ಸಾಂಸ್ಕೃತಿಕ ನಗರಿಯ ಬಾನಂಗಳದಲ್ಲಿ ಹಾರಾಡಲಿವೆ ಬಣ್ಣಬಣ್ಣದ ಗಾಳಿಪಟ
ಮೈಸೂರು, ಸೆಪ್ಟೆಂಬರ್ 28: ದಸರೆಗೆ ಪೂರ್ವಭಾವಿಯಾಗಿ ನಾಳೆ ರಾತ್ರಿ ಬಣ್ಣಬಣ್ಣದ ತರಹೇವಾರಿ ಗಾಳಿಪಟಗಳು ಸಾಂಸ್ಕೃತಿಕ ನಗರಿಯ ಬಾನಂಗಳದಲ್ಲಿ ಹಾರಾಡಲಿವೆ.
ಈ ಕುರಿತು ಮಾಹಿತಿ ನೀಡಿದ ಜಿಲ್ಲಾಧಿಕಾರಿ ಅಭಿರಾಂ ಶಂಕರ್, ಪ್ರವಾಸೋದ್ಯಮ ಇಲಾಖೆ ವತಿಯಿಂದ ಮೈಸೂರಿನಲ್ಲಿ ಮೊದಲ ಬಾರಿಗೆ ಇಂಥ ಪ್ರಯೋಗ ಲಲಿತಮಹಲ್ ಅರಮನೆಯ ಹೆಲಿಪ್ಯಾಡ್ ಮೈದಾನದಲ್ಲಿ ನಡೆಯಲಿದೆ.
ನಾಳೆ ಸೆ. 29 ಹಾಗೂ 30ರಂದು ಪತಂಗೋತ್ಸವ ಆಯೋಜಿಸಲಾಗಿದ್ದು, ಎಲ್ಇಡಿ ಬೆಳಕು ಹಾಗೂ ಆಕಾಶ ದೀಪಗಳಿಂದ ಕೂಡಿದ ಗಾಳಿಪಟಗಳ ಹಾರಾಟ ಪ್ರದರ್ಶನವಿರಲಿದೆ. ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿರುವ ಗಾಳಿಪಟ ಹಾರಾಟಗಾರರು ಉತ್ಸವದಲ್ಲಿ ಭಾಗವಹಿಸಿ ವಿಶಿಷ್ಟ ವಿನ್ಯಾಸದ ಗಾಳಿಪಟ ಪ್ರದರ್ಶಶನದ ಮೂಲಕ ಉತ್ಸವದಲ್ಲಿ ಕೌಶಲ ತೋರಲಿದ್ದಾರೆ ಎಂದರು.

ಅಷ್ಟೇ ಅಲ್ಲ ಅವರು ಬಗೆಬಗೆಯ ಗಾಳಿಪಟಗಳನ್ನು ಹಾರಿ ಬಿಟ್ಟು ಗಾಳಿಪಟ ಪ್ರಿಯರ ಉತ್ಸವಕ್ಕೆ ಮೆರುಗು ತುಂಬಲಿದ್ದಾರೆ. ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಚಾಲನೆ ನೀಡಲಿದ್ದಾರೆ.
ಎರಡು ದಿನಗಳ ಉತ್ಸವದಲ್ಲಿ ಪಾಲ್ಗೊಳ್ಳಲು ಸಾರ್ವಜನಿಕರಿಗೂ ಅವಕಾಶ ನೀಡಲಾಗುತ್ತದೆ ಎಂದು ತಿಳಿಸಿದರು.
ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ಎಚ್.ಪಿ.ಜನಾರ್ಧನ್ ಮಾತನಾಡಿ ಉತ್ಸವದಲ್ಲಿ ಪಾಲ್ಗೊಳ್ಳುವವರು ಇಲಾಖೆಯಲ್ಲಿ ಹೆಸರು ನೋಂದಣಿ ಮಾಡಿಸಿಕೊಳ್ಳಬೇಕು.
30ರಂದು ಪತಂಗೋತ್ಸವದ ಜೊತೆ ಗಾಳಿಪಟ ತಯಾರಿಕೆ ಬಗ್ಗೆ ಮಕ್ಕಳಿಗೆ ಮಾಹಿತಿ ನೀಡಲು ಕಾರ್ಯಾಗಾರ ಆಯೋಜಿಸಲಾಗುತ್ತಿದೆ. ಗಾಳಿಪಟ ಹಾರಿಸುವ ಬಗ್ಗೆಯೂ ಪರಿಣತರು ತರಬೇತಿ ನೀಡಲಿದ್ದಾರೆ. 2 ಇಂಚಿನಿಂದ ಹಿಡಿದು 30 ಅಡಿ ಎತ್ತರದವರೆಗಿನ ಗಾಳಿಪಟಗಳು ಉತ್ಸವದಲ್ಲಿ ಮೋಡಿ ಮಾಡಲಿವೆ.

ಪರಿಣಿತ ಗಾಳಿಪಟ ಕಲಾವಿದರನ್ನು ಉತ್ಸವಕ್ಕೆ ಆಹ್ವಾನಿಸಲಾಗುತ್ತಿದೆ. ಸೂರತ್, ಅಹಮದಾಬಾದ್, ಹೈದರಾಬಾದ್, ಮುಂಬೈ, ಮಂಗಳೂರಿನಿಂದ ಗಾಳಿಪಟ ಹಾರಾಟಗಾರರು ಬರಲಿದ್ದಾರೆ. ಮಂಗಳೂರು ತಂಡವು ಫ್ರಾನ್ಸ್ನಲ್ಲಿ ನಡೆದ ಅಂತರರಾಷ್ಟ್ರೀಯ ಗಾಳಿಪಟ ಉತ್ಸವದಲ್ಲಿ ಪಾಲ್ಗೊಂಡು ಗಮನ ಸೆಳೆದಿತ್ತು ಎಂದು ಮಾಹಿತಿ ನೀಡಿದರು.
ಈ ಬಾರಿ ದಸರಾ ಮಹೋತ್ಸವಕ್ಕೆ ಸ್ವಾಗತ ಗೀತೆ ರಚಿಸಲು ಪ್ರವಾಸೋದ್ಯಮ ಇಲಾಖೆ ಮುಂದಾಗಿದ್ದು, ನಟ ಪುನೀತ್ ರಾಜಕುಮಾರ್ ಹಾಡಲಿದ್ದಾರೆ. ಮಣಿಕಾಂತ್ ಕದ್ರಿ ಅವರು ಸಂಗೀತ ಸಂಯೋಜಿಸಲಿದ್ದು, ವಿ.ನಾಗೇಂದ್ರಪ್ರಸಾದ್ ಸಾಹಿತ್ಯ ರಚಿಸಲಿದ್ದಾರೆ.
ದಸರೆಗೆ ಮೆರುಗು ತುಂಬಲು ಸ್ವಾಗತ ಗೀತೆ ಅಳವಡಿಸುವ ಯೋಜನೆ ಇದೆ. ಸದ್ಯದಲ್ಲೇ ಸಿದ್ಧತೆ ಆರಂಭವಾಗಲಿದ್ದು, ಕಲಾವಿದರನ್ನು ಸಂಪರ್ಕಿಸಲಾಗುವುದೆಂದು ಜನಾರ್ಧನ್ ತಿಳಿಸಿದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications