ಸುಮಲತಾ ಪರ ಪ್ರಚಾರಕ್ಕೆ ಹೋಗುವುದಿಲ್ಲ ಎಂದ ಶಿವರಾಜ್ ಕುಮಾರ್
ಮೈಸೂರು, ಮಾರ್ಚ್ 25:ನಾನು ನಟಿ ಸುಮಲತಾ ಪರ ಪ್ರಚಾರಕ್ಕೆ ಹೋಗುವುದಿಲ್ಲ. ನನಗೆ ಅವರು ಬೆಂಬಲ ನೀಡಿ ಎಂದು ಕೇಳಿಲ್ಲ. ಅವರು ಬನ್ನಿ ಎಂದು ಆಹ್ವಾನ ನೀಡಿದರೂ ನಾನು ಹಿಂದೆ ಸರಿಯುತ್ತೇನೆ ಎಂದು ನಟ ಶಿವರಾಜ್ ಕುಮಾರ್ ತಿಳಿಸಿದರು.
ಕರ್ನಾಟಕ ಲೋಕಸಭಾ ಕ್ಷೇತ್ರಗಳ 'ಎ ಟು ಜೆಡ್' ಮಾಹಿತಿ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮಗೆ ದೇವರು ಬಡವ ನೀನು ಮಡಗಿದ ಹಾಗೆ ಇರು ಅಂತ ಹೇಳಿದ್ದಾನೆ. ರಾಜಕೀಯಕ್ಕೆ ಹೋಗಲು ತುಂಬಾ ಬುದ್ಧಿ ಬೇಕು. ನಾನು ಅಷ್ಟು ಬುದ್ಧಿ ವಂತ ಅಲ್ಲ. ಸ್ವಲ್ಪ ಬುದ್ಧಿ ಬಂದಿದೆ. ಅದನ್ನು ಕಾಪಾಡಿಕೊಳ್ಳುತ್ತೇನೆ. ರಾಜಕೀಯ ದಯವಿಟ್ಟು ಬೇಡ ಸಾರ್. ಕಾವೇರಿ ಗಲಾಟೆಯಲ್ಲೂ ಜನ ನಟರು ಬರಲಿಲ್ಲ ಎಂದು ಕೇಳುತ್ತಾರೆ. ಆದರೆ ಅಲ್ಲಿ ಬಂದು ಏನು ಮಾಡೋಣ ಹೇಳಿ ಎಂದು ಪ್ರಶ್ನಿಸಿದರು.
ಹೋರಾಟ ನಡೆಯುವಾಗಲೆಲ್ಲಾ ನಾವು ಅಲ್ಲಿ ಬಂದೆವೆಂದರೆ, ಜನ ಸೆಲ್ಫಿಗೆ ಮುಗಿ ಬೀಳುತ್ತಾರೆ. ಕೆಲವು ಬಾರಿ ಎಷ್ಟು ಬೈದರೂ, ಕೋಪ ಮಾಡಿಕೊಂಡರೂ ಅದು ನಿಲ್ಲಲ್ಲ. ನಮಗೆ ಅದು ಬೇಸರ ತರಿಸುತ್ತದೆ ಎಂದು ಶಿವರಾಜ್ ಕುಮಾರ್ ತಿಳಿಸಿದರು.

ಶಿವಮೊಗ್ಗಕ್ಕೂ ಪ್ರಚಾರಕ್ಕೆ ಹೋಗುವುದಿಲ್ಲ. ಅಂದು ನನ್ನ ಪತ್ನಿಗಾಗಿ ಪ್ರಚಾರಕ್ಕೆ ಹೋಗಿದ್ದೆ. ಈಗ ಮಧು ಅವರ ಪರವಾಗಿ ಗೀತಾ ಪ್ರಚಾರಕ್ಕೆ ಹೋಗಬಹುದು ಎಂದು ತಮ್ಮ ರಾಜಕೀಯ ನಿಲುವನ್ನು ಸ್ಪಷ್ಟಪಡಿಸಿದರು.
ಮಂಡ್ಯದಲ್ಲಿ ಸುಮಲತಾಗೆ ಸಪೋರ್ಟ್ ಮಾಡ್ತಾರ ಶಿವಣ್ಣ?
ಇನ್ನು ನಟಿ ವಿಜಯಲಕ್ಷ್ಮಿ ಅವರು ಸಹಾಯ ಮಾಡುವಂತೆ ವಿಡಿಯೋದಲ್ಲಿ ತಿಳಿಸಿರುವ ಬಗ್ಗೆ ಪ್ರತಿಕ್ರಿಯಿಸಿ, ವಿಜಯಲಕ್ಷ್ಮಿ ಒಬ್ಬರಿಗೆ ಸಹಾಯ ಮಾಡುತ್ತಾ ಕೂರಲು ಸಾಧ್ಯವಿಲ್ಲ. ಎಲ್ಲರಿಗೂ ಸಹಾಯ ಮಾಡುತ್ತಿರುತ್ತೇನೆ. ಒಂದು ಕೈಯ್ಯಲ್ಲಿ ಮಾಡಿದ ಸಹಾಯ ಮತ್ತೊಂದು ಕೈಗೆ ಗೊತ್ತಾಗದ ರೀತಿ ಇರಬೇಕು. ಅವರಿಗೆ ಸಹಾಯ ಮಾಡುವ ಅಗತ್ಯ ಇಲ್ಲ. ಅವರ ಮನಸ್ಸಿಗೆ ಏನೇನು ಬರುತ್ತೋ ಮಾತಾಡಲಿ, ಅವರು ಕೇಳಿರುವುದರಲ್ಲಿ ನ್ಯಾಯ ಇದೆಯೋ ಇಲ್ಲವೋ ನೋಡಬೇಕು. ನಾವು ಸರಿನೋ, ಅವರು ಸರಿನೋ ದೇವರೇ ನೋಡಬೇಕು. ಎಲ್ಲರಿಗೂ ಕಷ್ಟ ಬರುತ್ತೆ.ಎಲ್ಲಾ ಇದ್ದು ಬೇಡೋದು ಸರಿಯಲ್ಲ ಎಂದು ಶಿವರಾಜ್ ಕುಮಾರ್ ಹೇಳಿದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications