಈ ವರ್ಗಾವಣೆ ಮಾಡಿ ಕೊಡಿ ಎಂದು ಅವತ್ತು ಕೇಳಿದರಲ್ಲ. ಅದನ್ನು ನಾನು ಮಾಡಿಸಿ ಕೊಡಲಿಲ್ಲ ಎಂದು ಹೀಗೆ ಮಾತನಾಡುತ್ತಿದ್ದೀರಾ? ನೀವು ವಕೀಲರಾಗಿದ್ದಾಗ ಒಬ್ಬ ವಿಧವೆ ನಿಮ್ಮ ಬಳಿ ನ್ಯಾಯ ಕೇಳೋಕೆ ಬಂದ ಅವರ ಕಥೆ ಏನಾಯ್ತು ಎಂದು ಹೇಳಬೇಕಾ? 1994ರಲ್ಲಿ ಕೆಆರ್ ನಗರದ ಹಳ್ಳಿಗಳಿಗೆ ನೀವು ಹೋದಾಗ ಮನೆ ಬಾಗಿಲು ಯಾಕೆ ಹಾಕಿಕೊಳ್ಳುತ್ತಿದ್ದರು ಅನ್ನೋದು ಹೇಳಬೇಕಾ?" ಎಂದು ವಿಶ್ವನಾಥ್ ಅವರನ್ನು ಪ್ರಶ್ನೆ ಮಾಡಿದರು.

ದೇವೇಗೌಡರ ಕುಟುಂಬಕ್ಕೆ ಮೋಸ ಮಾಡಿದವರು ಉದ್ಧಾರ ಆಗಲ್ಲ: ಸಾರಾ ಮಹೇಶ್ದೇವೇಗೌಡರ ಕುಟುಂಬಕ್ಕೆ ಮೋಸ ಮಾಡಿದವರು ಉದ್ಧಾರ ಆಗಲ್ಲ: ಸಾರಾ ಮಹೇಶ್

 ಒಂದೇ ಒಂದು ಕಪ್ಪು ಚುಕ್ಕೆ ಇಲ್ಲ ಎಂದು ಗುಡುಗಿದ ಸಚಿವ

ಒಂದೇ ಒಂದು ಕಪ್ಪು ಚುಕ್ಕೆ ಇಲ್ಲ ಎಂದು ಗುಡುಗಿದ ಸಚಿವ

"ನಾನು ನಿಮಗಿಂತ ಹೆಚ್ಚಾಗಿ ಏಕವಚನದಲ್ಲಿ ಮಾತಾಡಬಲ್ಲೆ. ಆದರೆ ನಮ್ಮ ತಂದೆ ಸಂಸ್ಕಾರ ಕಲಿಸಿದ್ದಾರೆ. ಅದಕ್ಕೆ ಮಾತಾಡಲ್ಲ. ಚಾಮುಂಡಿ ಬೆಟ್ಟದಲ್ಲಿ ಪ್ರಮಾಣ ಮಾಡಿ ಸಾಕು, ನಾನು ರಾಜಕೀಯ ಜೀವನದಿಂದ ನಿವೃತ್ತಿ ಪಡೆಯುತ್ತೇನೆ. ನಾನಾ ಅಯೋಗ್ಯ ನೀವಾ ಅಂತಾ ತೀರ್ಮಾನವಾಗಲಿ. ನಿಮ್ಮ ಯೋಗ್ಯತೆ ಮೈಸೂರು ಮತ್ತು ಮಡಿಕೇರಿ ಜನರಿಗೆ ಗೊತ್ತಿದೆ. ಕೊಚ್ಚೆ ಗುಂಡಿ ನೀವು, ನಿಮ್ಮ ಬಗ್ಗೆ ಮಾತನಾಡಿದರೆ ನಮ್ಮ ಬಾಯಿ ಹೊಲಸಾಗುತ್ತೆ. ನನ್ನ ವೈಯಕ್ತಿಕ ಜೀವನದಲ್ಲಿ ಒಂದೇ ಒಂದು ಕಪ್ಪು ಚುಕ್ಕೆ ಇಲ್ಲ" ಎಂದು ಕಿಡಿಕಾರಿದರು.

 ಆಣೆ ಮಾಡುವಂತೆ ಸವಾಲ್

ಆಣೆ ಮಾಡುವಂತೆ ಸವಾಲ್

"ವಿಶ್ವನಾಥ್ ಬಾಯಿ ಬಿಟ್ಟರೆ ಸುಳ್ಳು ಹೇಳುತ್ತಾರೆ. ಅನರ್ಹ ಆದ ಮೇಲೆ ಎಚ್ ವಿಶ್ವನಾಥ್ ಹೋಗಿ ಹುಚ್ಚು ವಿಶ್ವನಾಥ್ ಆಗಿದ್ದಾರೆ. ಅವರಿಗೆ ಮೊದಲು ಚಿಕಿತ್ಸೆ ಕೊಡಿಸಬೇಕು. 9 ದಿವಸದ ನವರಾತ್ರಿಯಲ್ಲಿ ಚಾಮುಂಡಿ ಬೆಟ್ಟಕ್ಕೆ ಬನ್ನಿ, ನಾನು ಯಾವುದೇ ಆಸೆ ಆಮಿಷಗಳಿಗೂ ಬಲಿಯಾಗಿಲ್ಲ. ನನಗೆ ಮಂತ್ರಿ ಸ್ಥಾನ ಬೇಡ ಎಂದು ಚಾಮುಂಡಿ ದೇವಿ ಮುಂದೆ ಪ್ರಮಾಣ ಮಾಡಿ ಹೇಳಿ" ಎಂದು ಸವಾಲ್ ಹಾಕಿದರು.

"ಜಿ.ಟಿ.ದೇವೇಗೌಡ ಅವರಷ್ಟು ವಿಶಾಲ ಹೃದಯ ನನಗಿಲ್ಲ" ಮತ್ತೆ ಸಾರಾ ಮಹೇಶ್ ವಾಕ್ಸಮರ

English summary
"There is a record of what you have talked with heroin. If I had lived a life like your, I would have committed suicide," said former minister Sara Mahesh against h vishwanath in mysuru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X