Karnataka vs Goa: ರಣಜಿ ಆಡಲು ಮೈಸೂರಿಗೆ ಬಂದ ಜೂನಿಯರ್ ತೆಂಡೂಲ್ಕರ್: ಮೊದಲ ದಿನ ಕರ್ನಾಟಕ ಮೇಲುಗೈ
ಮೈಸೂರು: ನಗರದ ಮಾನಸಗಂಗೋತ್ರಿಯ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಮೈದಾನ (ಗ್ರೇಡ್)ದಲ್ಲಿ ರಣಜಿ ಕ್ರಿಕೆಟ್ ಪಂದ್ಯಾವಳಿ ಪಂದ್ಯ ನಡೆಯುತ್ತಿದೆ. ಕರ್ನಾಟಕ ತಂಡ ಗೋವಾ ತಂಡವನ್ನು ಎದುರಿಸುತ್ತಿದೆ.
ಗ್ರೇಡ್ ಮೈದಾನ 2006ರಿಂದಲೂ ಪ್ರಥಮ ದರ್ಜೆ ಕ್ರಿಕೆಟ್ ಪಂದ್ಯಾವಳಿಗಳಿಗೆ ಅತಿಥ್ಯ ನೀಡುತ್ತಿದೆ. 2010ರಲ್ಲಿ ನಡೆದ ಕರ್ನಾಟಕ ಮತ್ತು ಮುಂಬೈ ನಡುವಿನ ಫೈನಲ್ ರಣಜಿ ಸೇರಿದಂತೆ ಒಟ್ಟು 15 ರಣಜಿ ಪಂದ್ಯಗಳಿಗೆ ಅತಿಥ್ಯ ವಹಿಸಿದೆ. ಇದೀಗ ನಾಲ್ಕು ವರ್ಷಗಳ ಬಳಿಕ ರಣಜಿ ಕ್ರಿಕೆಟ್ ಆತಿಥ್ಯ ವಹಿಸುತ್ತಿದ್ದು, ಕ್ರಿಕೆಟ್ ಆಸಕ್ತರನ್ನು ಸೆಳೆಯುತ್ತಿದೆ.

ಕರ್ನಾಟಕ ಮತ್ತು ಗೋವಾ ತಂಡಗಳ ನಡುವೆ ಜ.19ರಿಂದ 22ರ ಪ್ರಸಕ್ತ ಸಾಲಿನ ಮೂರನೇ ರಣಜಿ ಪಂದ್ಯ ನಡೆಯುತ್ತಿದೆ. ಇತ್ತೀಚಿಗಷ್ಟೇ ಈ ಮೈದಾನದಲ್ಲಿ 23 ವರ್ಷದೊಳಗಿನ ಸಿ.ಕೆ.ನಾಯ್ಡು ಟ್ರೋಫಿಯ ಕರ್ನಾಟಕ ಮತ್ತು ಹೈದರಾಬಾದ್ ನಡುವೆ ನಡೆದಿತ್ತು.
ಮೈಸೂರಿನಲ್ಲಿ ಜೂನಿಯರ್ ತೆಂಡೂಲ್ಕರ್
ಮಾಜಿ ಆಟಗಾರ, ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಪುತ್ರ ಹಾಗೂ ಗೋವಾ ತಂಡದ ಪ್ರಮುಖ ವೇಗಿಗಳಲ್ಲಿ ಒಬ್ಬರಾಗಿರುವ ಅರ್ಜುನ್ ತೆಂಡೂಲ್ಕರ್ ಗುರುವಾರ ಬೆಳಗ್ಗೆ ಮತ್ತು ಸಂಜೆ ಗಂಗೋತ್ರಿ ಗ್ರೇಡ್ಸ್ನಲ್ಲಿ ಅಭ್ಯಾಸ ನಡೆಸಿದರು. ಮಾತ್ರವಲ್ಲದೇ ಪಂದ್ಯದ ಹಿನ್ನೆಲೆಯಲ್ಲಿ ವ್ಯಾಯಾಮ ಹಾಗೂ ಫಿಟ್ನೆಸ್ನಲ್ಲಿ ತೊಡಗಿಸಿಕೊಂಡರು. ಸಚಿನ್ ಪುತ್ರ ಇದೀಗ ಕ್ರಿಕಿಟ್ ಅಭಿಮಾನಿಗಳ ಆಕರ್ಷಣೆ ಕೇಂದ್ರಬಿಂದುವಾಗಿದ್ದಾರೆ.
