ಮೈಸೂರು: ಪೊಲೀಸರ ಶೂಟೌಟ್ ನಲ್ಲಿ ಗಂಧದ ಮರ ಸ್ಮಗ್ಲರ್ ಸಾವು
ಚಿರತೆ ಹಿಡಿಯಲು ಇಟ್ಟಿದ್ದ ಬೋನು ಕಾಯುತ್ತಿದ್ದ ಅರಣ್ಯಾಧಿಕಾರಗಳ ಕಣ್ಣಿಗೆ ಬಿದ್ದಿದ್ದ ಗಂಧದ ಮರಗಳ್ಳರು; ಅವರನ್ನು ತಡೆಯಲು ಹೋದ ಪೊಲೀಸರ ಮೇಲೆ ಗುಂಡಿನ ದಾಳಿ, ಪ್ರತಿದಾಳಿಯಲ್ಲಿ ಓರ್ವ ಕಳ್ಳನ ಸಾವು.
ಮೈಸೂರು, ಫೆಬ್ರವರಿ 12: ಜಿಲ್ಲೆಯ ದತ್ತಗಳ್ಳಿಯ ಬಳಿಯಿರುವ ಲಿಂಗಬಂಧಿ ಕೆರೆಯ ಬಳಿ ಶನಿವಾರ ರಾಜ್ಯ ಅರಣ್ಯಾಧಿಕಾರಿಗಳು ಹಾಗೂ ಗಂಧದ ಮರ ಕಳ್ಳ ಸಾಗಣೆದಾರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ಕಳ್ಳಸಾಗಣೆದಾರ ಸಾವಿಗೀಡಾಗಿದ್ದಾನೆಂದು ಮೂಲಗಳು ತಿಳಿಸಿವೆ.
ಇತ್ತೀಚೆಗೆ, ಲಿಂಗಬಂಧಿ ಕೆರೆಯ ಬಳಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದ ಹಿನ್ನೆಲೆಯಲ್ಲಿ ಆ ಜಾಗದಲ್ಲಿ ಪಂಜರವೊಂದನ್ನು ಇರಿಸಿದ್ದ ಅರಣ್ಯಾಧಿಕಾರಿಗಳು, ಅದರ ಮೇಲೆ ದಿನದ 24 ಗಂಟೆ ನಿಗಾ ವಹಿಸಿದ್ದರು.

ಹೀಗೆಯೇ, ಶನಿವಾರವೂ ಅರಣ್ಯಾಧಿಕಾರಿಗಳು ದೂರದಿಂದ ಪಂಜರದ ಕಡೆಗೆ ಗಮನವಿಟ್ಟಿದ್ದಾಗ, ಸುಮಾರು ಎಂಟು ಮಂದಿಯುಳ್ಳ ತಂಡ ಕೆರೆಯ ಬಳಿಯಲ್ಲಿದ್ದ ಗಂಧದ ಮರಗಳನ್ನು ಕಡಿಯಲು ಮುಂದಾಗಿರುವುದು ಗಮನಕ್ಕೆ ಬಂದಿತ್ತು. ತಕ್ಷಣವೇ ಕಾರ್ಯ ಪ್ರವೃತ್ತರಾದ ಅಧಿಕಾರಿಗಳು ಅವರನ್ನು ತಡೆದು, ಬಂಧಿಸಲು ಮುಂದಾಗುವಷ್ಟರಲ್ಲಿ ಇದನ್ನು ಗಮನಿಸಿದ ಕಳ್ಳರು ಪೊಲೀಸರತ್ತ ಗುಂಡಿನ ದಾಳಿ ನಡೆಸಿದ್ದಾರೆನ್ನಲಾಗಿದೆ.
ಆಗ, ಪೊಲೀಸರಿಂದ ನಡೆದ ಪ್ರತಿ ದಾಳಿಯಲ್ಲಿ ಒಬ್ಬ ಗಂಧದ ಮರದ ಕಳ್ಳಸಾಗಣೆಕೋರ ಮೃತ್ತಪಟ್ಟಿದ್ದಾನೆಂದು ಮೂಲಗಳು ಹೇಳಿವೆ. ಆದರೆ, ಈ ವೇಳೆ ಉಳಿದ ಏಳು ಜನರು ಸ್ಥಳದಿಂದ ಪರಾರಿಯಾಗುವಲ್ಲಿ ಯಶಸ್ವಿಯಾಗಿದ್ದು, ಪೊಲೀಸರು ಆರೋಪಿಗಳನ್ನು ಬಂಧಿಸುವ ಕಾರ್ಯಾಚರಣೆ ಮುಂದುವರಿಸಿದ್ದಾರೆ.
-
Vijay Sethupathi: ರಿಷಬ್ ಶೆಟ್ಟಿ ಜೊತೆ ನಟಿಸುವ ದೊಡ್ಡ ಆಸೆ ನನಗಿದೆ: ಆಸೆ ಬಿಚ್ಚಿಟ್ಟ ನಟ ವಿಜಯ್ ಸೇತುಪತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ











Click it and Unblock the Notifications