ಕುತೂಹಲ ಮೂಡಿಸಿದ ಜಿಟಿಡಿ, ಸಾರಾ ಮಹೇಶ್ ಭೇಟಿ!
ಮೈಸೂರು, ಜುಲೈ 25; 2 ತಿಂಗಳಿನಲ್ಲಿ ತಮ್ಮ ರಾಜಕೀಯ ಹೆಜ್ಜೆ ಕುರಿತು ಸ್ಪಷ್ಟನೆ ನೀಡುವೆ ಎಂದಿದ್ದ ಶಾಸಕ ಜಿ. ಟಿ. ದೇವೇಗೌಡ ಇದೀಗ ಕೆ. ಆರ್. ನಗರ ಕ್ಷೇತ್ರದ ಜೆಡಿಎಸ್ ಶಾಸಕ ಸಾ. ರಾ. ಮಹೇಶ್ ಭೇಟಿಯಾಗಿ ಮಾತುಕತೆ ನಡೆಸಿರುವುದು ಕುತೂಹಲ ಕೆರಳಿಸಿದೆ.
ಜೆಡಿಎಸ್ನಿಂದ ಮಾನಸಿಕವಾಗಿ ದೂರವಾಗಿ, ಬೇರೆ ಪಕ್ಷ ಸೇರ್ಪಡೆಯಾಗುವ ಇಚ್ಚೆ ವ್ಯಕ್ತಪಡಿಸಿದ್ದ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ. ಟಿ. ದೇವೇಗೌಡ ಏಕಾಏಕಿ ಸಾರಾ ಮಹೇಶ್ ಭೇಟಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಮತ್ತೆ ತಮ್ಮ ಮಾತೃಪಕ್ಷಕ್ಕೆ ಹೋಗುವ ಲಕ್ಷಣ ಕಾಣುತ್ತಿದೆ ಎಂಬ ಸುದ್ದಿ ಇದೆ.
ಜಲದರ್ಶಿನಿ ಅತಿಥಿಗೃಹದಲ್ಲಿ ಜಿ. ಟಿ. ದೇವೇಗೌಡರೊಂದಿಗೆ ಸಾ. ರಾ. ಮಹೇಶ್ ಒಂದು ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದಾರೆ. ಇಬ್ಬರು ನಾಯಕರ ಭೇಟಿ ಈಗ ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಮುಂದಿನ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಜಿ. ಟಿ. ದೇವೇಗೌಡ, ಹುಣಸೂರು ಕ್ಷೇತ್ರದಿಂದ ಅವರ ಪುತ್ರ, ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಜಿ. ಡಿ. ಹರೀಶ್ಗೌಡರು ಜೆಡಿಎಸ್ನಿಂದ ಕಣಕ್ಕಿಳಿಯಲು ಪಕ್ಷದ ವರಿಷ್ಠರು ಒಪ್ಪಿಗೆ ಸೂಚಿಸಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಇದೇ ವಿಚಾರವಾಗಿ ಮಾತುಕತೆ ನಡೆದಿದೆ ಎನ್ನುವುದು ಸುದ್ದಿ.

ಇಬ್ಬರು ನಾಯಕರ ಭೇಟಿಗೆ ಜುಲೈ 31ರಂದು ಕೆ. ಆರ್. ನಗರ ತಾಲೂಕಿನಲ್ಲಿ ಆಯೋಜಿಸಿರುವ ಕೆಂಪೇಗೌಡ ಜಯಂತಿಯ ಆಹ್ವಾನ ಪತ್ರಿಕೆ ವೇದಿಕೆಯಾಗಿದೆ. ತಮ್ಮ ಕ್ಷೇತ್ರದಲ್ಲಿ ಆಯೋಜಿಸಿರುವ ಕೆಂಪೇಗೌಡ ಜಯಂತಿ ಕಾರ್ಯಕ್ರಮಕ್ಕೆ ಶಾಸಕ ಸಾ. ರಾ. ಮಹೇಶ್, ಜಿ. ಟಿ. ದೇವೇಗೌಡರನ್ನು ಭೇಟಿಯಾಗಿ ಆಹ್ವಾನಿಸಿದ್ದಾರೆ.
ಸದ್ಯ ಜಿ. ಟಿ. ದೇವೇಗೌಡ ಜೆಡಿಎಸ್ನಿಂದ ಅಂತರ ಕಾಯ್ದುಕೊಂಡಿದ್ದಾರೆ. ಪಕ್ಷದ ಯಾವುದೇ ರಾಜಕೀಯ ಕಾರ್ಯಕ್ರಮದಲ್ಲಿ ಅವರು ಭಾಗವಹಿಸುತ್ತಿಲ್ಲ. ಇತ್ತ ಕಾಂಗ್ರೆಸ್ಗೆ ಸೇರ್ಪಡೆ ಆಗುತ್ತಾರೆ ಎಂಬ ನಿರ್ಧಾರವನ್ನು ಇನ್ನೂ ಅಧಿಕೃತವಾಗಿ ಬಹಿರಂಗಪಡಿಸಿಲ್ಲ. ಹಾಗಂತ ಬಿಜೆಪಿ ಸಂಗವೂ ತೊರೆದಿಲ್ಲ. ಈ ಎಲ್ಲಾ ಕಾರಣಗಳಿಂದ ಅವರ ನಡೆ ಬಗ್ಗೆ ಯಾರಿಗೂ ಏನು ತಿಳಿಯದಾಗಿದೆ.
ಇತ್ತೀಚೆಗಷ್ಟೇ ಬೇಸರಗೊಂಡು ಜಿ. ಟಿ. ದೇವೇಗೌಡರು ಪಕ್ಷದಿಂದ ದೂರ ಉಳಿದಿದ್ದರು. ಇದೀಗ ಅವರು ಸಾ. ರಾ. ಮಹೇಶ್ರನ್ನು ಭೇಟಿ ಆಗಿರುವುದು ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಹಾಗೆಯೇ ಇವರಿಬ್ಬರ ನಡುವೆ ಚರ್ಚೆ ನಡೆದಿರುವುದು ಕೂಡ ಚರ್ಚೆಗೆ ಗ್ರಾಸವಾಗಿದೆ.

ಮುಂಬರುವ ಚುನಾವಣೆಗಳಿಗೆ ಈಗಾಗಲೇ ಎಲ್ಲಾ ಪಕ್ಷಗಳು ಸಿದ್ಧತೆ ನಡೆಸುತ್ತಿದ್ದು, ಜಿ. ಟಿ. ದೇವೇಗೌಡರ ಪಯಣ ಯಾವ ಕಡೆ ಎಂಬುದನ್ನು ಅವರು ಇನ್ನು ಬಿಟ್ಟುಕೊಟ್ಟಿಲ್ಲ.
-
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ -
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
ಕನ್ನಡಿಗರಿಗಿಂತ ಕೇರಳದವರೇ ಅದೃಷ್ಟವಂತರು: ವಯನಾಡಿಗೆ ಸಿದ್ದರಾಮಯ್ಯರಿಂದ 10 ಕೊಟಿ ರೂ ಅನುದಾನ: ಆಕ್ರೋಶ -
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
ಬೆಂಗಳೂರು ಬಂಗಲೆ ವಿವಾದ: ರಾಜೀವ್ ಚಂದ್ರಶೇಖರ್ ನಾಮಪತ್ರ ಅಂಗೀಕರಿಸಿದ ಚುನಾವಣಾ ಆಯೋಗ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ?












Click it and Unblock the Notifications