ಚಾಮುಂಡಿ ಬೆಟ್ಟ ಕಾಲ್ನಡಿಗೆಯಲ್ಲಿ ಹತ್ತಿದ ಕರಂದ್ಲಾಜೆ, ಸಿದ್ದು ವಿರುದ್ಧ ಸಿಟ್ಟು
ಮೈಸೂರು, ಜುಲೈ 14 : ಪರಪ್ಪನ ಅಗ್ರಹಾರದಲ್ಲಿ ಅಕ್ರಮ ಚಟುವಟಿಕೆ ಹಿನ್ನೆಲೆಯಲ್ಲಿ ತಪ್ಪಿತಸ್ಥರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಲಿ ಎಂದು ಸಿದ್ದರಾಮಯ್ಯ ವಿರುದ್ಧ ಸಂಸದೆ ಶೋಭಾ ಕರಂದ್ಲಾಜೆ ವಾಕ್ ಪ್ರಹಾರ ನಡೆಸಿದರು.
ಮೈಸೂರಿನಲ್ಲಿ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಶುಕ್ರವಾರ ಕಾಲ್ನಡಿಗೆಯಲ್ಲಿ ಬೆಟ್ಟ ಹತ್ತುವ ವೇಳೆ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಮುಸ್ಲಿಂ ಅಂತ ಪದ ಬಳಸಲು ಸಿಎಂಗೆ ಭಯವಿದೆ. ಕೇವಲ ವೋಟು ಬ್ಯಾಂಕ್ ರಾಜಕಾರಣ ಮಾಡ್ತಿದ್ದಾರೆ ಎಂದು ಹೇಳಿದ್ದಾರೆ.

ಚಾಮುಂಡಿ ಸನ್ನಿಧಿಯಲ್ಲಿರುವ ಸಿಎಂಗೆ ಚಾಮುಂಡಿ ತಾಯಿ ಅಪರಾಧಿಗಳನ್ನು ಬಂಧಿಸುವ ಶಕ್ತಿ ನೀಡಲಿ. ಹಿಂದೂಗಳ ರಕ್ಷಣೆ ಮಾಡಲಿ ಎಂದು ಬೇಡುತ್ತೇನೆ ಎಂದು ತಿಳಿಸಿದರು.
ಮಂಗಳೂರು ಗಲಭೆಯನ್ನು ಹತ್ತಿಕ್ಕಲು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ತಾಯಿ ಚಾಮುಂಡೇಶ್ವರಿ ಶಕ್ತಿಯನ್ನು ನೀಡಲಿ. ಹಿಂದೂಗಳು ಗಲಭೆ ಮಾಡುತ್ತಿದ್ದಾರೆ ಎಂದು ಹೇಳುತ್ತಿದ್ದಾರೆ. ಎಲ್ಲಿಯೂ ಮುಸ್ಲಿಂ ಅಂತ ಹೇಳುತ್ತಿಲ್ಲ. ಅನ್ಯ ಧರ್ಮದವರು ಎನ್ನುತ್ತಿದ್ದಾರೆ. ಮುಸ್ಲಿಂ ಎಂದು ಹೇಳಲು ಅವರಿಗೆ ಭಯವಾಗಿದ್ದು, ಎಲ್ಲಿಯೂ ಇಂಥಹ ಪ್ರಕರಣಗಳು ಮರುಕಳಿಸಬಾರದು ಎಂದರು.

ಗೃಹ ಖಾತೆ ಅವರ ಬಳಿಯಲ್ಲಿಯೇ ಇದ್ದರೂ ಏನೂ ಕ್ರಮ ಕೈಗೊಂಡಿಲ್ಲ. ಹಿಂದಿದ್ದ ಗೃಹ ಸಚಿವರೂ ಯಾವುದೇ ಕೆಲಸವನ್ನು ಮಾಡಲಿಲ್ಲ. ದೇಶದಲ್ಲಿ ಮಳೆಯ ಅಭಾವವಾಗಿದೆ. ನಾಡಿನಲ್ಲಿಯೂ ಮಳೆಯಿಲ್ಲ. ರೈತರು ಸಂಕಷ್ಟಕ್ಕೆ ಎದುರಾಗಿದ್ದಾರೆ. ಬೆಳೆ ತೆಗೆಯಲು ಹೆಚ್ಚಿನ ಸಾಲ ಮಾಡಿಕೊಂಡು, ಬೆಳೆ ಬರದೆ, ಸಾಲ ತೀರಿಸಲಾಗದೆ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ ಎಂದರು.
ಪ್ರತಿ ವರ್ಷದಂತೆ ಈ ಬಾರಿ ಕೂಡ ಬೆಟ್ಟ ಹತ್ತುತ್ತಿರುವೆ. ನಾಡಿನ ಜನತೆ ಸುಭಿಕ್ಷವಾಗಿರಲಿ ಅಂತ ಚಾಮುಂಡಿ ತಾಯಿಗೆ ಪ್ರಾರ್ಥನೆ ಮಾಡುತ್ತೇನೆ. ರಾಜ್ಯದಲ್ಲಿ ಮಳೆ- ಬೆಳೆ ಚೆನ್ನಾಗಿ ಆಗಲಿ, ಅನ್ನದಾತನ ಸಾವು ಸಂಭವಿಸದಿರಲಿ ಅಂತ ತಾಯಿಗೆ ವಿಶೇಷ ಪೂಜೆ ಸಲ್ಲಿಸಲಿದ್ದೇನೆ ಎಂದರು.
-
Annamalai: ಅಣ್ಣಾಮಲೈ ಮತ್ತು ರಾಜಕೀಯ ಉನ್ಮಾದ: ಶಿವಕುಮಾರ್ ಮೆಣಸಿನಕಾಯಿ ಬರಹ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ?












Click it and Unblock the Notifications