ಮೈಸೂರಲ್ಲಿ ಎಗ್ಗಿಲ್ಲದೆ ಸಾಗಿರುವ ಮರಳು ದಂಧೆ

ಮೈಸೂರು, ಜೂನ್ 26: ಸಿಎಂ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿನಲ್ಲಿ ಅಕ್ರಮ ಮರಳು ಮರಳು ದಂಧೆ ಕಬಂಧಬಾಹು ಚಾಚಿದ್ದು, ಎಲ್ಲೆಡೆ ಎಗ್ಗಿಲ್ಲದೆ ನಡೆಯುತ್ತಿದೆ.

ಪೊಲೀಸರು ಯಾವುದೇ ರೀತಿಯ ಕಾರ್ಯಾಚರಣೆ ನಡೆಸಿದರೂ ತಡೆಗಟ್ಟಲು ಮಾತ್ರ ಸಾಧ್ಯವಾಗುತ್ತಿಲ್ಲ. ಹುಣಸೂರು ವ್ಯಾಪ್ತಿಯ ಲಕ್ಷ್ಮಣತೀರ್ಥ ನದಿಯಿಂದ ಮರಳು ತೆಗೆಯುವ ದಂಧೆ ಅವ್ಯಾಹತವಾಗಿ ನಡೆಯುತ್ತಿದ್ದು, ಪೊಲೀಸರು ದಾಳಿ ನಡೆಸಿದ ಕೆಲ ದಿನಗಳ ಕಾಲ ಸ್ಥಗಿತಗೊಳ್ಳುತ್ತದೆಯಾದರೂ ಮತ್ತೆ ಜಿಗಿತುಕೊಳ್ಳುತ್ತಿದೆ.

Sand Mafia in Mysore

ಲಕ್ಷ್ಮಣತೀರ್ಥ ನದಿ ದಡದುದ್ದಕ್ಕೂ ದಂಧೆ ನಡೆಯುತ್ತಿದ್ದರೂ ಯಾರೂ ತಲೆ ಕೆಡಿಸಿಕೊಂಡಂತೆ ಕಾಣುತ್ತಿಲ್ಲ. ಈ ನಡುವೆ ಪೊಲೀಸರಿಗೆ ಮಾಹಿತಿ ತಿಳಿದು ಕಾರ್ಯಾಚರಣೆಗೆ ಬಂದಾಗ ತಪ್ಪಿಸಿಕೊಳ್ಳುವ ಅಕ್ರಮ ದಂಧೆಕೋರರು ಮತ್ತೆ ತಮ್ಮ ದಂಧೆಯನ್ನು ಮುಂದುವರೆಸುತ್ತಾರೆ.

ಈ ನಡುವೆ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್‍ಐ ಪುಟ್ಟಸ್ವಾಮಿ ಮತ್ತು ಸಿಬ್ಬಂದಿ ಹನಗೋಡು ಹೋಬಳಿ ಹೆಮ್ಮಿಗೆ ಗ್ರಾಮದ ಲಕ್ಷ್ಮಣತೀರ್ಥ ನದಿದಂಡೆಯಲ್ಲಿ ಅಕ್ರಮವಾಗಿ ಮರಳನ್ನು ಸಂಗ್ರಹಿಸುತ್ತಿದ್ದ ವೇಳೆ ದಾಳಿ ನಡೆಸಿ ಟಿಪ್ಪರನ್ನು ವಶಪಡಿಸಿಕೊಂಡು ಚಾಲಕ ಪಂಚವಳ್ಳಿಯ ಅಲೀಂ ಪಾಷಾರನ್ನು ಬಂಧಿಸಿ ಟಿಪ್ಪರ್ ಮಾಲೀಕ ನಗರದ ಜನಾರ್ಧನರಾವ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಮತ್ತೊಂದು ಪ್ರಕರಣದಲ್ಲಿ ಕಟ್ಟೆಮಳಲವಾಡಿಯ ಲಕ್ಷ್ಮಣತೀರ್ಥ ಅಣೆಕಟ್ಟೆ ಬಳಿಯಿಂದ ಅಕ್ರಮವಾಗಿ ಮರಳು ಸಂಗ್ರಹಿಸಿ ಸಾಗಿಸುತ್ತಿದ್ದ ನೋಂದಣಿಯಾಗ ಹೊಸ ಟ್ರ್ಯಾಕ್ಟರ್ ನ್ನು ವಶಕ್ಕೆ ಪಡೆದ ಪೊಲೀಸರ ತಂಡ ಆರೋಪಿ ರುದ್ರೇಗೌಡನನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+