ಮೈಸೂರು ಯುವ ದಸರಾ: ಪ್ರೇಕ್ಷಕರನ್ನು ಕುಳಿತಲ್ಲೇ ಕುಣಿಯುವಂತೆ ಮಾಡಿದ ಸ್ಯಾಂಡಲ್ ವುಡ್ ನಟಿಯರು
ಮೈಸೂರು, ಅಕ್ಟೋಬರ್. 16 : ಸೋಮವಾರ (ಅ.15)ನಡೆದ ಸ್ಯಾಂಡಲ್ ವುಡ್ ನೈಟ್ಸ್ ಲ್ಲಿ ನಟಿಯರಾದ ಹರಿಪ್ರಿಯ, ಶುಭಾಪೂಂಜ ಅವರ ನೃತ್ಯ ಹಾಗೂ ಕನ್ನಡದ ಹಿನ್ನೆಲೆ ಗಾಯಕರ ಗಾಯನ ಯುವ ಸಮೂಹ ಕುಣಿದು ಕುಪ್ಪಳಿಸುವಂತೆ ಮಾಡಿತು.
ದಸರಾ ಮಹೋತ್ಸವ ಅಂಗವಾಗಿ ಮಹಾರಾಜ ಕಾಲೇಜು ಮೈದಾನದಲ್ಲಿ ಯಶಸ್ವಿಯಾಗಿ ಮುಂದುವರಿದಿರುವ ಯುವ ದಸರಾ ಸೋಮವಾರ ನಟ-ನಟಿಯರ ಆಗಮದಿಂದ ಮತ್ತಷ್ಟು ರಂಗೇರಿತು. ಯುವಕ, ಯುವತಿಯರು ಶಿಳ್ಳೆ, ಚಪ್ಪಾಳೆ, ಕೇಕೆ ಹಾಕಿ ಕಾರ್ಯಕ್ರಮಕ್ಕೆ ಮೆರಗು ತಂದರು.
ನೀರ್ ದೋಸೆ.. ಗೀತೆಗೆ ಹೆಜ್ಜೆ ಹಾಕಿ ಎಲ್ಲರ ಮನಗೆದ್ದ ಹರಿಪ್ರಿಯ ಒಂದೆಡೆಯಾದರೆ, ಮತ್ತೊಬ್ಬ ನಟಿ ಶುಭಾಪೂಂಜ ಯಾಕಿಂಗ್ ಆಡ್ತಾರೋ ಈ ಹುಡುಗರು....ಎಂದು ಕುಣಿಯುತ್ತಾ ಪಡ್ಡೆ ಹುಡುಗರು ಹುಚ್ಚೆದ್ದು ಕುಣಿಯುವಂತೆ ಮಾಡಿದರು.
ಇಂತಿ ನಿನ್ನ ಪ್ರೀತಿಯ ಖ್ಯಾತಿಯ ಸೋನುಗೌಡ ನಿಂತಲ್ಲಿ, ನಿಲ್ಲಲಾರೇ ...ಹಾಡಿಗೆ ನರ್ತಿಸಿದರೆ, ಕಿರು ತೆರೆಯ ನಾಗಿಣಿ ಧಾರಾವಾಹಿಯ ದೀಪಿಕಾದಾಸ್ ಚುಮು ಚುಮು ಅಂತೈತಿ...ಎಂಬ ಗೀತೆಗೆ ಕುಣಿದು ಸಭಿಕರಿಂದ ಚಪ್ಪಾಳೆ, ಶಿಳ್ಳೆಗಳನ್ನು ಗಿಟ್ಟಿಸಿಕೊಂಡರು. ಮುಂದೆ ಓದಿ...

ಸಿಂಚನಾ ಮಾಡಿದ ಮೋಡಿ
ಹಿನ್ನೆಲೆ ಗಾಯಕಿ ಸಿಂಚನಾ ರಸಿಕಾ ಬಲು ಮೆಲ್ಲನೆ ಮಾತಾಡು..', ಇನ್ನು ಯಾಕ ಬರಲಿಲ್ಲವಾ ಹುಬ್ಬಳ್ಳಿಯವಾ..', ಯಾಕ ಹುಡುಗ ಮೈಯಾಂಗ ಹೆಂಗ್ ಐತಿ', ಕೋಡಗನ ಕೋಳಿ ನುಂಗಿತ್ತಾ..' ಮೊದಲಾದ ಹಾಡುಗಳನ್ನು ತಮ್ಮದೇ ಧಾಟಿಯಲ್ಲಿ ಹಾಡಿ ನೆರೆದಿದ್ದವರನ್ನು ಮೋಡಿ ಮಾಡಿದರು.

ಹಾಡು ಸಂತೋಷಕ್ಕೆ...
ಗಾಯಕಿ ಅನುರಾಧ ಭಟ್ ನಂದ ನಂದನಾ ನೀನು ಶ್ರೀಕೃಷ್ಣ', 'ಜುಮ್ ಜುಮ್ ಮಾಯ, ಜುಮ್ ಜುಮ್ ಮಾಯ..' ಗಾಯನ, ಗಾಯಕ ಸಂಜಿತ್ ಹೆಗಡೆ ಗಾಯಕ ಸಂತೋಷ್ ಐರಾವತಾ' ಗಾಯನ ಹಾಗೂ ಚಿನ್ಮಯ್ ಅವರು ಶಂಕರ್ ನಾಗ್ ಅವರ ಹಾಡು ಸಂತೋಷಕ್ಕೆ' ಗೀತೆ ಹಾಡಿ ಪ್ರೇಕ್ಷಕರನ್ನು ರಂಜಿಸಿದರು.

ಕಿರುತೆರೆ ನಟಿ ಶಾಲಿನಿ ಹಾಸ್ಯ
ಯುವ ಸಂಭ್ರಮದಿಂದ ಯುವ ದಸರೆಗೆ ಆಯ್ಕೆಯಾದ ಕರುಣಾಮಯಿ ವಿಶೇಷ ಮಕ್ಕಳ ಶಾಲೆ, ಜ್ಞಾನದೀಪ ಪ್ರಥಮ ದರ್ಜೆ ಕಾಲೇಜು, ನೃತ್ಯ ವಿಹಾರ್ ಪ್ಯಾಷನ್ ತಂಡ ತಮ್ಮ ಪ್ರತಿಭೆ ಪ್ರದರ್ಶಿಸಿದವು. ಕಿರುತರೆ ನಟಿ ಶಾಲಿನಿ ತಮ್ಮ ಹಾಸ್ಯದ ಮೂಲಕವೇ ಕಾರ್ಯಕ್ರಮ ನಿರೂಪಿಸಿದ್ದು ವಿಶೇಷ.

ರಂಜಿಸಿದ ಶಿವರಾಜ್-ನಯನಾ ಜೋಡಿ
ಕಾಮಿಡಿ ಕಿಲಾಡಿಗಳು ಖ್ಯಾತಿಯ ಕೆ.ಆರ್.ಪೇಟೆ ಶಿವರಾಜ್ ಹಾಗೂ ನಯನ ಜೋಡಿ ಕಾರ್ಯಕ್ರಮದ ಮಧ್ಯೆ ತಮ್ಮ ಹಾಸ್ಯಗಳ ಮೂಲಕ ಎಲ್ಲರನ್ನೂ ನಕ್ಕು ನಲಿಸಿದರು.
-
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ












Click it and Unblock the Notifications