ವಿಜ್ಞಾನ-ವಾಸ್ತುಶಿಲ್ಪವಿಜ್ಞಾನದ ದಾರಿ ಒಟ್ಟಿಗೆ ಸಾಗುತ್ತಿಲ್ಲ: ಉಮಾಶ್ರೀ
ಮೈಸೂರು, ಜನವರಿ 24 : ವಿಜ್ಞಾನದ ಹಿಂದೆ ಓಡುತ್ತಿರುವ ನಾವು ವಾಸ್ತುಶಿಲ್ಪ ವಿಜ್ಞಾನವನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯವುದನ್ನು ಮರೆತಿದ್ದೇವೆ. ಇದರಿಂದ ವಿಜ್ಞಾನ-ವಾಸ್ತುಶಿಲ್ಪವಿಜ್ಞಾನ ಸಮಾನಾಂತರವಾಗಿ ಸಾಗುತ್ತಿಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ಬೇಸರ ವ್ಯಕ್ತಪಡಿಸಿದರು.
ವಿಶ್ವಮಟ್ಟದಲ್ಲಿ ಭಾರತದ ವಾಸ್ತುಶಿಲ್ಪಕ್ಕೆ ಬಹಳ ಪ್ರಾಮುಖ್ಯತೆ ಇದೆ. ವಿದೇಶಿಗರು ನಮ್ಮ ಕಲೆ, ಸಂಸ್ಕೃತಿ, ಪರಂಪರೆಯನ್ನು ಅತ್ಯಂತ ಕುತೂಹಲ, ಆಸಕ್ತಿಯಿಂದ ನೋಡುತ್ತಾರೆ. ನಮ್ಮ ಪೂರ್ವಿಕರು ನಿರ್ಮಿಸಿರುವ ಶಿಲ್ಪಗಳು, ಕಟ್ಟಡಗಳು ಎಷ್ಟೇ ವರ್ಷಗಳು ಉರುಳಿದರೂ ಕಳೆಗುಂದಿಲ್ಲ. ಆದರೆ, ನಮ್ಮಲ್ಲಿ ವಾಸ್ತುಶಿಲ್ಪದ ಬಗೆಗೆ ಪ್ರೀತಿಯೇ ಇಲ್ಲದಂತಾಗಿದ್ದು, ವಿಜ್ಞಾನದೊಂದಿಗೆ ವಾಸ್ತುಶಿಲ್ಪ ವಿಜ್ಞಾನದ ಅರಿವನ್ನೂ ಮೂಡಿಸಿ ಎತ್ತರಕ್ಕೆ ಏರಿಸುವ ಅಗತ್ಯತೆ ಇದೆ ಎಂದು ಮೈಸೂರಿನಲ್ಲಿ ಕರ್ನಾಟಕ ವಾಸ್ತುಶಿಲ್ಪ ಕುರಿತ ಎರಡು ದಿನಗಳ ಕಾರ್ಯಾಗಾರವನ್ನು ಉದ್ಘಾಟಿಸಿದ ಉಮಾಶ್ರೀ ತಿಳಿಸಿದರು.[ನೇಕಾರರು ರಾಜಕೀಯಕ್ಕೆ ಬರುವುದು ಅಪರಾಧವಲ್ಲ : ಉಮಾಶ್ರೀ]

ಇತಿಹಾಸ ಇಲ್ಲದೆ ಯಾವುದೇ ವಿಜ್ಞಾನ ಇಲ್ಲ. ವಿಜ್ಞಾನಕ್ಕೆ ತಳಹದಿಯ ಜ್ಞಾನವೇ ಇತಿಹಾಸ. ಶಿಲಾಯುಗದಿಂದ ಇಲ್ಲಿಯವರೆಗೂ ಮನುಷ್ಯ ಕಾಲ ಬದಲಾದಂತೆ ಹೊಸ ಹೊಸ ಸಂಶೋಧನೆಗಳ ಮೂಲಕ ನೂತನ ವಿಧಾನಗಳ ಕೊಡುಗೆ ನೀಡಿದ್ದಾನೆ. ಅಂದು ಯಾವ ತಂತ್ರಜ್ಞಾನ ಸೌಲಭ್ಯಗಳು ಇಲ್ಲದೇ ಇದ್ದರೂ ವಿಶ್ವವೇ ನಿಬ್ಬೆರಗುಗಣ್ಣಿನಿಂದ ಭಾರತದತ್ತ ತಿರುಗಿ ನೋಡುವಂತೆ ನಮ್ಮ ಪೂರ್ವಿಕರು ಮಾಡಿದ್ದಾರೆ. ಬಾದಾಮಿ, ಐಹೊಳೆ, ಪಟ್ಟದಕಲ್ಲು, ಬೇಲೂರು, ಹಳೇಬೀಡು, ಹಂಪಿ ನಮ್ಮ ರಾಜ್ಯದಲ್ಲಿರುವುದು ಹೆಮ್ಮೆಯ ಸಂಗತಿಯಾಗಿದ್ದು ಕನ್ನಡಿಗರು ಗರ್ವಪಡಬಹುದು ಎಂದರು.
ಇಂದು ಅಭಿರುಚಿಗಳು ಕಳೆದುಹೋಗುತ್ತಿವೆ. ವಿದ್ಯಾರ್ಥಿಗಳ ಸಮೇತವಾಗಿ ಎಲ್ಲರೂ ಹಣದ ಹಿಂದೆ ಬಿದ್ದಿದ್ದಾರೆ. ವಿದ್ಯೆ ಇರುವೆಡೆ ಲಕ್ಷ್ಮಿ ನೆಲೆಸಿರುತ್ತಾಳೆ. ಹಣದ ವ್ಯಾಮೋಹಕ್ಕೆ ಬಲಿಯಾಗಿ ವಿದ್ಯಾಸರಸ್ವತಿಯನ್ನು ಕಡೆಗಣಿಸಿದರೆ ಲಕ್ಷ್ಮಿ ಒಲಿಯುವುದಿಲ್ಲ. ಹಾಗಾಗಿ ವಿದ್ಯಾರ್ಥಿಗಳು ವಾಸ್ತುಶಿಲ್ಪಕ್ಕೆ ರಾಜಮಹಾರಾಜರ ಕೊಡುಗೆಯನ್ನು ಅರ್ಥಮಾಡಿಕೊಂಡು ಅದನ್ನು ಮುನ್ನಡೆಸಬೇಕು. ಸಂಶೋಧನಾತ್ಮಕ, ಅಧ್ಯಯನಾತ್ಮಕ ಮನಸ್ಸನ್ನು ರೂಢಿಸಿಕೊಳ್ಳಬೇಕು. ಆಳವಾಗಿ ಅಧ್ಯಯನ ಮಾಡಿ ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಬೇಕು. ಆಗ ಯಶಸ್ಸಿನೊಂದಿಗೆ ಸಕಲ ಸಂಪತ್ತು ನಿಮ್ಮದಾಗುತ್ತದೆ ಎಂದು ಸಲಹೆ ನೀಡಿದರು.
-
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ












Click it and Unblock the Notifications