21 ವರ್ಷದಿಂದಲೂ ರಕ್ತದಾನ; ಸುತ್ತೂರು ಜಾತ್ರೆಯಲ್ಲಿ ಗಮನ ಸೆಳೆದ ವ್ಯಕ್ತಿ
ಮೈಸೂರು, ಜನವರಿ 25: ಸುತ್ತೂರಿನಲ್ಲಿ ಈಗ ಜಾತ್ರೆ ಸಂಭ್ರಮ. ಹತ್ತಾರು ಕಡೆಗಳಿಂದ ಜಾತ್ರೆ ಕಣ್ತುಂಬಿಕೊಳ್ಳಲೆಂದೇ ಬಂದವರಿಗೆ ನಿನ್ನ ಮತ್ತೊಂದು ಆಕರ್ಷಣೆ ಎದುರಾಗಿತ್ತು. "ರಕ್ತದಾನ ಜೀವದಾನ" ಎಂಬುದನ್ನು ಸಾರಲು ದೇಹದ ಮೇಲೆ ಭಿನ್ನವಾಗಿ ಪೇಂಟಿಂಗ್ ಮಾಡಿಕೊಂಡಿದ್ದ ವ್ಯಕ್ತಿ ಜಾತ್ರೆಯ ಆಕರ್ಷಣೆಗಳಲ್ಲಿ ಒಂದಾಗಿದ್ದರು.
ಮುಖದಲ್ಲಿ ರಾಷ್ಟ್ರಧ್ವಜವನ್ನು ಚಿತ್ರಿಸಿಕೊಂಡು, ದೇಹದ ಮೇಲೆ ಹೃದಯ ಹಾಗೂ ರಕ್ತನಾಳಗಳ ಚಿತ್ರ ಬಿಡಿಸಿಕೊಂಡಿದ್ದರು. ಮೈ ಮೇಲೆಲ್ಲ 'ರಕ್ತದಾನ ಜೀವದಾನ' ಎಂದು ಬರೆಸಿಕೊಂಡಿದ್ದ ವ್ಯಕ್ತಿ ನಿನ್ನೆ ಜಾತ್ರೆಯಲ್ಲಿ ಎಲ್ಲರ ಗಮನ ಸೆಳೆದರು. ಸಮಾಜ ಸೇವಕ, 50 ವರ್ಷದ ಶಿವಕುಮಾರ್ ಎಂಬವರು ರಕ್ತದಾನದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಿದ ಪರಿ ಇದಾಗಿತ್ತು.

ಮೂಲತಃ ದಾವಣಗೆರೆಯವರಾದ ಮಹಡಿಮನೆ ಶಿವಕುಮಾರ್ ರಕ್ತದಾನದ ಮಹತ್ವವನ್ನು ಸಾರಿದ್ದು ವಿಭಿನ್ನವಾಗಿತ್ತು. ಈ ಬಗ್ಗೆ ಮಾತನಾಡಿದ ಅವರು, "ರಕ್ತದಾನ ಶ್ರೇಷ್ಠ ದಾನ. ಆದರೆ ಹೆಚ್ಚಿನ ಜನರು ರಕ್ತದಾನಕ್ಕೆ ಮುಂದಾಗುವುದಿಲ್ಲ. ಅವರಲ್ಲಿ ಜಾಗೃತಿ ಮೂಡಿಸುವುದು ನನ್ನ ಉದ್ದೇಶ. ಕಳೆದ 21 ವರ್ಷಗಳಿಂದಲೂ ರಕ್ತದಾನ ಮಾಡುತ್ತಿದ್ದೇನೆ. 70ಕ್ಕೂ ಹೆಚ್ಚು ಬಾರಿ ನಾನು ರಕ್ತ ಕೊಟ್ಟಿದ್ದೇನೆ. ನನ್ನ ಆರೋಗ್ಯ ವೃದ್ಧಿಸಿದೆಯೇ ಹೊರತು ಅನಾರೋಗ್ಯ ಉಂಟಾಗಿಲ್ಲ. ರಕ್ತದಾನದಿಂದ ಯಾವುದೇ ತೊಂದರೆ ಉಂಟಾಗದು" ಎಂದರು.

'ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗುವುದು ನನ್ನ ಉದ್ದೇಶ. ರಕ್ತದಾನದ ಬಗ್ಗೆ ಜಾಗೃತಿ ಮೂಡಿಸಲು ವಿಶ್ವಪರ್ಯಟನೆ ಮಾಡುವ ಗುರಿಯೂ ಇದೆ' ವಿಶ್ವಪರ್ಯಟನೆ ಮಾಡಲು ವಾಹನ ಬೇಕಾಗಿದೆ. ಸರ್ಕಾರ ಓಡಾಡಲು ಒಂದು ವಾಹನ, ಒಂದು ಲ್ಯಾಪ್ ಟಾಪ್ ಕೊಟ್ಟರೆ ಅನುಕೂಲವಾಗಲಿದೆ ಎಂದು ಸರ್ಕಾರಕ್ಕೆ ಮನವಿ ಮಾಡಿದರು.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications