ವಿಷಪ್ರಸಾದ ಪ್ರಕರಣ: ಸಾಲೂರು ಮಠದ ಶ್ರೀಗಳು ಹೇಳಿದ್ದೇನು ?
ಮೈಸೂರು, ಡಿಸೆಂಬರ್ 17 : ಸುಳ್ವಾಡಿ ಮಾರಮ್ಮನ ದೇವಸ್ಥಾನದಲ್ಲಿ ವಿಷ ಪ್ರಸಾದ ಸೇವಿಸಿ ಭಕ್ತರ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಳ್ಳೇಗಾಲ ಡಿವೈಎಸ್ಪಿ ಪುಟ್ಟಮಾದಯ್ಯ ನೇತೃತ್ವದ ಪೊಲೀಸರ ತಂಡ ಸಾಲೂರು ಮಠದ ಹಿರಿಯ ಶ್ರೀಗಳಾದ ಇಮ್ಮಡಿ ವೇದಬ್ರಹ್ಮ ಗುರುಸ್ವಾಮಿಗಳು ಮತ್ತು ಕಿರಿಯ ಶ್ರೀಗಳಾದ ಇಮ್ಮಡಿ ಮಹದೇವಸ್ವಾಮಿ ಅವರನ್ನು ವಿಚಾರಣೆಗೊಳಪಡಿಸಿತ್ತು.
ಮಠಕ್ಕೆ ಆಗಮಿಸಿದ ಡಿವೈಎಸ್ಪಿ ತಂಡ ವಿಶೇಷವಾಗಿ ಇಮ್ಮಡಿ ಮಹದೇವಸ್ವಾಮಿ ಅವರನ್ನು ಸುಮಾರು ನಾಲ್ಕು ಗಂಟೆಗಳ ಕಾಲ ವಿಚಾರಣೆಗೊಳಪಡಿಸಿತು. ಈ ಕುರಿತಾಗಿ ಮಾತಾನಾಡಿದ ಶ್ರೀಗಳು, ಸುಳ್ವಾಡಿ ಮಾರಮ್ಮ ದೇವಸ್ಥಾನಕ್ಕೆ ಸಾಲೂರು ಮಠಕ್ಕೆ ದಶಕಗಳ ಅವಿನಾಭಾವ ಸಂಬಂಧ ಇದೆ. ನಾನು ಮಾರಮ್ಮನ ಪ್ರಸಾದಕ್ಕೆ ವಿಷ ಹಾಕಿಲ್ಲ. ಟ್ರಸ್ಟ್ ನಲ್ಲಿ ಯಾವುದೇ ಒಡಕಿಲ್ಲ ಎಂದು ಸ್ಪಷ್ಟಪಡಿಸಿದರು.
ಸುಳ್ವಾಡಿ ಮಾರಮ್ಮ ದೇವಸ್ಥಾನದಲ್ಲಿ ವಿಷ ಪ್ರಸಾದ ಸೇವಿಸಿ ಭಕ್ತರು ಸಾವನ್ನಪ್ಪಿದ ಪ್ರಕರಣದಲ್ಲಿ ತಮ್ಮ ಹೆಸರು ಕೂಡ ತಳಕು ಹಾಕಿಕೊಂಡಿರುವ ಹಿನ್ನೆಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬ್ರಹ್ಮೇಶ್ವರ ದೇವಸ್ಥಾನದವರೆಗೂ ಮಾರಮ್ಮ ದೇವಸ್ಥಾನದವರೆಗೆ ನಡುವೆ ಸುಮಾರು ಎರಡು ದಶಕಗಳ ಹಿಂದೆ ಗಲಾಟೆ ನಡೆದಿದ್ದು ಅದನ್ನು ಹೊರತುಪಡಿಸಿದರೆ ದೇವಸ್ಥಾನದಲ್ಲಿ ಬೇರೆ ಯಾವುದೇ ಗಲಾಟೆಗಳು ನಡೆದಿಲ್ಲ ಎಂದರು.

