'ಮೈಸೂರು ಕಸಾಪ ಭ್ರಷ್ಟಚಾರದ ತನಿಖೆ ಬಳಿಕ ಸಮ್ಮೇಳನ ನಡೆಯಲಿ'
ಮೈಸೂರು, ಅಕ್ಟೋಬರ್ 6: ಸಾಂಸ್ಕೃತಿಕ ನಗರಿ ಮೈಸೂರು 83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅತಿಥ್ಯ ವಹಿಸಿಕೊಂಡಿದೆ. ಸದ್ಯ 'ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಭ್ರಷ್ಟರ ಬೀಡಾಗಿದ್ದು ಲಕ್ಷಾಂತರ ಹಣ ದುರುಪಯೋಗ ನಡೆದಿದೆ. ಮೊದಲಿಗೆ ಭ್ರಷ್ಟಾಚಾರದ ತನಿಖೆ ನಡೆಸಿ ಬಳಿಕ ಸರ್ಕಾರ ಸಮ್ಮೇಳನ ನಡೆಸಲಿ,' ಎಂದು ಸಾಹಿತಿ ಬನ್ನೂರು ರಾಜು ಒತ್ತಾಯಿಸಿದ್ದಾರೆ.
'ಒನ್ಇಂಡಿಯಾ ಕನ್ನಡ'ದ ಜತೆ ಮಾತನಾಡಿದ ಅವರು, "83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತು ಮೈಸೂರು ನಗರದಲ್ಲಿ ನಡೆಸಲು ನಿರ್ಧರಿಸಿರುವುದು ವಿಶೇಷವಾಗಿ ಮೈಸೂರಿಗರು ಹೆಮ್ಮೆಪಡುವ ವಿಷಯವಾಗಿದೆ. ಆದರೆ ಇದರ ಆತಿಥ್ಯ ವಹಿಸುತ್ತಿರುವ ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಭ್ರಷ್ಟರ ಬೀಡಾಗಿದ್ದು ಲಕ್ಷಾಂತರ ಹಣ ದುರುಪಯೋಗವೂ ಸೇರಿದಂತೆ ಅನೇಕ ಅವ್ಯವಹಾರಗಳಲ್ಲಿ ತೊಡಗಿದೆ," ಎಂದು ಆರೋಪಿಸಿದ್ದಾರೆ.

"ಭ್ರಷ್ಟಾಚಾರದ ಕಾರಣಕ್ಕೆ ಕಳೆದ ಜುಲೈ ತಿಂಗಳಲ್ಲೇ ತರಾತುರಿಯಲ್ಲಿ ಸಮ್ಮೇಳನವನ್ನು ನಡೆಸಲು ಪರಿಷತ್ತು ಮುಂದಾದಾಗ ಪ್ರಜ್ಞಾವಂತ ನಾಗರಿಕರು, ಸಾಹಿತಿಗಳು, ಕನ್ನಡ ಸಂಘ ಸಂಸ್ಥೆಗಳು ಇದನ್ನು ವಿರೋಧಿಸಿ ಬೃಹತ್ ಸಭೆ ನಡೆಸಿದ್ದವು. ಮೊದಲು ಪರಿಷತ್ತಿನ ಭ್ರಷ್ಟಾಚಾರದ ತನಿಖೆ ನಡೆಸಿ ಆನಂತರ ಸಮ್ಮೇಳನ ನಡೆಸಬೇಕೆಂದು ಒತ್ತಾಯಿಸಿ ಮುಖ್ಯಮಂತ್ರಿಗಳಿಗೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಿಗೆ ಹಾಗೂ ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಲಾಗಿತ್ತು. ಜತೆಗೆ ಸರ್ಕಾರಿ ನೌಕರರಾಗಿದ್ದು ಪರಿಷತ್ತಿನ ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವ ಜಿಲ್ಲಾ ಕಸಪಾ ಅಧ್ಯಕ್ಷ ವೈ.ಡಿ.ರಾಜಣ್ಣ ಅವರನ್ನು ಅಮಾನತುಪಡಿಸಿ ಪರಿಷತ್ತಿಗೆ ಆಡಳಿತಾಧಿಕಾರಿಗಳನ್ನು ನೇಮಿಸಬೇಕೆಂಬ ನಿರ್ಣಯವನ್ನೂ ಸಭೆಯಲ್ಲಿ ಕೈಗೊಳ್ಳಲಾಗಿತ್ತು," ಎಂದು ಬನ್ನೂರು ರಾಜು ವಿವರ ನೀಡಿದ್ದಾರೆ.
ಇದಕ್ಕೆ ಸ್ಪಂದಿಸಿದ ಸರ್ಕಾರ ಕಳೆದ ಜುಲೈನಲ್ಲಿ ಪರಿಷತ್ತು ನಡೆಸಲು ಉದ್ದೇಶಿಸಿದ್ದ ಸಮ್ಮೇಳನವನ್ನು ರದ್ದು ಪಡಿಸಿತ್ತು. ಸ್ವತಃ ಜಿಲ್ಲಾಧಿಕಾರಿಗಳೇ ಪರಿಷತ್ತಿನ ಅವ್ಯವಹಾರಗಳ ಬಗ್ಗೆ ಕ್ರಮ ಕೈಗೊಂಡು ಸೂಕ್ತ ತನಿಖೆ ನಡೆಸುವುದಾಗಿ ಹೇಳಿದ್ದರು ಎಂಬುದಾಗಿ ಸಾಹಿತಿಗಳು ತಿಳಿಸಿದ್ದಾರೆ.
ಆದರೆ, ಈಗ ಇದ್ದಕ್ಕಿದ್ದಂತೆ ಕನಿಷ್ಟ ಒಂದು ಸಭೆಯನ್ನೂ ಮೈಸೂರಿನಲ್ಲಿ ಕರೆಯದೆ ಏಕಾಏಕಿ ನವೆಂಬರ್ 24, 25, 26ರಂದು 83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಡೆಸುವುದಾಗಿ ಪರಿಷತ್ತು ಸ್ವಯಂ ಘೋಷಿಸಿಕೊಂಡಿದೆ. ಇದಕ್ಕೆ ಸಾರ್ವಜನಿಕರ, ಜನಪ್ರತಿನಿಧಿಗಳ, ಸಂಘ ಸಂಸ್ಥೆಗಳ, ಸಾಹಿತಿಗಳ, ಕಲಾವಿದರ ಸಹಕಾರ ಬೇಡವೇ? ಸರ್ಕಾರ ಮತ್ತು ಸಾರ್ವಜನಿಕರ ದುಡ್ಡು ಮಾತ್ರ ಬೇಕೆ? ಎಂದು ಅವರು ಪ್ರಶ್ನಿಸಿದ್ದಾರೆ.
ಮೈಸೂರಿಗೆ ಮೈಸೂರೇ ಈಗ ದಸರಾ ಹಾಗೂ ದೀಪಾವಳಿಯ ಸಡಗರದಲ್ಲಿ ಮುಳುಗಿದೆ. ಒಂದಲ್ಲ ಅಂತ ನಾಲ್ಕು ಕವಿಗೋಷ್ಠಿಗಳು, ವಿವಿಧ ಸಾಹಿತ್ಯಿಕ ಕಾರ್ಯಕ್ರಮಗಳು, ಸಂಭ್ರಮೋಲ್ಲಾಸದಿಂದ ಜರುಗಿವೆ. ದಸರಾ ವಸ್ತು ಪ್ರದರ್ಶನದಲ್ಲಿ ಕಲೆ, ಸಾಹಿತ್ಯ, ಸಂಗೀತ ಒಳಗೊಂಡಂತೆ ಸಾಂಸ್ಕೃತಿಕ ಕಾರ್ಯಕ್ರಮಗಳು ಅಕ್ಟೋಬರ್ ತಿಂಗಳ ಕೊನೆ ತನಕವೂ ಮುಂದುವರಿಯುತ್ತದೆ. ನಂತರ ನವೆಂಬರ್ ಮಾಸ ಪೂರ್ತಿ ಕನ್ನಡ ರಾಜ್ಯೋತ್ಸವದ ಸಂಭ್ರಮ, ಹೀಗಿರುವಾಗ ಇದರ ನಡುವೆ ಮೈಸೂರಿನಲ್ಲಿ 83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸುವುದು ಎಷ್ಟು ಸರಿ? ಎಂಬುದು ಬನ್ನೂರು ರಾಜು ಅವರ ಪ್ರಶ್ನೆ.
