ನಿಪಾ ವೈರಸ್: ಮಂಡ್ಯ, ಮಡಿಕೇರಿ ಆಸ್ಪತ್ರೆಗಳಲ್ಲಿ ಪ್ರತ್ಯೇಕ ವಾರ್ಡ್ ಸ್ಥಾಪನೆ
ಮೈಸೂರು, ಮೇ 23 : ಕೇರಳದ ಎರಡು ಜಿಲ್ಲೆಗಳಲ್ಲಿ ಕಾಣಿಸಿಕೊಂಡಿರುವ ನಿಪಾ ವೈರಸ್ ಹಿನ್ನೆಲೆಯಲ್ಲಿ ಕರ್ನಾಟಕದ ಗಡಿ ಜಿಲ್ಲೆಗಳಲ್ಲೂ ಕೂಡಾ ಕಟ್ಟೆಚ್ಚರಿಕೆ ವಹಿಸಲಾಗಿದೆ. ಒಂದೊಮ್ಮೆ ಶಂಕಿತ ವೈರಸ್ ಸೋಂಕಿತರು ಪತ್ತೆಯಾದರೆ ಅವರಿಗೆ ಚಿಕಿತ್ಸೆ ನೀಡಲೆಂದು ಮಂಡ್ಯ, ಗುಂಡ್ಲುಪೇಟೆ ಹಾಗೂ ಮಡಿಕೇರಿ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಪ್ರತ್ಯೇಕವಾದ ವಾರ್ಡ್ ಗಳನ್ನು ಸೃಜಿಸಲಾಗಿದೆ.
ಆರೋಗ್ಯ ಇಲಾಖೆಯ ಮೂಲಗಳ ಪ್ರಕಾರ ಈ ಮೂರು ಜಿಲ್ಲೆಗಳೂ ಕೇರಳದ ಗಡಿಗೆ ಹೊಂದಿಕೊಂಡಂತಿವೆ. ಹೀಗಾಗಿ ಸಹಜವಾಗಿಯೇ ಪ್ರವಾಸಿಗರ ಓಡಾಟ, ವ್ಯಾಪಾರ ವಹಿವಾಟು ಹೆಚ್ಚು. ಈ ಹಿನ್ನೆಲೆಯಲ್ಲಿ ಒಂದೊಮ್ಮೆ ನಿಪಾ ವೈರಸ್ ಈ ಜಿಲ್ಲೆಗಳಿಗೂ ಹರಡಿದರೆ ಎಂಬ ಕಾರಣಕ್ಕಾಗಿ, ರೋಗಿಗಳಿಗೆ ಚಿಕಿತ್ಸೆ ನೀಡಲು ಈ ಪ್ರತ್ಯೇಕ ವಾರ್ಡ್ ಗಳನ್ನು ಸೃಜಿಸಲಾಗಿದೆ.

ಈ ವಾರ್ಡ್ ಗಳನ್ನು ಐಸೋಲೇಶನ್ ವಾರ್ಡ್ ಗಳೆಂದು ಕರೆಯಲಾಗುವುದು. ರೋಗ ಇನ್ನೊಬ್ಬರಿಗೆ ಹರಡದಿರಲಿ ಎಂಬ ಕಾರಣಕ್ಕಾಗಿ ಇಲ್ಲಿ ಪ್ರತ್ಯೇಕವಾಗಿ ಶಂಕಿತರಿಗೆ ಚಿಕಿತ್ಸೆ ನೀಡಲಾಗುವುದು. ಖಾಸಗಿ ಆಸ್ಪತ್ರೆಗಳಲ್ಲಿ ಇಂತಹ ವ್ಯವಸ್ಥೆ ಇರುವುದಿಲ್ಲ ಎನ್ನುತ್ತಾರೆ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು.
ಪೋರ್ಕ್ ಆಮದು ನಿಷೇಧ?
ಈ ನಡುವೆ ಕೇರಳದ ಗಡಿಗೆ ಹೊಂದಿಕೊಂಡಿರುವ ಚಾಮರಾಜನಗರದಲ್ಲಿ ಆರೋಗ್ಯ ಇಲಾಖೆ ಕಟ್ಟೆಚ್ಚರ ವಹಿಸಿದೆ. ಈ ರೋಗಾಣು ಹಂದಿಗಳ ಮೂಲಕ ಕೂಡಾ ಹರಡಬಹುದು ಎಂಬ ವರದಿಗಳ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಬಿಬಿ ಕಾವೇರಿ ಜಿಲ್ಲೆಯಿಂದ ಹಂದಿ ಉತ್ಪನ್ನಗಳ ಆಮದು-ರಫ್ತು ಸಂಪೂರ್ಣ ನಿಷೇಧ ಮಾಡುವ ಪ್ರಸ್ತಾಪ ಮುಂದಿಟ್ಟಿದ್ದಾರೆ.
-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications