ಕುಕ್ಕರಹಳ್ಳಿಯಲ್ಲಿ ಪೆಲಿಕಾನ್ ಸರಣಿ ಸಾವು; ಇದರ ಹಿಂದಿನ ಕಾರಣವಾದರೂ ಏನು?
ಮೈಸೂರು, ನವೆಂಬರ್ 13: ಕುಕ್ಕರಹಳ್ಳಿ ಕೆರೆಯಲ್ಲಿ ಪೆಲಿಕಾನ್ ಹಕ್ಕಿಗಳು ಸಾವನ್ನಪ್ಪುವುದು ನಿಲ್ಲುವಂತೆ ತೋರುತ್ತಿಲ್ಲ. ಈಚೆಗಷ್ಟೇ ಕೆರೆಯ ಸಮೀಪ ಒಂದು ಪೆಲಿಕಾನ್ ಸಾವನ್ನಪ್ಪಿತ್ತು. ನಿನ್ನೆ ಸಂಜೆ ಮತ್ತೊಂದು ಪೆಲಿಕಾನ್ ಸಾವನ್ನಪ್ಪಿರುವುದು ಪಕ್ಷಿಪ್ರಿಯರಲ್ಲಿ ಆತಂಕ ಮೂಡಿಸಿದೆ. ತಿಂಗಳ ಅಂತರದಲ್ಲಿ ಒಟ್ಟು ನಾಲ್ಕು ಪೆಲಿಕಾನ್ ಗಳು ಜೀವ ಕಳೆದುಕೊಂಡಿವೆ.
ನಿನ್ನೆ ಸಂಜೆ ಕುಕ್ಕರಹಳ್ಳಿ ಕೆರೆಯಲ್ಲಿ ಸ್ಪಾಟ್ ಬಿಲ್ಡ್ ಪೆಲಿಕಾನ್ ಪಕ್ಷಿಯ ಮೃತದೇಹ ತೇಲುತ್ತಿರುವುದು ವಾಯು ವಿಹಾರಿಗಳ ಗಮನಕ್ಕೆ ಬಂದಿದೆ. ಕೂಡಲೇ ಈ ವಿಚಾರವನ್ನು ಅರಣ್ಯಾಧಿಕಾರಿಗಳಿಗೆ ತಿಳಿಸಿದ್ದಾರೆ.

ತಿಂಗಳ ಅಂತರದಲ್ಲಿ ನಾಲ್ಕು ಪಕ್ಷಿಗಳ ಸಾವು
ಕಳೆದ ಒಂದು ತಿಂಗಳಿನಲ್ಲಿ ಮೃತಪಟ್ಟ ನಾಲ್ಕನೇ ಪೆಲಿಕಾನ್ ಪಕ್ಷಿ ಇದಾಗಿದೆ. ಆದರೆ ಇನ್ನೂ ಈ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ನಿನ್ನೆ ಮತ್ತೆ ಒಂದು ಪೆಲಿಕಾನ್ ಸಾವನ್ನಪ್ಪಿದ್ದು, ಸ್ಥಳಕ್ಕೆ ಬಂದ ಅಧಿಕಾರಿಗಳು ಮೃತ ಪಕ್ಷಿಯ ಕಳೆಬರವನ್ನು ಬೆಂಗಳೂರಿನ ಅನಿಮಲ್ ಹೆಲ್ತ್ ಅಂಡ್ ವೆಟರ್ನರಿ ಬಯೋಲಾಜಿಕಲ್ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ. ಒಂದೆರಡು ದಿನಗಳಲ್ಲಿ ವರದಿ ಬರುವ ನಿರೀಕ್ಷೆ ಇದ್ದು, ಈ ಪಕ್ಷಿಗಳ ಸಾವಿಗೆ ನಿಖರ ಕಾರಣ ತಿಳಿಯಲಿದೆ ಎಂದು ಡಿಸಿಎಫ್ ಪ್ರಶಾಂತ್ ಕುಮಾರ್ ತಿಳಿಸಿದ್ದಾರೆ.

ಕಾಡಿದೆ ಹಕ್ಕಿ ಜ್ವರದ ಆತಂಕ
ಕುಕ್ಕರಹಳ್ಳಿ ಕೆರೆಯಲ್ಲಿ ಅಕ್ಟೋಬರ್ 30ರಂದು ಒಂದು ಪೆಲಿಕಾನ್ ಸಾವನ್ನಪ್ಪಿತ್ತು. ಅದಕ್ಕೂ ಮುನ್ನ ಎರಡು ಪೆಲಿಕಾನ್ ಪಕ್ಷಿಗಳು ಸಾವನ್ನಪ್ಪಿದ್ದವು. ಇವುಗಳ ಸಾವಿಗೆ ಸಂಬಂಧಿಸಿದಂತೆ ಪ್ರಾಥಮಿಕ ವರದಿ ದೊರೆತಿದ್ದು, ಪೆಲಿಕಾನ್ ಹಕ್ಕಿಗಳ ಸಾವಿಗೆ ಹಕ್ಕಿ ಜ್ವರ ಕಾರಣವಲ್ಲ, ಯಾವುದೇ ಭಯ ಪಡುವ ಅಗತ್ಯವಿಲ್ಲ ಎಂದು ಡಿಸಿಎಫ್ ಪ್ರಶಾಂತ್ ಕುಮಾರ್ ಸ್ಪಷ್ಟಪಡಿಸಿದ್ದರು. ಆದರೆ ಮೇಲಿಂದ ಮೇಲೆ ಪೆಲಿಕಾನ್ ಪಕ್ಷಿಗಳು ಸಾವಿಗೀಡಾಗುತ್ತಿರುವುದಕ್ಕೆ ಹಕ್ಕಿ ಜ್ವರದ ಕಾರಣವಿರಬಹುದು ಎಂಬ ಆತಂಕ ಜನರಲ್ಲಿ ವ್ಯಕ್ತವಾಗಿತ್ತು. ಈಗ ಆ ಆತಂಕ ಇನ್ನೂ ಹೆಚ್ಚಾಗಿದೆ.