ಮಾರ್ಚ್ ಅಥವಾ ಏಪ್ರಿಲ್ ನಲ್ಲಿ ಸಾಹಿತ್ಯ ಸಮ್ಮೇಳನ ಸೂಕ್ತ
ಇನ್ನು ಡಿಸೆಂಬರ್ ತಿಂಗಳಲ್ಲಿ ಇಡೀ ಕನ್ನಡನಾಡೇ ಆಕರ್ಷಿಸುವಂತೆ ನೇರವಾಗಿ ಸರ್ಕಾರದ ವತಿಯಿಂದ ದಾವಣಗೆರೆಯಲ್ಲಿ ವಿಶ್ವ ಕನ್ನಡ ಸಮ್ಮೇಳನ ಜರುಗುತ್ತಿದೆ. ಫೆಬ್ರವರಿಯಲ್ಲಿ ಶ್ರವಣಬೆಳಗೊಳದಲ್ಲಿ ಮಹಾಮಸ್ತಕಾಭಿಷೇಕದ ಮಹಾ ಮಹೋತ್ಸವವಿದೆ. ಇವೆಲ್ಲವೂ ಕನ್ನಡ ನಾಡಿನ ಬಹುಮುಖ್ಯ ಉತ್ಸವಗಳೇ. ಹಾಗಾಗಿ ಇವೆಲ್ಲ ಆಚರಣೆಗಳೂ ಮುಗಿದ ನಂತರ ಮುಂದಿನ ಮಾರ್ಚ್ ಅಥವಾ ಏಪ್ರಿಲ್ ತಿಂಗಳಲ್ಲಿ ಮೈಸೂರಿನಲ್ಲಿ 83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಡೆಸುವುದು ಅತ್ಯಂತ ಸೂಕ್ತ ಎಂದು ಅಭಿಪ್ರಾಯಪಟ್ಟಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ತು ಪೂರ್ವಾಗ್ರಹ ಬಿಟ್ಟು ಪ್ರಜ್ಞಾವಂತಿಕೆಯಿಂದ ಯೋಚಿಸಲಿ. ಸರ್ಕಾರ ಕೂಡ ಯಾವುದೇ ಕಾರಣಕ್ಕೂ ವಿಶ್ವ ಕನ್ನಡ ಸಮ್ಮೇಳನಕ್ಕೂ ಮುನ್ನ ಯಾರದೋ ಸ್ವಾರ್ಥಕ್ಕೆ ನವೆಂಬರ್ನಲ್ಲಿ ಮೈಸೂರಿನಲ್ಲಿ ಸಾಹಿತ್ಯ ಸಮ್ಮೇಳನ ನಡೆಯಲು ಅವಕಾಶ ಮಾಡಿಕೊಡಬಾರದು. ಅಂತೆಯೇ ಸಮ್ಮೇಳನಕ್ಕೂ ಮೊದಲು ಇದರ ಆತಿಥ್ಯ ವಹಿಸುತ್ತಿರುವ ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಇದುವರೆಗೆ ನಡೆದಿರುವ ಅವ್ಯವಹಾರಗಳ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕ್ರಮ ಜರುಗಿಸುವಂತೆಯೂ ಅವರು ಸರ್ಕಾರವನ್ನು ಆಗ್ರಹಿಸಿದ್ದಾರೆ.
-
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ












Click it and Unblock the Notifications