ತಾಯಿ ಚಾಮುಂಡೇಶ್ವರಿ ದೇವಿಗೆ ಶಕ್ತಿಯೇ ಇಲ್ವಂತೆ!
ಮೈಸೂರು, ಆಗಸ್ಟ್ 20: ವಿಶ್ವ ವಿಖ್ಯಾತ ಮೈಸೂರು ದಸರಾ ಸಂಭ್ರಮಕ್ಕೂ ಮುನ್ನ ವಿವಾದ ಬುಗಿಲೆದ್ದಿದೆ. ಚಾಮುಂಡಿ ದೇವಿಯ ಶಕ್ತಿ ಕುರಿತಾಗಿ ಅನುಮಾನ ವ್ಯಕ್ತವಾಗಿದೆ.
ದಸರಾಗೂ ಮುನ್ನವೇ ಚಾಮುಂಡೇಶ್ವರಿ ದೇವಿಯ ಶಕ್ತಿಯ ವಿಚಾರವಾಗಿ ಚಿಂತಕ ಶೆಲ್ವಪಿಲೈ ಅಯ್ಯಂಗಾರ್ ವಿವಾದವೊಂದನ್ನು ಹುಟ್ಟು ಹಾಕಿದ್ದಾರೆ.

"ಚಾಮುಂಡೇಶ್ವರಿ ದೇವಿ ಮೂರ್ತಿಗೆ ಶಕ್ತಿ ಇಲ್ಲ. ಅದು ಕೇವಲ ಅರಮನೆಯ ಬೊಂಬೆ ತೊಟ್ಟಿಯಲ್ಲಿರುವ ಬೊಂಬೆ ಮಾತ್ರ. ಸರ್ಕಾರ ಕೇವಲ ತನ್ನ ಸಾಧನೆ ಸಾರುವ ಉತ್ಸವ ಮಾತ್ರ ಮಾಡುತ್ತಿದೆ. ಸಾಂಪ್ರದಾಯಿಕ ಅಥವಾ ಧಾರ್ಮಿಕ ದಸರಾ ಎನ್ನುವುದರಲ್ಲಿ ಅರ್ಥವೇ ಇಲ್ಲ ಎಂಬ ವಿವಾದಾತ್ಮಕ ಹೇಳಿಕೆ ನೀಡಿ ಚರ್ಚೆ ಗ್ರಾಸವಾಗಿದ್ದಾರೆ.
ಶಕ್ತಿದೇವತೆ ಎಂದೇ ಕರೆಯಲ್ಪಡುವ ದಸರಾ ಅಂಬಾರಿ ಮೇಲಿನ ದೇವಿಗೆ ಯಾವುದೇ ಪ್ರಾಣ ಪ್ರತಿಷ್ಠಾಪನೆ ಆಗಿಲ್ಲ. ಪ್ರಾಣ ಪ್ರತಿಷ್ಠಾಪನೆಯನ್ನೇ ಮಾಡಿಲ್ಲವೆಂದಾದರೆ ಶಕ್ತಿಯ ಗಮನ ಹೇಗಾಗುತ್ತದೆ? ಅಂಬಾರಿ ಮೇಲಿನ ಉತ್ಸವ ಮೂರ್ತಿಗೆ ಶಕ್ತಿ ತುಂಬುವ ಕೆಲಸ ಕೂಡ ಆಗಿಲ್ಲ? ಮೂರ್ತಿಗೆ ಪ್ರಾಣ ಪ್ರತಿಷ್ಠಾಪನೆಯನ್ನೇ ಮಾಡದೆ ಅಂಬಾರಿ ಉತ್ಸವ ನಡೆಯುತ್ತಿದೆ.
ಸಾಂಪ್ರದಾಯಿಕ ದಸರಾವನ್ನು ರಾಜ ವಂಶಸ್ಥರು ಮಾಡುತ್ತಿದ್ದಾರೆ. ಆದ್ರೆ, ಪ್ರಾಣ ಪ್ರತಿಷ್ಠಾಪನೆ ಮಾಡದ ಮೂರ್ತಿ ಉತ್ಸವ ಮೂರ್ತಿಯಾಗಿದೆ. ಈ ಭಾವನೆ ಜನರಲ್ಲೂ ಮೂಡಿದೆ ಎಂದಿದ್ದಾರೆ.
ಇತಿಹಾಸ ತಜ್ಙರದ್ದು ಇದೇ ಅಭಿಪ್ರಾಯ :ಇನ್ನು ಈ ವಿವಾದಕ್ಕೆ ಮತ್ತೊಬ್ಬರು ಸಹ ದನಿಗೂಡಿಸಿದ್ದಾರೆ. ಖ್ಯಾತ ಇತಿಹಾಸ ತಜ್ಞ ಪ್ರೊ.ನಂಜರಾಜ ಅರಸ್ ಕೂಡಾ ಶೆಲ್ವಪಿಲೈ ಅಯ್ಯಂಗಾರ್'ಅವರ ಈ ಅಭಿಪ್ರಾಯವನ್ನು ಒಪ್ಪಿಕೊಂಡಿದ್ದಾರೆ.
ದಸರಾಗೂ ಮುನ್ನವೇ ಚಾಮುಂಡೇಶ್ವರಿ ದೇವಿಯ ಶಕ್ತಿಯ ವಿಚಾರವಾಗಿ ಶೆಲ್ವಪಿಲೈ ಅಯ್ಯಂಗಾರ್ ನುಡಿದ ಈ ಮಾತುಗಳು ಭಾರೀ ಚರ್ಚೆಯೊಂದಕ್ಕೆ ಅವಕಾಶ ಮಾಡಿಕೊಟ್ಟಿದೆ.
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ?












Click it and Unblock the Notifications