ಮಾವುತರಿಗೆ ಶೋಭಾ ಕರಂದ್ಲಾಜೆಯಿಂದ ಔತಣ ಕೂಟ
Recommended Video

Mysore dasara 2017 :Shobha karandlaje says next dasara inaugurate by BSY
ಮೈಸೂರು, ಸೆಪ್ಟೆಂಬರ್ 29 : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಹಿನ್ನಲೆಯಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಇಂದು ಮಾವುತರಿಗೆ ಔತಣ ಕೂಟ ಆಯೋಜಿಸಿದ್ದರು. ಸೆ.30ರ ಶನಿವಾರ ಜಂಬೂ ಸವಾರಿ ನಡೆಯಲಿದೆ.
ಶುಕ್ರವಾರ ಅರಮನೆ ಅಂಗಳದಲ್ಲಿ ಶೋಭಾ ಕರಂದ್ಲಾಜೆ ಅವರು ಮಾವುತ, ಕಾವಾಡಿಗಳಿಗೆ ಔತಣ ಕೂಟ ಆಯೋಜಿಸಿದ್ದರು. ಶೋಭಾ ಕರಂದ್ಲಾಜೆ ಅವರು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಅವಧಿಯಿಂದಲೂ ಪ್ರತಿ ವರ್ಷ ಔತಣ ಕೂಟವನ್ನು ಆಯೋಜಿಸುತ್ತಾ ಬಂದಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಅವರು, 'ಈ ಬಾರಿ ದಸರಾ ಯಶಸ್ವಿಯಾಗಲಿ. ನಾಡಿಗೆ ಒಳಿತಾಗಲಿ ಎಂದು ಚಾಮುಂಡಿ ಬೆಟ್ಟ ಹತ್ತುತ್ತೇನೆ. ಮುಂದಿನ ದಸರಾ ಯಡಿಯೂರಪ್ಪ ನೇತೃತ್ವದಲ್ಲಿ ನಡೆಯಲಿ' ಎಂದು ವಿಶ್ವಾಸ ವ್ಯಕ್ತಪಡಿಸಿದರು.
'ಯಡಿಯೂರಪ್ಪ ನೇತೃತ್ವದಲ್ಲಿ ಮುಂದಿನ ದಸರಾ ನಡೆಯಲಿ ಎಂದು ಸಂಕಲ್ಪ ಮಾಡಿಕೊಂಡು ಬೆಟ್ಟ ಹತ್ತುತ್ತೇನೆ. ಚಾಮುಂಡೇಶ್ವರಿ ಆಶೀರ್ವಾದ ನಮ್ಮ ಮೇಲಿದೆ. ಮುಂದೆ ನಾವೇ ಅಧಿಕಾರಕ್ಕೆ ಬರುತ್ತೇವೆ' ಎಂದು ಹೇಳಿದರು.












Click it and Unblock the Notifications