ಸಾಲೂರು ಮಠಕ್ಕೆ ಸುಳ್ವಾಡಿ ಮಾರಮ್ಮ ದೇವಸ್ಥಾನ ನಡುವೆ 30 ವರ್ಷಗಳ ಅವಿನಾಭಾವ ಸಂಬಂಧವಿದೆ. ಆ ದೇವಸ್ಥಾನವನ್ನು ಕಟ್ಟಿದವರೇ ನನ್ನನ್ನು ಟ್ರಸ್ಟ್ ನ ಅಧ್ಯಕ್ಷನನ್ನಾಗಿ ಮಾಡಿದ್ದಾರೆ. ದೇವಸ್ಥಾನದ ಟ್ರಸ್ಟ್ ಅಧ್ಯಕ್ಷರಾಗಿದ್ದರೂ ಕೂಡ ಶಂಕುಸ್ಥಾಪನೆ ಸಮಾರಂಭಕ್ಕೆ ಹೋಗದೇ ಇದ್ದುದರ ಬಗ್ಗೆ ಕೇಳಿದಾಗ ಉತ್ತರಿಸಿದ ಅವರು , ಟ್ರಸ್ಟ್ ನ ಎಲ್ಲರೂ ಸೇರಿಯೇ ದೇವಸ್ಥಾನ ಜೀರ್ಣೋದ್ಧಾರ ಮಾಡುವ ತೀರ್ಮಾನ ಕೈಗೊಂಡಿದ್ದೆವು. ಶಂಕು ಸ್ಥಾಪನೆ ದಿನಾಂಕವನ್ನು ನಾನೇ ನಿಗದಿಪಡಿಸಿದ್ದೆ.
ಕಾರ್ಯಕ್ರಮಕ್ಕೆ ಮಠದ ಹಿರಿಯ ಸ್ವಾಮೀಜಿ ಅವರನ್ನು ಕಳುಹಿಸಲಾಗಿತ್ತು. ಅಂದು ಶುಕ್ರವಾರವಾಗಿದ್ದು ಮಠಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ ಕಾರಣ ನಾನು ತಡವಾಗಿ ಹೋಗಿದ್ದೆ. ಆದರೆ ನಾನು ದೇವಸ್ಥಾನ ತಲುಪುವುದರೊಳಗಾಗಿ ಅಲ್ಲಿ ಪ್ರಸಾದ ಸೇವಿಸಿ ಭಕ್ತರು ಸಾವನ್ನಪ್ಪಿರುವ ಬಗ್ಗೆ ನನಗೆ ಭಕ್ತಾದಿಗಳು ತಿಳಿಸಿದರು.
ದೇವಸ್ಥಾನದಲ್ಲಿ ಗಲಾಟೆ ಆಗುತ್ತಿರುವುದರಿಂದ ದೇವಸ್ಥಾನಕ್ಕೆ ಹೋಗುವುದು ಬೇಡ ಎಂದು ಭಕ್ತಾದಿಗಳೇ ಹೇಳಿದ್ದರಿಂದ ನಾನು ಹೋಗಲಿಲ್ಲ. ಸಾವುಗಳಿಗೆ ಸಾಂತ್ವನ ಹೇಳುವುದು ನಮ್ಮ ಧರ್ಮ. ಆದರೆ ಈ ಪ್ರಕರಣ ಬೇರೆಯದೇ ರೀತಿಯಲ್ಲಿ ತಿರುವು ಪಡೆದುಕೊಂಡಿದ್ದರಿಂದ ನಾನು ಎಲ್ಲಿಗೂ ಹೋಗದೆ ಮಠದಲ್ಲೇ ಇದ್ದೇನೆ ಎಂದು ತಿಳಿಸಿದರು.
ಈ ಪ್ರಕರಣದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 50 ಸಾವಿರ ರೂ ಟ್ರಸ್ಟ್ ನಿಂದ ನೀಡಬೇಕು ಎಂಬುದರ ಬಗ್ಗೆ ಚಿಂತನೆ ನಡೆದಿದೆ ಎಂದು ಇಮ್ಮಡಿ ಮಹದೇವಸ್ವಾಮಿಗಳು ತಿಳಿಸಿದರು.
-
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ












Click it and Unblock the Notifications