ಪೌರಕಾರ್ಮಿಕನನ್ನು ಮ್ಯಾನ್ ಹೋಲಿಗಿಳಿಸಿದ ಗ್ರಾಪಂ ಅಧ್ಯಕ್ಷೆ ಅಮಾನತು
ಮೈಸೂರು, ಜೂನ್ 9: ಇಡೀ ರಾಜ್ಯವೇ ಅಸಹ್ಯ ಪಡಿಸುವಂತಹ ಪೌರಕಾರ್ಮಿಕನನ್ನ ಬಲವಂತವಾಗಿ ಮ್ಯಾನ್ ಹೋಲ್ ಗೆ ಇಳಿಸಿ ಸ್ವಚ್ಛಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಮುಂಡಿಬೆಟ್ಟ ಗ್ರಾಪಂ ಅಧ್ಯಕ್ಷೆ ಗೀತಾ ಹಾಗೂ ಪಿಡಿಓ ಆನಂದ್ ವಿರುದ್ಧ ದೂರು ದಾಖಲಾಗಿದೆ. ಪ್ರಕರಣ ಸಂಬಂಧ ಮೈಸೂರಿನ ಸಮಾಜಕಲ್ಯಾಣ ಇಲಾಖೆ ನಿರ್ದೇಶಕ ಡಿ.ಜಿ.ಗುರುಶಾಂತಪ್ಪ ಮೈಸೂರಿನ ಕೆ.ಆರ್. ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಜೂನ್ 7 ರಂದು ಪೌರಕಾರ್ಮಿಕ ಗಣೇಶ್ ಎಂಬುವವರನ್ನ ಚಾಮುಂಡಿಬೆಟ್ಟದ ಗ್ರಾಪಂ ಅಧ್ಯಕ್ಷೆ ಎಸ್.ಗೀತಾ ಹಾಗೂ ಪಿಡಿಓ ಆನಂದ್ ಬಲವಂತವಾಗಿ ಮ್ಯಾನ್ ಹೋಲ್ ಗೆ ಇಳಿಸಿ ಸ್ವಚ್ಛಗೊಳಿಸಿದ್ದ ಆರೋಪ ಕೇಳಿ ಬಂದಿತ್ತು. ಈ ಕುರಿತು ಸ್ಪಷ್ಟನೆ ನೀಡಿದ್ದ ಗ್ರಾ.ಪಂ ಅಧ್ಯಕ್ಷೆ ಗೀತಾ ನಾವು ಯಾರನ್ನೂ ಬಲವಂತವಾಗಿ ಮ್ಯಾನ್ ಹೋಲ್ ಗೆ ಇಳಿಸಿಲ್ಲ ಎಂದಿದ್ದರು.

ಅಮಾನುತು ಆದೇಶ:
ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಪಿ.ಶಿವಶಂಕರ್ ಪಿಡಿಓ ಆನಂದ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಚಾಮುಂಡಿ ಬೆಟ್ಟ ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ ಪೌರಕಾರ್ಮಿಕ ಗಣೇಶ್ ಎಂಬವರನ್ನು ಮ್ಯಾನ್ ಹೋಲ್ ಗೆ ಇಳಿಸಿ ಸ್ವಚ್ಛ ಗೊಳಿಸುವ ಕಾರ್ಯ ನಡೆಸಲಾಗಿತ್ತು. ಗಣೇಶ್ ಇಳಿಯಲ್ಲ ಎಂದಾಗ ಕೆಲಸದಿಂದ ತೆಗೆಯುತ್ತೇನೆ ಎಂಬ ಬೆದರಿಕೆಯನ್ನೂ ಹಾಕಿದ್ದರು.
ಘಟನೆಯ ಸಂಪೂರ್ಣ ವಿವರವನ್ನು ಪಡೆದ ಪಿ.ಶಿವಶಂಕರ್ ಪಿಡಿಓ ಆನಂದ್ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಇದೊಂದು ಅಮಾನವೀಯ ಕೃತ್ಯ. ಈ ರೀತಿ ನಡೆಸಿಕೊಳ್ಳಬಾರದಿತ್ತು ಎಂದಿದ್ದಾರೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಗೆ ಪತ್ರ ಬರೆದಿದ್ದು, ಇವರು ಪೌರಕಾರ್ಮಿಕನನ್ನು ನಡೆಸಿಕೊಂಡ ರೀತಿಯನ್ನು ವಿವರಿಸಿದ್ದಾರೆ ಮತ್ತು ಸೂಕ್ತ ಕ್ರಮ ಜರುಗಿಸಲು ತಿಳಿಸಿದ್ದಾರೆ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿ ಅಧಿಕಾರಿಗಳ ಪರಿಶೀಲನೆ:
ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಪ್ರಭಾ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪೌರಕಾರ್ಮಿಕ ಗಣೇಶ್ ನನ್ನನ್ನು ಬಲವಂತವಾಗಿ ಮ್ಯಾನ್ ಹೋಲ್ ಗೆ ಇಳಿಸಲಾಯಿತು. ಮ್ಯಾನ್ ಹೋಲ್ ಗೆ ಇಳಿದು ಸ್ವಚ್ಛಗೊಳಿಸದಿದ್ದರೇ ಕೆಲಸದಿಂದ ವಜಾಗೊಳಿಸುವುದಾಗಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಗೀತಾ, ಪಿಡಿಒ ಆನಂದ್ ನನಗೆ ಬೆದರಿಕೆ ಹಾಕಿದರು. ಹೀಗಾಗಿ ಅನಿವಾರ್ಯವಾಗಿ ಮ್ಯಾನ್ ಹೋಲ್ ಗೆ ಇಳಿದು ಸ್ವಚ್ಛಗೊಳಿಸಿದೆ. ನನಗೆ ಸರಿಯಾಗಿ ಸಂಬಳವನ್ನು ನೀಡುತ್ತಿಲ್ಲ ಎಂದಿದ್ದಾರೆ.
-
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications