Karnataka vs Goa: ರಣಜಿ ಆಡಲು ಮೈಸೂರಿಗೆ ಬಂದ ಜೂನಿಯರ್ ತೆಂಡೂಲ್ಕರ್: ಮೊದಲ ದಿನ ಕರ್ನಾಟಕ ಮೇಲುಗೈ
ಮೈಸೂರು: ನಗರದ ಮಾನಸಗಂಗೋತ್ರಿಯ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಮೈದಾನ (ಗ್ರೇಡ್)ದಲ್ಲಿ ರಣಜಿ ಕ್ರಿಕೆಟ್ ಪಂದ್ಯಾವಳಿ ಪಂದ್ಯ ನಡೆಯುತ್ತಿದೆ. ಕರ್ನಾಟಕ ತಂಡ ಗೋವಾ ತಂಡವನ್ನು ಎದುರಿಸುತ್ತಿದೆ.
ಗ್ರೇಡ್ ಮೈದಾನ 2006ರಿಂದಲೂ ಪ್ರಥಮ ದರ್ಜೆ ಕ್ರಿಕೆಟ್ ಪಂದ್ಯಾವಳಿಗಳಿಗೆ ಅತಿಥ್ಯ ನೀಡುತ್ತಿದೆ. 2010ರಲ್ಲಿ ನಡೆದ ಕರ್ನಾಟಕ ಮತ್ತು ಮುಂಬೈ ನಡುವಿನ ಫೈನಲ್ ರಣಜಿ ಸೇರಿದಂತೆ ಒಟ್ಟು 15 ರಣಜಿ ಪಂದ್ಯಗಳಿಗೆ ಅತಿಥ್ಯ ವಹಿಸಿದೆ. ಇದೀಗ ನಾಲ್ಕು ವರ್ಷಗಳ ಬಳಿಕ ರಣಜಿ ಕ್ರಿಕೆಟ್ ಆತಿಥ್ಯ ವಹಿಸುತ್ತಿದ್ದು, ಕ್ರಿಕೆಟ್ ಆಸಕ್ತರನ್ನು ಸೆಳೆಯುತ್ತಿದೆ.

ಕರ್ನಾಟಕ ಮತ್ತು ಗೋವಾ ತಂಡಗಳ ನಡುವೆ ಜ.19ರಿಂದ 22ರ ಪ್ರಸಕ್ತ ಸಾಲಿನ ಮೂರನೇ ರಣಜಿ ಪಂದ್ಯ ನಡೆಯುತ್ತಿದೆ. ಇತ್ತೀಚಿಗಷ್ಟೇ ಈ ಮೈದಾನದಲ್ಲಿ 23 ವರ್ಷದೊಳಗಿನ ಸಿ.ಕೆ.ನಾಯ್ಡು ಟ್ರೋಫಿಯ ಕರ್ನಾಟಕ ಮತ್ತು ಹೈದರಾಬಾದ್ ನಡುವೆ ನಡೆದಿತ್ತು.
ಮೈಸೂರಿನಲ್ಲಿ ಜೂನಿಯರ್ ತೆಂಡೂಲ್ಕರ್
ಮಾಜಿ ಆಟಗಾರ, ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಪುತ್ರ ಹಾಗೂ ಗೋವಾ ತಂಡದ ಪ್ರಮುಖ ವೇಗಿಗಳಲ್ಲಿ ಒಬ್ಬರಾಗಿರುವ ಅರ್ಜುನ್ ತೆಂಡೂಲ್ಕರ್ ಗುರುವಾರ ಬೆಳಗ್ಗೆ ಮತ್ತು ಸಂಜೆ ಗಂಗೋತ್ರಿ ಗ್ರೇಡ್ಸ್ನಲ್ಲಿ ಅಭ್ಯಾಸ ನಡೆಸಿದರು. ಮಾತ್ರವಲ್ಲದೇ ಪಂದ್ಯದ ಹಿನ್ನೆಲೆಯಲ್ಲಿ ವ್ಯಾಯಾಮ ಹಾಗೂ ಫಿಟ್ನೆಸ್ನಲ್ಲಿ ತೊಡಗಿಸಿಕೊಂಡರು. ಸಚಿನ್ ಪುತ್ರ ಇದೀಗ ಕ್ರಿಕಿಟ್ ಅಭಿಮಾನಿಗಳ ಆಕರ್ಷಣೆ ಕೇಂದ್ರಬಿಂದುವಾಗಿದ್ದಾರೆ.
ಹುಬ್ಬಳ್ಳಿಯಲ್ಲಿ ನಡೆದ ತನ್ನ ಮೊದಲ ಪಂದ್ಯದಲ್ಲಿ ಪಂಜಾಬ್ ವಿರುದ್ಧ ಶುಭಾರಂಭ ಮಾಡಿದ್ದ ಕರ್ನಾಟಕ, ದ್ವಿತೀಯ ಪಂದ್ಯದಲ್ಲಿ ಗುಜರಾತ್ ವಿರುದ್ಧ ಸೋಲನುಭವಿಸಿತ್ತು. ಹೀಗಾಗಿ ಗೋವಾ ವಿರುದ್ಧದ ಮೂರನೇ ಪಂದ್ಯದಲ್ಲಿ ಗೆಲುವಿನ ಲಯ ಕಂಡುಕೊಳ್ಳಲು ಮಯಾಂಕ್ ಬಳಗ ಹವಣಿಸುತ್ತಿದೆ.
ಸ್ಟಾರ್ ಆಟಗಾರರ ಆಗಮನ
ಎರಡು ತಂಡಗಳ ಆಟಗಾರರು ಜ.16 ಅಥವಾ 17ರಂದು ನಗರಕ್ಕೆ ಬಂದು ಖಾಸಗಿ ಹೋಟೆಲ್ನಲ್ಲಿ ವಾಸ್ತವ್ಯ ಹೂಡಿ ಅಭ್ಯಾಸ ಆಟಗಾರರು ಅಭ್ಯಾಸ ಮಾಡಿದರು. ಟಾಸ್ ಗೆದ್ದ ಗೋವಾ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತು. ಕರ್ನಾಟಕ ಉತ್ತಮ ಬೌಲಿಂಗ್ ದಾಳಿ ಸಂಘಟಿಸುವ ಮೂಲಕ ಗೋವಾ ತಂಡವನ್ನು ಕಟ್ಟಿಹಾಕುವಲ್ಲಿ ಯಶಸ್ವಿಯಾಯಿತು.
ಮೊದಲ ದಿನದಾಟದ ಅಂತ್ಯಕ್ಕೆ ಗೋವಾ 8 ವಿಕೆಟ್ ಕಳೆದುಕೊಂಡು 228 ರನ್ ಗಳಿಸಿದೆ. ಗೋವಾ ಪರವಾಗಿ ಸ್ನೇಹಲ್ ಕೌತಂಕರ್ 83 ರನ್ ಗಳಿಸಿದರೆ, ನಾಯಕ ದರ್ಶನ್ ಮಿಸಳ್ 39 ರನ್ ಗಳಿಸಿದರು. ಅರ್ಜುನ್ ತೆಂಡೂಲ್ಕರ್ ದಿನದಾಂತ್ಯದಲ್ಲಿ 10 ರನ್ ಗಳಿಸಿ ಅಜೇಯರಾಗಿ ಉಳಿದಿದ್ದಾರೆ.
ಕರ್ನಾಟಕ ಪರವಾಗಿ ವಿಜಯ್ ಕುಮಾರ್ ವೈಶಾಖ್ ಮತ್ತು ರೋಹಿತ್ ಕುಮಾರ್ ತಲಾ 3 ವಿಕೆಟ್ ಪಡೆದರು. ವಾಸುಕಿ ಕೌಶಿಕ್ ಮತ್ತು ಮುರಳೀಧರ ವೆಂಕಟೇಶ್ ತಲಾ ಒಂದು ವಿಕೆಟ್ ಪಡೆದುಕೊಂಡರು.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ












Click it and Unblock the Notifications