ಬಲಮುರಿ ಪ್ರವಾಸಕ್ಕೆ ತೆರಳಿದ್ದ ವಿದ್ಯಾರ್ಥಿ ನಿಗೂಢ ಸಾವು

ಮೈಸೂರು, ಮೇ 19: ಬಲಮುರಿಗೆ ಶಾಲಾ ಪ್ರವಾಸಕ್ಕೆಂದು ಬಂದಿದ್ದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದು, ಶಾಲಾ ಆಡಳಿತ ಮಂಡಳಿ ವಿರುದ್ಧ ಮೃತ ವಿದ್ಯಾರ್ಥಿ ಪೋಷಕರು ಆಕ್ರೋಶ ಹೊರಹಾಕಿದ್ದಾರೆ.

ಬೇಲೂರಿನ ಮೌಂಟ್ ಕಾರ್ಮೆಲ್ ಶಾಲೆಯ ಹೇಮಂತ್ (16) ಸಾವಿಗೀಡಾದ ವಿದ್ಯಾರ್ಥಿ. ನಾಗರಾಜ್ ಹಾಗೂ ಜ್ಯೋತಿ ದಂಪತಿಯ ಪುತ್ರ ಹೇಮಂತ್, ಶಾಲಾ ಪ್ರವಾಸಕ್ಕೆಂದು ಶಾಲೆಯ ಶಿಕ್ಷಕರಾದ ಫಾದರ್ ಪ್ರಕಾಶ್ ಸಾಗರ್ ಹಾಗೂ 12 ಮಕ್ಕಳೊಂದಿಗೆ ಬಲಮುರಿಗೆ ಆಗಮಿಸಿದ್ದಾರೆ. ಆದರೆ ಶನಿವಾರ ಸಂಜೆ 5 ಗಂಟೆ ಸುಮಾರಿಗೆ ಮೌಂಟ್ ಕಾರ್ಮೆಲ್ ವಿದ್ಯಾರ್ಥಿ ಹೇಮಂತ್ ಸಾವಿಗೀಡಾಗಿದ್ದಾನೆ.

ವಿದ್ಯಾರ್ಥಿ ಸಾವನ್ನಪ್ಪಿದ್ದರೂ ಪೋಷಕರಿಗೆ ಈ ಬಗ್ಗೆ ಮೌಂಟ್ ಕಾರ್ಮಲ್ ಸಿಬ್ಬಂದಿ ಮಾಹಿತಿ ನೀಡದೆ ಇರುವುದು ಹಲವು ಅನುಮಾನಕ್ಕೆ ಕಾರಣವಾಗಿದೆ. ಮಗನ ಸಾವನ್ನು ಖುದ್ದು ಪೋಷಕರೇ ಖಚಿತಪಡಿಸಿಕೊಳ್ಳುವಂತೆ ಆಡಳಿತ ಮಂಡಳಿ ಹೇಳಿದ್ದು, ವಿದ್ಯಾರ್ಥಿ ಸಾವು ಮುಚ್ಚಿ ಹಾಕಲು ಪ್ರಯತ್ನಪಟ್ಟಂತೆ ಕಾಣುತ್ತಿದೆ. ಆಡಳಿತ ಮಂಡಳಿಯ ನಡೆಗೆ ಪೋಷಕರು ತೀವ್ರ ಅಸಮಧಾನ ವ್ಯಕ್ತಪಡಿಸಿದ್ದಾರೆ.

School student mysteriously died in Balamuri

ಮೈಸೂರಿನ ಕೆ.ಆರ್. ಶವಗಾರಕ್ಕೆ ಹೇಮಂತ್ ದೇಹವನ್ನು ತರುವಷ್ಟರಲ್ಲಿ ಫಾದರ್ ಪ್ರಕಾಶ್ ಸಾಗರ್ ಕಾಲ್ಕಿತ್ತಿದ್ದಾರೆ. ಮಗನ ಸಾವು ಅಸಹಜ ಎಂದು ಶಾಲೆಯ ಆಡಳಿತ ಮಂಡಳಿ ಮೇಲೆ ದೂರ ದಾಖಲಿಸಲು ಪೋಷಕರು ಮುಂದಾಗಿದ್ದು, ಈ ಕುರಿತು ಕೆ.ಆರ್.ಎಸ್. ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+