ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸ್ಮಾರಕ ಉದ್ಯಾನವನದ ಅವ್ಯವಸ್ಥೆ ಖಂಡಿಸಿ ಪ್ರತಿಭಟನೆ

By Ashwath
|
Google Oneindia Kannada News

ಮೈಸೂರು,ಜು.7: ನಗರದ ಸ್ವಾತಂತ್ರ್ಯ ಹೋರಾಟಗಾರರ ಸ್ಮಾರಕ ಉದ್ಯಾನವನದ ಅವ್ಯವಸ್ಥೆಯನ್ನು ಖಂಡಿಸಿ ನಾಗರಿಕರ ಸಹಯೋಗ ಸಮಿತಿ ಜು.10ರಂದು ಮಹಾನಗರ ಪಾಲಿಕೆಯ ಮುಂದೆ ಪ್ರತಿಭಟನೆ ನಡೆಸಲು ಮುಂದಾಗಿದೆ.

ಪಾಲಿಕೆ ಲಕ್ಷಾಂತರ ರೂಪಾಯಿ ಖರ್ಚು‌ ಮಾಡುತ್ತಿದೆ ಎಂದು ಬಜೆಟ್‌ನಲ್ಲಿ ತೋರಿಸಿದ್ದರೂ ಸ್ಮಾರಕ ಉದ್ಯಾನವನದ ಹದಗೆಟ್ಟ ಸ್ಥಿತಿಯಲ್ಲಿದೆ. ಸಾಕಷ್ಟು ಬಾರಿ ಜನರು ಮನವಿ ಸಲ್ಲಿಸಿದರೂ ಪಾಲಿಕೆ ಕ್ರಮ ಕೈಗೊಳ್ಳದ ಹಿನ್ನಲೆಯಲ್ಲಿ ಸಮಿತಿಯ 50 ಜನ ಸದಸ್ಯರು ಚರ್ಚಿಸಿ ಪ್ರತಿಭಟನೆಯ ನಿರ್ಧಾರಕ್ಕೆ ಬಂದಿದ್ದಾರೆ.

mysore
ಹೋರಾಟಗಾರರ ಕಂಚಿನ ಪ್ರತಿಮೆಗಳನ್ನು ನೂತನವಾಗಿ ನಿರ್ಮಿಸಿದ್ದರೂ, ಸರಿಯಾದ ನಿರ್ವಹಣೆ ಇಲ್ಲದೆ, ಪ್ರತಿಮೆಗಳು ಹಕ್ಕಿಗಳ ಕಸದಿಂದ, ಬಿಸಿಲಿನಿಂದ, ತಮ್ಮ ಕಳೆಯನ್ನು ಕಳೆದುಕೊಳ್ಳುತ್ತಿವೆ. ಎಲ್ಲೆಂದರಲ್ಲಿ ಕಸದ ರಾಶಿಗಳಿವೆ. ಉದ್ಯಾನವನದ ಆಡಳಿತ ನಿರ್ವಹಣೆಯೂ ಸರಿಯಿಲ್ಲದೆ, ಅನೈತಿಕ ಚಟುವಟಿಕೆಗಳು ಎಗ್ಗಿಲ್ಲದೆ ಸಾಗುತ್ತಿರುವ ಹಿನ್ನಲೆಯಲ್ಲಿ ಸದಸ್ಯರು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.[ರಜೆ ದಿನಗಳಲ್ಲಿ ಮೈಸೂರು ಮೃಗಾಲಯ ಸ್ವಲ್ಪ ದುಬಾರಿ]

ಸಮಿತಿಯ ಸಂಚಾಲಕ ಎಂ. ಶಶಿಧರ್‌ ಮಾತನಾಡಿ ಜನರಿಂದ ಸರ್ಕಾರ ಜನರ ಅಭಿವೃದ್ಧಿಗಾಗಿ ಜೆ-ನರ್ಮ್ ಸೇರಿದಂತೆ ನಾನಾ ಯೋಜನೆಗಳಿಗೆ ಕೋಟಿಗಟ್ಟಲೇ ಹಣವನ್ನು ಬಿಡುಗಡೆ ಮಾಡುತ್ತಿದೆ. ಆದರೆ ಈ ಹಣ ರಾಜಕಾರಣಿಗಳು, ಅಧಿಕಾರಿಗಳಳು, ಮತ್ತು ಗುತ್ತಿಗೆದಾರರ ಪಾಲಾಗುತ್ತಿದೆ ಎಂದು ಆರೋಪಿಸಿದರು.

English summary
The Citizens Coordination Committee has decided to stage a protest in front of the Mysore City Corporation (MCC) on July 10 to seek redressal for the grievances related to the Freedom Fighters Memorial Park in the city.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X