ಹಿರಿಯ ಕನ್ನಡ ಚಳವಳಿಯ ಹೋರಾಟಗಾರ ಪ.ಮಲ್ಲೇಶ್ ವಿಧಿವಶ

ಮೈಸೂರು, ಜನವರಿ 19: ಹಿರಿಯ ಸಮಾಜವಾದಿ, ಗಾಂಧಿವಾದಿ ಹಾಗೂ ಕನ್ನಡ ಚಳವಳಿಯ ಹೋರಾಟಗಾರ ಪ.ಮಲ್ಲೇಶ್ ಅವರು ಹೃದಯಾಘಾತದಿಂದ ಗುರುವಾರ ವಿಧಿವಶರಾಗಿದ್ದಾರೆ.

ಮೈಸೂರಿನ ರಾಮಕೃಷ್ಣನಗರದ ನಿವಾಸಿಯಾದ ಅವರಿಗೆ 89 ವರ್ಷ ವಯಸ್ಸಾಗಿತ್ತು. ಎಂದಿನಂತೆ ತಮ್ಮ ನೃಪತುಂಗ ಕನ್ನಡ ಶಾಲೆಗೆ ಮಧ್ಯಾಹ್ನ ಮಲ್ಲೇಶ್ ಅವರು ಆಗಮಿಸಿ ಶಾಲೆಯ ಚಟುವಟಿಕೆ ನೋಡಿ ಮನೆಗೆ ತೆರಳಿದ್ದರು. ಆದರೆ, ದಿಢೀರ್ ಎಂದು ಅಸ್ವಸ್ಥರಾದ ಅವರನ್ನು ನಗರದ ಅಪೋಲೋ ಆಸ್ಪತ್ರೆಗೆ ದಾಖಲಿಸಲಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಂಜೆ 4 ಗಂಟೆ ವೇಳೆಗೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತರಾಗಿದ್ದ ಪ.ಮಲ್ಲೇಶ್ ಕನ್ನಡ ಪರ ಹೋರಾಟಗಾರರಾಗಿದ್ದರು.

ಳೆದ ಮೂರು ವರ್ಷದ ಹಿಂದೆ ಇವರ ಪತ್ನಿ ಸರ್ವಮಂಗಳಾ ಕೂಡ ಮೃತಪಟ್ಟಿದ್ದರು. ಪ.ಮಲ್ಲೇಶ್ ಅವರಿಗೆ ಮೂವರು ಪುತ್ರಿಯರು ಹಾಗೂ ಒಬ್ಬ ಮಗ ಇದ್ದಾನೆ. ಇವರ ಅಂತ್ಯಸಂಸ್ಕಾರ ನಾಳೆ ಮೈಸೂರಿನ ರುದ್ರಭೂಮಿಯಲ್ಲಿ ನಡೆಯಲಿದೆ. ಪ. ಮಲ್ಲೇಶ್ ನೇರ ನಡೆ ನುಡಿಯ ಹೋರಾಟಗಾರರಾಗಿದ್ದರು.

Senior Kannada Movement Fighter Mallesh Passed Away

ಗೋಕಾಕ್ ಚಳವಳಿ ಸ್ಪೂರ್ತಿ

ಪ.ಮಲ್ಲೇಶ್ ಅವರು ಕನ್ನಡದ ಗೋಕಾಕ್ ಚಳವಳಿಯಲ್ಲೂ ಭಾಗವಹಿಸಿದ್ದರು. ಅದನ್ನು ಸ್ಫೂರ್ತಿಯಾಗಿ ಪಡೆದುಕೊಂಡು ಮೈಸೂರಿನಲ್ಲಿ ನೃಪತುಂಗ ಕನ್ನಡ ಶಾಲೆಯನ್ನು ಆರಂಭಿಸಿದರು. ಕಳೆದ ಮೂರು ವರ್ಷದಿಂದ ಇಲ್ಲಿನ ಪಿಯು ಕಾಲೇಜಿನಲ್ಲಿ ವಿಜ್ಞಾನವನ್ನು ಕನ್ನಡದಲ್ಲಿ ಹೇಳಿಕೊಡಲಾಗುತ್ತಿದೆ. ರಾಜ್ಯದಲ್ಲೇ ವಿಜ್ಞಾನವನ್ನು ಕನ್ನಡದಲ್ಲಿ ಕಲಿಸುತ್ತಿರುವ ಏಕೈಕ ಕಾಲೇಜು ಅಂದರೆ ಅದು ನೃಪತುಂಗ ಕಾಲೇಜು. ಅಲ್ಲದೆ, ಕನ್ನಡ ಕ್ರಿಯಾ ಸಮಿತಿ ರಚಿಸಿ ಮೂರು ದಶಕಗಳ ಕಾಲ ಅದರ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಮಾನವ ಎಂಬ ಮಾಸ ಪತ್ರಿಕೆಯನ್ನು ನಡೆಸುತ್ತಿದ್ದರು.

ಮೃತರ ಸಾವಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆ, ಜನಮನ ಸದಸ್ಯರು ಸಂತಾಪ ಸೂಚಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+