ವೃದ್ಧನನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಶಾಸಕ ಸೋಮಶೇಖರ್
ಮೈಸೂರು ,ಜುಲೈ 31: ರಸ್ತೆ ಬದಿ ಅಸ್ವಸ್ಥಗೊಂಡು ಕುಸಿದಿದ್ದ ವ್ಯಕ್ತಿಯೊಬ್ಬರನ್ನು ಕೃಷ್ಣರಾಜ ಕ್ಷೇತ್ರದ ಶಾಸಕ ಎಂ.ಕೆ.ಸೋಮಶೇಖರ್ ಕೆ.ಆರ್.ಆಸ್ಪತ್ರೆಗೆ ದಾಖಲಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ನಗರದ ಅಗ್ರಹಾರ ಸಮೀಪದ ಪಾತಾಳ ಆಂಜನೇಯ ದೇವಾಲಯದ ಬಳಿ ಸ್ಥಳೀಯರು ಎನ್ನಲಾದ ದ್ವಾರಕನಾಥ್ ಎಂಬವರು ತೀವ್ರ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದರು. ಈ ವೇಳೆ ಕರಗ ಮಹೋತ್ಸವದಲ್ಲಿ ಭಾಗವಹಿಸಿ ತೆರಳುತ್ತಿದ್ದ ಶಾಸಕ ಎಂ.ಕೆ.ಸೋಮಶೇಖರ್ ಅವರು ಅಸ್ವಸ್ಥ ವೃದ್ಧರನ್ನು ಗಮನಿಸಿದ್ದರು.

ಕೂಡಲೇ ವೃದ್ಧರನ್ನು ಕೆ.ಆರ್.ಆಸ್ಪತ್ರೆಗೆ ದಾಖಲಿಸುವ ವ್ಯವಸ್ಥೆ ಮಾಡಿದ್ದಾರೆ. ಅಲ್ಲದೇ ತಕ್ಷಣ ಆಸ್ಪತೆಯ ಸಿಬ್ಬಂದಿಗೆ ಕರೆ ಮಾಡಿ ಅಸ್ವಸ್ಥರಿಗೆ ಸೂಕ್ತ ಚಿಕಿತ್ಸೆ ನೀಡುವಂತೆಯೂ ತಿಳಿಸಿದ್ದಾರೆ. ಈ ಮೂಲಕ ತಾವು ಕೂಡ ಸಮಾಜ ಕಾರ್ಯದಲ್ಲಿ ತೊಡಗಿ ಇತರರಿಗೆ ಮಾದರಿಯಾಗಿದ್ದಾರೆ.












Click it and Unblock the Notifications