ಹುಬ್ಬಳ್ಳಿಯಲ್ಲಿ ನಡೆದ ತನ್ನ ಮೊದಲ ಪಂದ್ಯದಲ್ಲಿ ಪಂಜಾಬ್ ವಿರುದ್ಧ ಶುಭಾರಂಭ ಮಾಡಿದ್ದ ಕರ್ನಾಟಕ, ದ್ವಿತೀಯ ಪಂದ್ಯದಲ್ಲಿ ಗುಜರಾತ್ ವಿರುದ್ಧ ಸೋಲನುಭವಿಸಿತ್ತು. ಹೀಗಾಗಿ ಗೋವಾ ವಿರುದ್ಧದ ಮೂರನೇ ಪಂದ್ಯದಲ್ಲಿ ಗೆಲುವಿನ ಲಯ ಕಂಡುಕೊಳ್ಳಲು ಮಯಾಂಕ್ ಬಳಗ ಹವಣಿಸುತ್ತಿದೆ.
ಸ್ಟಾರ್ ಆಟಗಾರರ ಆಗಮನ
ಎರಡು ತಂಡಗಳ ಆಟಗಾರರು ಜ.16 ಅಥವಾ 17ರಂದು ನಗರಕ್ಕೆ ಬಂದು ಖಾಸಗಿ ಹೋಟೆಲ್ನಲ್ಲಿ ವಾಸ್ತವ್ಯ ಹೂಡಿ ಅಭ್ಯಾಸ ಆಟಗಾರರು ಅಭ್ಯಾಸ ಮಾಡಿದರು. ಟಾಸ್ ಗೆದ್ದ ಗೋವಾ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತು. ಕರ್ನಾಟಕ ಉತ್ತಮ ಬೌಲಿಂಗ್ ದಾಳಿ ಸಂಘಟಿಸುವ ಮೂಲಕ ಗೋವಾ ತಂಡವನ್ನು ಕಟ್ಟಿಹಾಕುವಲ್ಲಿ ಯಶಸ್ವಿಯಾಯಿತು.
ಮೊದಲ ದಿನದಾಟದ ಅಂತ್ಯಕ್ಕೆ ಗೋವಾ 8 ವಿಕೆಟ್ ಕಳೆದುಕೊಂಡು 228 ರನ್ ಗಳಿಸಿದೆ. ಗೋವಾ ಪರವಾಗಿ ಸ್ನೇಹಲ್ ಕೌತಂಕರ್ 83 ರನ್ ಗಳಿಸಿದರೆ, ನಾಯಕ ದರ್ಶನ್ ಮಿಸಳ್ 39 ರನ್ ಗಳಿಸಿದರು. ಅರ್ಜುನ್ ತೆಂಡೂಲ್ಕರ್ ದಿನದಾಂತ್ಯದಲ್ಲಿ 10 ರನ್ ಗಳಿಸಿ ಅಜೇಯರಾಗಿ ಉಳಿದಿದ್ದಾರೆ.
ಕರ್ನಾಟಕ ಪರವಾಗಿ ವಿಜಯ್ ಕುಮಾರ್ ವೈಶಾಖ್ ಮತ್ತು ರೋಹಿತ್ ಕುಮಾರ್ ತಲಾ 3 ವಿಕೆಟ್ ಪಡೆದರು. ವಾಸುಕಿ ಕೌಶಿಕ್ ಮತ್ತು ಮುರಳೀಧರ ವೆಂಕಟೇಶ್ ತಲಾ ಒಂದು ವಿಕೆಟ್ ಪಡೆದುಕೊಂಡರು.
-
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ












Click it and Unblock the Notifications