ಕೊಕ್ಕರೆ ಬೆಳ್ಳೂರಿನಲ್ಲೂ ಸಾವನ್ನಪ್ಪಿದ ಪೆಲಿಕಾನ್
ಪಕ್ಷಿಗಳ ಆಶ್ರಯ ತಾಣವಾಗಿರುವ ಕೊಕ್ಕರೆ ಬೆಳ್ಳೂರಿನಲ್ಲಿ ನವೆಂಬರ್ 7ರಂದು ಪೆಲಿಕಾನ್ ಒಂದು ಸಾವನ್ನಪ್ಪಿತ್ತು. ಅದರ ನಂತರ ಮತ್ತೊಂದು ಪೆಲಿಕಾನ್ ಕೂಡ ಅಸ್ವಸ್ಥಗೊಂಡಿತ್ತು. ಹೀಗೆ ಸರಣಿಯಾಗಿ ಅಸ್ವಸ್ಥಗೊಂಡು ಪೆಲಿಕಾನ್ ಗಳು ಸಾವನ್ನಪ್ಪುತ್ತಿರುವುದು ಆತಂಕಕ್ಕೂ ಎಡೆಮಾಡಿಕೊಟ್ಟಿತ್ತು. ಆದರೆ ಇದು ಹಕ್ಕಿಜ್ವರವಲ್ಲ, ಜಂತುಹುಳ ಸಮಸ್ಯೆ ಎಂದು ಅಧಿಕಾರಿಗಳು ತಿಳಿಸಿದ್ದರು.

ಮರುಕಳಿಸೀತೇ ಕಳೆದ ವರ್ಷದ ಘಟನೆ?
ಕಳೆದ ವರ್ಷವೂ ಕೊಕ್ಕರೆ ಬೆಳ್ಳೂರಿನಲ್ಲಿ ಇದೇ ರೀತಿಯ ಪರಿಸ್ಥಿತಿ ತಲೆದೋರಿ ಜಂತುಹುಳು ಸಮಸ್ಯೆಯಿಂದ ಸುಮಾರು 45ಕ್ಕೂ ಹೆಚ್ಚು ಪಕ್ಷಿಗಳು ಸಾವನಪ್ಪಿದ್ದವು. ಈ ಪಕ್ಷಿಗಳ ಸಾವನ್ನು ನೋಡಿದ ಗ್ರಾಮಸ್ಥರು ಹಕ್ಕಿ ಜ್ವರದ ಆತಂಕ ವ್ಯಕ್ತಪಡಿಸಿ ಕ್ರಮ ವಹಿಸಲು ಪ್ರತಿಭಟನೆ ನಡೆಸಿದ್ದರು. ಇದರಿಂದ ಎಚ್ಚೆತ್ತ ಅರಣ್ಯ ಇಲಾಖೆ ರಾಸಾಯನಿಕ ಸಿಂಪಡಿಸಿತು. ಮೃತ ಪೆಲಿಕಾನ್ ಗಳ ದೇಹವನ್ನು ಪ್ರಯೋಗಾಲಯಕ್ಕೂ ಕಳುಹಿಸಿತ್ತು. ಸ್ಥಳಕ್ಕೆ ತಜ್ಞರು ಬಂದು ಪರಿಶೀಲನೆ ನಡೆಸಿ, ಪೆಲಿಕಾನ್ ಗಳು ಹಕ್ಕಿ ಜ್ವರದಿಂದ ಮೃತಪಟ್ಟಿಲ್ಲ, ಜಂತುಹುಳುಗಳಿಂದ ಮೃತಪಟ್ಟಿವೆ ಎಂಬ ಮಾಹಿತಿ ನೀಡಿದ್ದರು. ಜತೆಗೆ ಪೆಲಿಕಾನ್ ತಿಂದು ಉಗುಳಿದ ಮೀನನ್ನು ಪರೀಕ್ಷೆ ಮಾಡಿದಾಗ ಅದರಲ್ಲಿ ಜಂತುಹುಳುಗಳು ಕಂಡು ಬಂದಿದ್ದವು.
ಇದೀಗ ಮತ್ತೆ ಕೆರೆಯಂಗಳಗಳಲ್ಲಿ ಪೆಲಿಕಾನ್ ಪಕ್ಷಿಗಳ ಸರಣಿ ಸಾವು ಸಂಭವಿಸುತ್ತಿರುವುದು ಆತಂಕ ಆವರಿಸುವಂತೆ ಮಾಡಿದೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications