ಉಪೇಂದ್ರ ಅವರನ್ನು ಬಿಜೆಪಿಗೆ ಆಹ್ವಾನಿಸಿದ ಸಂಸದ ಶ್ರೀರಾಮುಲು
ಮೈಸೂರು, ಮಾರ್ಚ್ 6 : ಕೆಪಿಜೆಪಿ ಪಕ್ಷದಲ್ಲಿ ಭಿನ್ನಮತ ಸ್ಫೋಟಗೊಂಡ ಹಿನ್ನೆಲೆ ಪಕ್ಷಕ್ಕೆ ರಾಜಿನಾಮೆ ನೀಡಿರುವ ಉಪೇಂದ್ರ ಅವರಿಗೆ ಬಿಜೆಪಿಯಿಂದ ಆಹ್ವಾನ ದೊರೆತಿದೆ. ಉಪೇಂದ್ರ ಪಕ್ಷಕ್ಕೆ ಸೇರುವುದಾದರೆ ಸ್ವಾಗತ ಇದೆ ಎಂದು ಸಂಸದ ಶ್ರೀರಾಮುಲು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಜೆಪಿ ಸಂಸ್ಥಾಪಕ ಮಹೇಶ್ ಗೌಡ ಮತ್ತು ಉಪೇಂದ್ರ ನಡುವೆ ಭಿನ್ನಾಭಿಪ್ರಾಯ ಉಂಟಾಗಿ ನಟ ಉಪೇಂದ್ರ ಕೆಪಿಜೆಪಿ ತೊರೆದಿದ್ದಾರೆ. ಈ ಸಂಬಂಧ ಪ್ರತಿಕ್ರಿಯಿಸಿರುವ ಸಂಸದ ಶ್ರೀರಾಮುಲು, 'ನಟ ಉಪೇಂದ್ರ ಬಿಜೆಪಿ ಪಕ್ಷಕ್ಕೆ ಬಂದರೆ ಅವರಿಗೆ ಸ್ವಾಗತವಿದೆ' ಎಂದಿದ್ದಾರೆ.
ಕನ್ನಡ ಚಿತ್ರರಂಗಕ್ಕೆ ಅಪಾರ ಸೇವೆ ಸಲ್ಲಿಸಿ ಸಮಾಜದ ಬಗ್ಗೆಯೂ ಕಾಳಜಿ ಹೊಂದಿರುವ ಉಪೇಂದ್ರ ಅಂತಹವರು ಪಕ್ಷಕ್ಕೆ ಬರಲಿ. ಸಮಾಜದ ಬಗ್ಗೆ ಒಳ್ಳೆಯ ಕಳಕಳಿ ಇರುವ ಪಕ್ಷಕ್ಕೆ ಬಂದರೆ ಒಳ್ಳೆಯದು ಎಂದು ಅವರು ಹೇಳಿದ್ದಾರೆ.

ಆದರೆ ರುಪ್ಪಿಸ್ನಲ್ಲಿ ಸುದ್ದಿಗೋಷ್ಠಿ ಕರೆದಿರುವ ಉಪೇಂದ್ರ ಅವರು ಹೊಸ ಪಕ್ಷ ಸ್ಥಾಪಿಸುವುದಾಗಿ ಘೋಷಿಸಿದ್ದು, ಬೇರೆ ಪಕ್ಷಕ್ಕೆ ಸೇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ಬಗ್ಗೆಯೂ ಮಾತನಾಡಿದ ಅವರು 'ಉತ್ತರ ಕರ್ನಾಟಕ ಭಾಗದಲ್ಲಿ ಬಿಜೆಪಿ ಸಂಘಟನೆಯಲ್ಲಿ ಜನಾರ್ಧನ ರೆಡ್ಡಿ ಅವರು ತೊಡಗಿಸಿಕೊಳ್ಳಲಿದ್ದಾರೆ. ಬಳ್ಳಾರಿಗೆ ಹೋಗದಂತೆ ಕೋರ್ಟ್ ನಿರ್ದೇಶನವಿರುವ ಕಾರಣ ಅವರು ಅಲ್ಲಿ ಹೋಗುವುದಿಲ್ಲ, ಬದಲಿಗೆ ಬೇರೆ ಕಡೆ ಪಕ್ಷದ ಸಂಘಟನೆ ಮಾಡಲಿದ್ದಾರೆ' ಎಂದರು.
-
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ












Click it and Unblock the Notifications