ವಿಜ್ಞಾನ-ವಾಸ್ತುಶಿಲ್ಪವಿಜ್ಞಾನದ ದಾರಿ ಒಟ್ಟಿಗೆ ಸಾಗುತ್ತಿಲ್ಲ: ಉಮಾಶ್ರೀ
ಮೈಸೂರು, ಜನವರಿ 24 : ವಿಜ್ಞಾನದ ಹಿಂದೆ ಓಡುತ್ತಿರುವ ನಾವು ವಾಸ್ತುಶಿಲ್ಪ ವಿಜ್ಞಾನವನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯವುದನ್ನು ಮರೆತಿದ್ದೇವೆ. ಇದರಿಂದ ವಿಜ್ಞಾನ-ವಾಸ್ತುಶಿಲ್ಪವಿಜ್ಞಾನ ಸಮಾನಾಂತರವಾಗಿ ಸಾಗುತ್ತಿಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ಬೇಸರ ವ್ಯಕ್ತಪಡಿಸಿದರು.
ವಿಶ್ವಮಟ್ಟದಲ್ಲಿ ಭಾರತದ ವಾಸ್ತುಶಿಲ್ಪಕ್ಕೆ ಬಹಳ ಪ್ರಾಮುಖ್ಯತೆ ಇದೆ. ವಿದೇಶಿಗರು ನಮ್ಮ ಕಲೆ, ಸಂಸ್ಕೃತಿ, ಪರಂಪರೆಯನ್ನು ಅತ್ಯಂತ ಕುತೂಹಲ, ಆಸಕ್ತಿಯಿಂದ ನೋಡುತ್ತಾರೆ. ನಮ್ಮ ಪೂರ್ವಿಕರು ನಿರ್ಮಿಸಿರುವ ಶಿಲ್ಪಗಳು, ಕಟ್ಟಡಗಳು ಎಷ್ಟೇ ವರ್ಷಗಳು ಉರುಳಿದರೂ ಕಳೆಗುಂದಿಲ್ಲ. ಆದರೆ, ನಮ್ಮಲ್ಲಿ ವಾಸ್ತುಶಿಲ್ಪದ ಬಗೆಗೆ ಪ್ರೀತಿಯೇ ಇಲ್ಲದಂತಾಗಿದ್ದು, ವಿಜ್ಞಾನದೊಂದಿಗೆ ವಾಸ್ತುಶಿಲ್ಪ ವಿಜ್ಞಾನದ ಅರಿವನ್ನೂ ಮೂಡಿಸಿ ಎತ್ತರಕ್ಕೆ ಏರಿಸುವ ಅಗತ್ಯತೆ ಇದೆ ಎಂದು ಮೈಸೂರಿನಲ್ಲಿ ಕರ್ನಾಟಕ ವಾಸ್ತುಶಿಲ್ಪ ಕುರಿತ ಎರಡು ದಿನಗಳ ಕಾರ್ಯಾಗಾರವನ್ನು ಉದ್ಘಾಟಿಸಿದ ಉಮಾಶ್ರೀ ತಿಳಿಸಿದರು.[ನೇಕಾರರು ರಾಜಕೀಯಕ್ಕೆ ಬರುವುದು ಅಪರಾಧವಲ್ಲ : ಉಮಾಶ್ರೀ]

ಇತಿಹಾಸ ಇಲ್ಲದೆ ಯಾವುದೇ ವಿಜ್ಞಾನ ಇಲ್ಲ. ವಿಜ್ಞಾನಕ್ಕೆ ತಳಹದಿಯ ಜ್ಞಾನವೇ ಇತಿಹಾಸ. ಶಿಲಾಯುಗದಿಂದ ಇಲ್ಲಿಯವರೆಗೂ ಮನುಷ್ಯ ಕಾಲ ಬದಲಾದಂತೆ ಹೊಸ ಹೊಸ ಸಂಶೋಧನೆಗಳ ಮೂಲಕ ನೂತನ ವಿಧಾನಗಳ ಕೊಡುಗೆ ನೀಡಿದ್ದಾನೆ. ಅಂದು ಯಾವ ತಂತ್ರಜ್ಞಾನ ಸೌಲಭ್ಯಗಳು ಇಲ್ಲದೇ ಇದ್ದರೂ ವಿಶ್ವವೇ ನಿಬ್ಬೆರಗುಗಣ್ಣಿನಿಂದ ಭಾರತದತ್ತ ತಿರುಗಿ ನೋಡುವಂತೆ ನಮ್ಮ ಪೂರ್ವಿಕರು ಮಾಡಿದ್ದಾರೆ. ಬಾದಾಮಿ, ಐಹೊಳೆ, ಪಟ್ಟದಕಲ್ಲು, ಬೇಲೂರು, ಹಳೇಬೀಡು, ಹಂಪಿ ನಮ್ಮ ರಾಜ್ಯದಲ್ಲಿರುವುದು ಹೆಮ್ಮೆಯ ಸಂಗತಿಯಾಗಿದ್ದು ಕನ್ನಡಿಗರು ಗರ್ವಪಡಬಹುದು ಎಂದರು.
ಇಂದು ಅಭಿರುಚಿಗಳು ಕಳೆದುಹೋಗುತ್ತಿವೆ. ವಿದ್ಯಾರ್ಥಿಗಳ ಸಮೇತವಾಗಿ ಎಲ್ಲರೂ ಹಣದ ಹಿಂದೆ ಬಿದ್ದಿದ್ದಾರೆ. ವಿದ್ಯೆ ಇರುವೆಡೆ ಲಕ್ಷ್ಮಿ ನೆಲೆಸಿರುತ್ತಾಳೆ. ಹಣದ ವ್ಯಾಮೋಹಕ್ಕೆ ಬಲಿಯಾಗಿ ವಿದ್ಯಾಸರಸ್ವತಿಯನ್ನು ಕಡೆಗಣಿಸಿದರೆ ಲಕ್ಷ್ಮಿ ಒಲಿಯುವುದಿಲ್ಲ. ಹಾಗಾಗಿ ವಿದ್ಯಾರ್ಥಿಗಳು ವಾಸ್ತುಶಿಲ್ಪಕ್ಕೆ ರಾಜಮಹಾರಾಜರ ಕೊಡುಗೆಯನ್ನು ಅರ್ಥಮಾಡಿಕೊಂಡು ಅದನ್ನು ಮುನ್ನಡೆಸಬೇಕು. ಸಂಶೋಧನಾತ್ಮಕ, ಅಧ್ಯಯನಾತ್ಮಕ ಮನಸ್ಸನ್ನು ರೂಢಿಸಿಕೊಳ್ಳಬೇಕು. ಆಳವಾಗಿ ಅಧ್ಯಯನ ಮಾಡಿ ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಬೇಕು. ಆಗ ಯಶಸ್ಸಿನೊಂದಿಗೆ ಸಕಲ ಸಂಪತ್ತು ನಿಮ್ಮದಾಗುತ್ತದೆ ಎಂದು ಸಲಹೆ ನೀಡಿದರು.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications