ನಟ ದರ್ಶನ್ ಫಾರ್ಮ್ ಹೌಸ್ನಲ್ಲಿ ಸಂಕ್ರಾಂತಿ ಸಂಭ್ರಮ
ಮೈಸೂರು, ಜನವರಿ 15: ಕನ್ನಡ ನಟ, ಅಭಿಮಾನಿಗಳ ಪಾಲಿನ ನೆಚ್ಚಿನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ತೋಟದ ಮನೆಯಲ್ಲಿ ಸಂಕ್ರಾಂತಿ ಸಂಭ್ರಮ ಜೋರಾಗಿತ್ತು. ದರ್ಶನ್ ಸಹ ತೋಟಕ್ಕೆ ಆಗಮಿಸಿ, ಹಸುಗಳಿಗೆ ಪೂಜೆ ಮಾಡಿ, ಸಂಭ್ರಮದಲ್ಲಿ ಪಾಲ್ಗೊಂಡರು.
ಸಂಕ್ರಾಂತಿ ಹಿನ್ನೆಲೆಯಲ್ಲಿ ಗುರುವಾರ ಮೈಸೂರಿನ ತಿ.ನರಸೀಪುರ ರಸ್ತೆಯಲ್ಲಿರುವ 'ತೂಗುದೀಪ ಫಾರ್ಮ್ ಹೌಸ್'ಗೆ ದರ್ಶನ್ ಆಗಮಿಸಿದ್ದರು. ತಮ್ಮ ಸ್ನೇಹಿತರು ಹಾಗೂ ಆಪ್ತರೊಂದಿಗೆ ಬೆರೆತು ತೋಟದ ಮನೆಯಲ್ಲಿ ಹಬ್ಬವನ್ನು ಆಚರಣೆ ಮಾಡಿದರು.
ಪ್ರಾಣಿಗಳ ಅಭಿಮಾನಿಯಾಗಿರುವ ದರ್ಶನ್ ತೋಟದ ಮನೆಯಲ್ಲಿ ಅನೇಕ ಪ್ರಾಣಿಗಳನ್ನು ಸಾಕಿದ್ದಾರೆ. ಹಸುಗಳಿಗೆ ಪೂಜೆ ಮಾಡಲಾಯಿತು. ದರ್ಶನ್ ತಮ್ಮ ನೆಚ್ಚಿನ ಕುದುರೆಯನ್ನು ಕಿಚ್ಚು ಹಾಯಿಸುವ ಮೂಲಕ ಹಬ್ಬದ ಸಂಭ್ರಮದಲ್ಲಿ ಭಾಗಿಯಾದರು.

ಸಂಕ್ರಾಂತಿ ದಿನ ಗ್ರಾಮೀಣ ಪ್ರದೇಶಗಳಲ್ಲಿ ಹಸುಗಳನ್ನು ಸಿಂಗಾರಗೊಳಿಸಿ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ. ಸಂಜೆ ಕಿಚ್ಚು(ಬೆಂಕಿ) ಹಾಯಿಸುವುದು ವಾಡಿಕೆಯಾಗಿದೆ. ದರ್ಶನ್ ತೋಟದ ಮನೆಯಲ್ಲಿ ಸಂಪ್ರದಾಯದಂತೆ ಸಂಕ್ರಾಂತಿ ಆಚರಣೆ ಮಾಡಲಾಯಿತು.
ತೋಟದ ಮನೆಯಲ್ಲಿರುವ ಜಾನುವಾರುಗಳಿಗೆ ಸ್ನಾನ ಮಾಡಿಸಿ, ಪೂಜೆ ಮಾಡಲಾಯಿತು. ಸಂಜೆ ಜಾನುವಾರುಗಳಿಗೆ ಕಿಚ್ಚು ಹಾಯಿಸುವ ಮೂಲಕ ಸಂಕ್ರಾಂತಿಯನ್ನು ಆಚರಣೆ ಮಾಡಲಾಯಿತು. ತೋಟದ ಕೆಲಸಗಾರರು ಸಹ ಸಂಭ್ರಮದಿಂದ ಪಾಲ್ಗೊಂಡರು.

ಪ್ರಾಣಿಪ್ರಿಯರಾಗಿರುವ ದರ್ಶನ್ಗೆ ಕುದುರೆ ಎಂದರೆ ಬಹಳ ಪ್ರೀತಿ. ತಮ್ಮ ಪ್ರೀತಿಯ ಕುದುರೆಗೆ ದರ್ಶನ್ ಕಿಚ್ಚು ಹಾಯಿಸುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಅಭಿಮಾನಿಗಳು ಇದನ್ನು ವಾಟ್ಸಪ್ ಸ್ಟೇಟಸ್ನಲ್ಲಿಯೂ ಹಾಕಿಕೊಂಡಿದ್ದಾರೆ.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications